Featured
2 ದಿನದ ಹಿಂದೆ ಬಿಜೆಪಿ ಅಭ್ಯರ್ಥಿ- ಇಂದು ಕಾಂಗ್ರೆಸ್ ಸದಸ್ಯ..!

ರೈಸಿಂಗ್ ಕನ್ನಡ ವೆಬ್:
ಕೊಪ್ಪಳ: ನಾಗರಾಜ್ .Y
ಗಂಗಾವತಿ ತಾಲೂಕ ಪಂಚಾಯತ್ ಅಧ್ಯಕ್ಷ , ಉಪಾಧ್ಯಕ್ಷ ಚುನಾವಣೆಯಲ್ಲಿ ತಮ್ಮ ಸ್ವಪಕ್ಷ ಕಾಂಗ್ರೆಸ್ ಅಭ್ಯರ್ಥಿ ವಿರುದ್ದವೇ ಬಿಜೆಪಿ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ತಾಲೂಕ್ ಪಂಚಾಯತ್ ಸದಸ್ಯ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ.

ಗಂಗಾವತಿ ತಾಲೂಕು ಪಂಚಾಯತ್ ಸದಸ್ಯರಾಗಿರೋ ಫಕೀರಪ್ಪ ಗುರುವಾರ ನಡೆದ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ದಿಢೀರನೆ ಬಿಜೆಪಿ ಸೇರ್ಪಡೆಯಾಗಿ ಕೈ ಅಭ್ಯರ್ಥಿಯಾಗಿದ್ದ ಮಹಮ್ಮದ್ ರಫಿ ವಿರುದ್ದ ಪರಾಭವಗೊಂಡಿದ್ರು. ಇದಾದ ಬಳಿಕ ಸ್ವತಃ ಫಕೀರಪ್ಪನವರೇ ನನ್ನದು ತಪ್ಪಾಗಿದೆ ಎಂದು ಮಾಜಿ ಶಾಸಕ ಶಿವರಾಜ್ ತಂಗಡಗಿಯವರ ಬಳಿ ಹೇಳಿಕೊಂಡಿದ್ರು. ಇದ್ರಿಂದ ಇಂದು ಸ್ವತಃ ಮಾಜಿ ಸಚಿವ ಶಿವರಾಜ್ ತಂಗಡಗಿಯವರು, ಫಕೀರಪ್ಪನವರ ಮನೆಗೆ ತೆರಳಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ್ರು.
ಇದೇ ವೇಳೆ ಮಾತನಾಡಿದ ತಾಲೂಕು ಪಂಚಾಯತ್ ಸದಸ್ಯ ಫಕೀರಪ್ಪ, ನನ್ನನ್ನು ಒತ್ತಾಯ ಪೂರ್ವಕವಾಗಿ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಕನಕಗಿರಿ ಶಾಸಕ ಬಸವರಾಜ್ ದಡೆಸೂಗೂರ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ನಮ್ಮ ಪಕ್ಷದ ಅಭ್ಯರ್ಥಿಯ ವಿರುದ್ದ ಚುನಾವಣೆ ಎದುರಿಸಲು ಹೇಳಿದ್ರು. ನಾನು ಮಾಡಿದ್ದು ತಪ್ಪಾಗಿದೆ. ನಾನು ಸಾಯೋವರೆಗೂ ಪಕ್ಷ ಬಿಡಲ್ಲ. ನಡೆದಿದ್ದೆಲ್ಲ ಕೆಟ್ಟ ಗಳಿಗೆ ಎಂದು ಹೇಳಿದರು. ಈ ಸಂಧರ್ಭದಲ್ಲಿ ಮಾಜಿ ಸಚಿವರಾದ ಶಿವರಾಜ್ ತಂಗಡಗಿ, ಎಪಿಎಂಸಿ ಸದಸ್ಯ ರಡ್ಡಿ ಶ್ರೀನಿವಾಸ, ಜಿಲ್ಲಾಪಂಚಾಯತ್ ಸದಸ್ಯ ಅಮರೇಶ ಗೋನಾಳ್, ಕಾಂಗ್ರೆಸ್ ಮುಖಂಡರಾದ ಪ್ರಭಾಕರ್, ಲೋಕೇಶಪ್ಪ,ಮಂಜುನಾಥ , ಬೀರಲಿಂಗಪ್ಪ, ಹನುಮೇಶ ಮತ್ತಿತರಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?