ರೈಸಿಂಗ್ ಕನ್ನಡ:
ಯಾದಗಿರಿ:
ಜಿಲ್ಲೆಯ ಎಲ್ಲಾ ಮತಕ್ಷೇತ್ರಗಳ ನಗರ, ಪಟ್ಟಣಗಳಲ್ಲಿ ಒಳಚರಂಡಿ ಮತ್ತು ಕುಡಿಯುವ ನೀರಿನ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡಿ, ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ್ ಸೂಚಿಸಿದರು. ಯಾದಗಿರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಜಿಲ್ಲಾ ನಗರಾಭಿವೃದ್ಧಿ ಕೋಶಕ್ಕೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬೈರತಿ ಬಸವರಾಜ್ ಅಧಿಕಾರಿಗಳಿಗೆ ಸೂಚಿಸಿದ್ರು.
ಜಿಲ್ಲೆಯಲ್ಲಿ ಒಳಚರಂಡಿ ಮತ್ತು ಕುಡಿಯುವ ನೀರಿನ ಕಾಮಗಾರಿಗಳ ಅನುಷ್ಠಾನಕ್ಕೆ ಸಮಸ್ಯೆಗಳಿದ್ದಲ್ಲಿ ಗಮನಕ್ಕೆ ತಂದು ಪರಿಹರಿಕೊಳ್ಳಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ಸಲ್ಲದು. ಈಗಾಗಲೇ ಕೈಗೊಂಡಿರುವ ಕಾಮಗಾರಿಗಳು ಕಾಲಮಿತಿಯಲ್ಲಿ ಪ್ರಗತಿ ಸಾಧಿಸದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸುರಪುರ, ಕೆಂಭಾವಿ, ಕಕ್ಕೇರಾ ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಸಂಬಂಧ ಅಂದಾಜು ಪ್ರತಿ ತಯಾರಿಕಾ ಹಂತದಲ್ಲಿದೆ. ಅದೇ ರೀತಿ ಬೇರೆ ಮತಕ್ಷೇತ್ರಗಳಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ಕಾಮಗಾರಿಗಳ ಅಂದಾಜು ಪಟ್ಟಿಗಳನ್ನು ತಯಾರಿಸಲು ಮುಖ್ಯ ಇಂಜಿನಿಯರ್ ದಿನೇಶ್ ಅವರಿಗೆ ಸೂಚಿಸಿದರು. ನಗರೋತ್ಥಾನದಲ್ಲಿ ನೀರು ಸರಬರಾಜಿಗಾಗಿ 50 ಕೋಟಿ ರೂ. ಅನುಮೋದನೆ ಆಗಿದೆ. ಈ ಪೈಕಿ ಈಗಾಗಲೇ 20 ಕೋಟಿ ಬಿಡುಗಡೆಯಾಗಿದೆ. ಅಲ್ಲದೇ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 9 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ದಿನೇಶ್ ಅವರು ಮಾಹಿತಿ ನೀಡಿದರು.
ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರ ಇನ್ನೂ ಹೆಚ್ಚಿನ ಬಡಾವಣೆಗಳನ್ನು ನಿರ್ಮಾಣ ಮಾಡುವ ಮುಖೇನ ಇಲ್ಲಿನ ನಾಗರಿಕ ನಿವೇಶನಗಳನ್ನು ಹೆಚ್ಚಿಸಬೇಕು. ನಗರಾಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಹೆಚ್ಚು ಆದಾಯವನ್ನು ಗಳಿಸಿ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಪನ್ಮೂಲವನ್ನು ಕ್ರೂಢೀಕರಿಸಬೇಕು ಎಂದು ಪ್ರಾಧಿಕಾರದ ಆಯುಕ್ತರಾದ ಚಂದ್ರಶೇಖರ ಬಂಕಲಗಿ ಅವರಿಗೆ ಸಚಿವರು ನಿರ್ದೇಶನ ನೀಡಿದರು. ಪ್ರಾಧಿಕಾರದಿಂದ 50:50 ಅನುಪಾತದ ವಸತಿ ಯೋಜನೆಗಾಗಿ ಜಮೀನು ಪಡೆದು ಬಡಾವಣೆಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಬಡಾವಣೆ ಅಭಿವೃದ್ಧಿಪಡಿಸಿ ಯಾದಗಿರಿ ನಗರದ ಬಡಜನರಿಗೆ ಕಡಿಮೆ ದರದಲ್ಲಿ ನಿವೇಶನ ದೊರೆಯಲು ಕ್ರಮ ವಹಿಸಲಾಗುವುದು ಎಂದು ಚಂದ್ರಶೇಖರ ಬಂಕಲಗಿ ಅವರು ತಿಳಿಸಿದರು.
ಜಿಲ್ಲೆಯಲ್ಲಿನ ಪೌರಕಾರ್ಮಿಕರ ನೇಮಕಾತಿ ಮತ್ತು ಅವರ ಸಮಸ್ಯೆಗಳನ್ನು ಪೌರಾಡಳಿತ ಸಚಿವರ ಗಮನಕ್ಕೆ ತರಲಾಗುವುದು ಎಂಬುದಾಗಿ ಈ ಸಂದರ್ಭದಲ್ಲಿ ತಿಳಿಸಿದ ಸಚಿವರು, ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಜನಪ್ರತಿನಿಧಿಗಳ ಮಾರ್ಗದರ್ಶನದಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮಾತನಾಡಿ, ಯಾದಗಿರಿ ಕೆ. ಗ್ರಾಮದಲ್ಲಿರುವ ಸ.ನಂ.431, 432, 433 ಮತ್ತು 434 ಗಳಲ್ಲಿಯ ಒಟ್ಟು 159 ಎಕರೆ 12 ಗುಂಟೆ ಪ್ರದೇಶದ ದೊಡ್ಡ ಕೆರೆಯನ್ನು ಅಭಿವೃದ್ಧಿಪಡಿಸುವ ಸಂಬಂಧ ಡಿ.ಪಿ.ಆರ್. ವಿಸ್ತೃತ ಯೋಜನಾ ವರದಿ ತಯಾರಿಸಲು ಇ-ಪ್ರೊಕ್ಯೂರ್ಮೆಂಟ್ ಮೂಲಕ ಟೆಂಡರ್ ಕರೆಯಲಾಗಿದೆ. ಕೆರೆ ಅಭಿವೃದ್ಧಿಗಾಗಿ ಪ್ರಾಧಿಕಾರದಲ್ಲಿರುವ 4 ಕೋಟಿ ರೂ. ಸಾಕಾಗುವುದಿಲ್ಲ. ಪ್ರಯುಕ್ತ ವಿವಿಧ ಇಲಾಖೆ ಹಾಗೂ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಕೆರೆ ಅಭಿವೃದ್ಧಿ ಪಡಿಸುವುದಾಗಿ ಸಚಿವರ ಗಮನಕ್ಕೆ ತಂದರು.
ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ, ನರಸಿಂಹ ನಾಯಕ (ರಾಜೂಗೌಡ), ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ ಅವರು ಉಪಸ್ಥಿತರಿದ್ದರು.
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್