Featured
SSLC ಪರೀಕ್ಷೆಗೆ ಅಂತಿಮ ಸಿದ್ಧತೆ- ರಾಯಚೂರಿನಲ್ಲಿ ಪರೀಕ್ಷೆ ಬರೆಯಲಿರುವ 3400 ವಿದ್ಯಾರ್ಥಿಗಳು

ರೈಸಿಂಗ್ ಕನ್ನಡ:
ರಾಯಚೂರು:
ಕೊರೋನಾ ಅಬ್ಬರದ ನಡುವೆಯೇ ಗುರುವಾರದಿಂದ ಆರಂಭವಾಗಲಿರುವ SSLC ಪರೀಕ್ಷೆಗೆ ರಾಯಚೂರು ಜಿಲ್ಲಾ ಶಿಕ್ಷಣ ಇಲಾಖೆ ಸಿದ್ದವಾಗಿದೆ. ರಾಯಚೂರು ಜಿಲ್ಲೆಯಲ್ಲಿ ಒಟ್ಟು 3400 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೊರೋನ ಭಯ ಮುಕ್ತವಾಗಿ ಪರೀಕ್ಷೆ ಬರೆಯಲು ಇಲಾಖೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ B.H ಗೋನಾಳ ತಿಳಿಸಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೊರೋನಾ ಅಬ್ಬರ ತಗ್ಗಿದ್ದರೂ, ಜನರಲ್ಲಿ ಭಯದ ವಾತಾವರಣ ಕಡಿಮೆಯಾಗಿಲ್ಲ. ಈ ಭಯದ ವಾತಾವರಣ ಮಧ್ಯದಲ್ಲಿಯೇ SSLC ವಿದ್ಯಾರ್ಥಿಗಳ ಪರೀಕ್ಷೆ ಆರಂಭವಾಗಲಿದೆ. ಜೂನ್ 25 ರಿಂದ ಜುಲೈ 4 ರವರೆಗೆ ನಡೆಯಲಿರುವ SSLC ಪರೀಕ್ಷೆಗಾಗಿ ಜಿಲ್ಲಾ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸರ್ವ ರೀತಿಯಲ್ಲಿ ವಿದ್ಯಾರ್ಥಿಗಳು ಕೊರೋನಾ ಭಯ ಮುಕ್ತವಾಗಿ ಪರೀಕ್ಷೆ ಬರೆಯಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಜಿಲ್ಲೆಯಲ್ಲಿ 77 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3400 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 757 ವಿದ್ಯಾರ್ಥಿಗಳು ಅನ್ಯಕೇಂದ್ರದಿಂದ ಬಂದವರು. ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಿರುವುದರಿಂದ ಸರಕಾರವು ವಲಸೆ ಬಂದ ಮಕ್ಕಳಿಗೆ ತಾವಿರುವಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಬದಲಿಸಿಕೊಂಡಿದ್ದು, ಅದರಲ್ಲಿ ಅನ್ಯ ಜಿಲ್ಲೆಯಿಂದ 271 ವಿದ್ಯಾರ್ಥಿಗಳು ಬಂದಿದ್ದು, 6 ಮಕ್ಕಳು ಅನ್ಯ ರಾಜ್ಯದಿಂದ ಬಂದು ಜಿಲ್ಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.
ಪರೀಕ್ಷಾ ಕೇಂದ್ರದ ಸುತ್ತಲು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದ್ದು, ಪರೀಕ್ಷಾ ಕೇಂದ್ರದಿಂದ 200 ಮೀಟರ್ ದೂರದಲ್ಲಿ ಬ್ಯಾರಿಕೇಡ್ ಹಾಕಿ ಪಾಲಕರನ್ನು ತಡೆದು ಕೇವಲ ವಿದ್ಯಾರ್ಥಿಗಳನ್ನು ಮಾತ್ರ ಪರೀಕ್ಷಾ ಕೇಂದ್ರದ ಒಳಗೆ ಬರಲು ಅವಕಾಶ ಮಾಡಿಕೊಡಲಾಗುವುದು. ಪರೀಕ್ಷೆಗೆ ಬರುವ ಪ್ರತಿಯೊಬ್ಬ ವಿದ್ಯರ್ಥಿಗೂ ಸಾಕಷ್ಟು ತಪಾಸಣೆ, ಮಾಡಿ ಮಾಸ್ಕ್ ವಿತರಿಸಿ, ಸ್ಯಾನಿಟೈಸ್ ಮಾಡಲಾಗುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆ ವಿವಿಧ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಶಿಕ್ಷಣ ಇಲಾಖೆ ತಯಾರಿಯನ್ನು ಮಾಡಿಕೊಂಡಿದೆ. ಪರೀಕ್ಷೆಗೆ ಯಾವುದೇ ರೀತಿಯ ಅಡ್ಡಿ ಆತಂಕ ಇಲ್ಲದೇ ನಡೆಸಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಹಕಾರವನ್ನು ಪಡೆಯಲಾಗಿದೆ.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಕರ್ನಾಟಕದಲ್ಲಿ ಕೊರೋನಾ ಮಹಾ ಸ್ಫೋಟ. ದೆಹಲಿ ಮೀರಿಸುತ್ತಾ ಬೆಂಗಳೂರು.?
ಅಕ್ಟೋಬರ್ ಬಳಿಕ ರಾಜ್ಯದಲ್ಲಿ ಮತ್ತೆ ಕೊರೋನಾ ಏರಿಕೆ : ಒಮಿಕ್ರಾನ್ ಅಲರ್ಟ್..!