Connect with us

Featured

ಕೋವಿಡ್​​ 19 ಸ್ಥಿತಿಗತಿ ಕುರಿತು ಸರ್ವಪಕ್ಷ ಸಭೆ- ಹೆಚ್ಚುತ್ತಿರುವ ಪಾಸಿಟಿವ್​ ಪ್ರಕರಣಗಳಿಗೆ ಕಡಿವಾಣ ಹಾಕಲು ವ್ಯವಸ್ಥೆ

ರೈಸಿಂಗ್​ ಕನ್ನಡ:

ಬೆಂಗಳೂರು:

Advertisement

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಕುರಿತು ಬೆಂಗಳೂರಿನ ಸಚಿವರು, ಸಂಸದರು ಮತ್ತು ಶಾಸಕರ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರು ನಗರದ ಕೋವಿಡ್ 19 ನಿರ್ವಹಣೆಯ ಸ್ಥಿತಿಗತಿಯ ಕುರಿತು ಮಾಹಿತಿ ನೀಡಲಾಯಿತು.

ಬೆಂಗಳೂರಿನಲ್ಲಿ ಗುರುವಾರ ಸಂಜೆಯ ವರೆಗೆ 1207 ಸಕ್ರಿಯ ಪ್ರಕರಣಗಳಿದ್ದು, ದಿನೇ ದಿನೇ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಮನಿಸಿ, ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದೆ. ಇತರ ಮಹಾನಗರಗಳಿಗೆ ಹೋಲಿಸಿದರೆ, ಬೆಂಗಳೂರಿನಲ್ಲಿ ಕಡಿಮೆ ಪ್ರಕರಣಗಳು ವರದಿಯಾಗಿವೆ. ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಶೇ. 50 ರಷ್ಟು ಹಾಸಿಗೆಗಳನ್ನು ಮೀಸಲಿರಿಸುವ ಬಗ್ಗೆ ಆದೇಶ ಹೊರಡಿಸಲಾಗಿದೆ.

Advertisement

ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಎಲ್ಲರೂ ಭರವಸೆ ನೀಡಿದರು. ಸಭೆಯಲ್ಲಿ ಎಲ್ಲ ಶಾಸಕರು, ಸಂಸದರು ನೀಡಿರುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ, ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಸಭೆಯ ಮುಖ್ಯಾಂಶಗಳು:

  • ಕೋವಿಡ್ ನಿರ್ವಹಣೆಗೆ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬ ನೋಡಲ್ ಅಧಿಕಾರಿ ನೇಮಕ ಮಾಡುವ ಕುರಿತು ಸಲಹೆ ವ್ಯಕ್ತವಾಯಿತು. ಈ ಬಗ್ಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
  • ಪ್ರತಿ ಕ್ಷೇತ್ರದಲ್ಲಿ ಗಂಟಲ ದ್ರವ ಪರೀಕ್ಷೆಗೆ ಹೆಚ್ಚಿನ ವ್ಯವಸ್ಥೆ ಕಲ್ಪಿಸುವ ಕುರಿತು ಕ್ರಮ ವಹಿಸಲಾಗುವುದು.
  • ಕೋವಿಡ್ ನಿಂದ ಮೃತಪಟ್ಟವರ ಮೃತ ದೇಹ ಸಾಗಿಸಲು ಪ್ರತ್ಯೇಕ ಅಂಬ್ಯುಲೆನ್ಸ್ ವ್ಯವಸ್ಥೆ ಹೆಚ್ಚಿಸಲು ಕ್ರಮ ವಹಿಸಲಾಗುವುದು.
  • ರೋಗಲಕ್ಷಣ ಇಲ್ಲದೆ ಇರುವವರನ್ನು ಕ್ವಾರಂಟೈನ್ ಮಾಡಲು, ಬೆಂಗಳೂರು ನಗರದ ಹೊರವಲಯದಲ್ಲಿರುವ ಬೃಹತ್ ಕಲ್ಯಾಣ ಮಂಟಪಗಳನ್ನು ಸಹ ಬಳಸಿಕೊಳ್ಳುವ ಕುರಿತು ಸಲಹೆ ವ್ಯಕ್ತವಾಯಿತು. ಈ ನಿಟ್ಟಿನಲ್ಲಿ ಈಗಾಗಲೇ ಕ್ರಮ ವಹಿಸಲಾಗುತ್ತಿದ್ದು, ಹೋಟೆಲ್ ಗಳನ್ನು ಸಹ ಗುರುತಿಸಲಾಗಿದೆ ಎಂದು ಮಾಹಿತಿ ನೀಡಲಾಯಿತು.
  • ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆ ನೀಡುವ ಕುರಿತು ಸೂಕ್ತ ಮೇಲ್ವಿಚಾರಣೆ ನಡೆಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
  • ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಔಷಧಿಗಳನ್ನು ಮುನ್ನೆಚ್ಚರಿಕೆಯ ಕ್ರಮವಾಗಿ ವಿತರಿಸುವ ಬಗ್ಗೆ ಪರಿಶೀಲಿಸಲಾಗುವುದು
  • ಕರೋನಾ ವಾರಿಯರ್ ಗಳ ರಕ್ಷಣೆಗೆ ಸರ್ಕಾರ ಆದ್ಯತೆ ನೀಡಿದೆ.
  • ಜನರಿಗೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅರಿವು ಮೂಡಿಸಲು ಇನ್ನಷ್ಟು ಮಹತ್ವ ನೀಡಲು ತೀರ್ಮಾನಿಸಲಾಯಿತು.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ