Featured
ಚಿತ್ರದುರ್ಗಕ್ಕೆ ಕಂಟಕವಾಗ್ತಿದೆ ಬೆಂಗಳೂರು ಸಂಪರ್ಕ- ಚಳ್ಳಕೆರೆ, ಹೊಳಲ್ಕೆರೆಗೂ ಕಾಲಿಟ್ಟ ಮಹಾಮಾರಿ

ರೈಸಿಂಗ್ ಕನ್ನಡ:
ಚಿತ್ರದುರ್ಗ:

ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಎರಡು ದಿನಕ್ಕೊಮ್ಮೆ ಎರಡೆರಡು ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಹಿರಿಯೂರಿನಲ್ಲಿ ಪತ್ತೆಯಾದ ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣ ಮರೆತು ಹೋಗುವ ಮುನ್ನವೇ ಚಳ್ಳಕೆರೆ, ಹೊಳಲ್ಕೆರೆಗೂ ಟ್ಟ ಕೊರೊನಾ ಸೋಂಕು ಕಾಲಿಟ್ಟಿದೆ. ಚಳ್ಳಕೆರೆ ನಗರದ ದತ್ತಾತ್ರೇಯ ದೇವಸ್ಥಾನದ ಬೀದಿ ನಿವಾಸಿ 26 ವರ್ಷದ ಯುವಕನಿಗೆ ಕೊರೊನಾ ಅಂಟಿಕೊಂಡಿದೆ. ಬೆಂಗಳೂರಿಗೆ ಹೋಗಿ ಬಂದಿದ್ದ ಐದು ಜನರಲ್ಲಿ ಕೊರೊನಾ ಪಾಸಿಟಿವ್ ಆಗಿದೆ. ಚಿತ್ರದುರ್ಗ ಜಿಲ್ಲೆಗೆ ಬೆಂಗಳೂರು ಸಂಪರ್ಕ ಕಂಟಿವಾಗುವ ಲಕ್ಷಣ ಕಾಣ್ತಿದೆ. ಹಿರಿಯೂರಿನ ಆಜಾದ್ ನಗರ ಹಾಗು ವೇದಾವತಿ ನಗರ ಸೀಲ್ ಡೌನ್ ಆಗಿತ್ತು. ಈಗ ಚಳ್ಳಕೆರೆಯ ವಾಲ್ಮೀಕಿ ನಗರದ ದತ್ತಾತ್ರೇಯ ದೇವಸ್ಥಾನದ ರಸ್ತೆ ಸೀಲ್ ಡೌನ್ ಆಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 43 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದರೆ, ಸದ್ಯ 07 ಕೊರೊನಾ ಆಕ್ಟೀವ್ ಪ್ರಕರಣಗಳಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?