ರೈಸಿಂಗ್ ಕನ್ನಡ:
ಹರೀಶ್, ರಾಮನಗರ:
ಕೊರೊನಾವನ್ನು ದೂರಮಾಡಲು ಸರಕಾರ ಎಲ್ಲಾ ರೀತಿಯ ಕಾರ್ಯಗಳನ್ನು ಮಾಡುತ್ತಿದೆ. ಮಹಾಮಾರಿ ಕಾಟದಿಂದ ಜನರನ್ನು ರಕ್ಷಿಸಲು ಇನ್ನಿಲ್ಲದ ಸರ್ಕಸ್ ಮಾಡುತ್ತಿದೆ. ಈ ಮಧ್ಯೆ ಜನಪ್ರತಿನಿಧಿಗಳು ಕೂಡ ಕೊರೊನಾ ವಾರಿಯರ್ಸ್ ಆಗಿದ್ದಾರೆ. ರಾಮನಗರದ ಚೆನ್ನಪಟ್ಟಣ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ.ಟಿ.ಲಕ್ಷ್ಮಮ್ಮ ಕೂಡ ಕೊರೊನಾ ವಿರುದ್ಧ ತನ್ನದೇ ರೀತಿಯಲ್ಲಿ ಹೋರಾಟ ಮಾಡುತ್ತಿದ್ದಾರೆ. ಬಡವರಿಗೆ ಮಾಸ್ಕ್, ಸ್ಯಾನಿಟೈಸರ್ಗಳಂತಹ ಅವಶ್ಯ ವಸ್ತುಗಳನ್ನು ನೀಡಿ ಕೊರೊನಾದಿಂದ ದೂರ ಇರುವಂತೆ ಸಲಹೆಗಳನ್ನು ನೀಡುತ್ತಿದ್ದಾರೆ.
ಗ್ರಾಮೀಣ ಭಾಗದ ಜನರಿಗೆ ಉಚಿತ ಮಾಸ್ಕ್ ವಿತರಣೆ ಮಾಡಿ ಕೊರನಾದಿಂದ ದೂರವಿರಲು ಸಲಹೆ ನೀಡಿದ್ದಾರೆ. ಹಾಲು ಉತ್ಪಾದಕರಿಗೆ ಉಚಿತವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಿ ಸಮಾಜಮುಖಿ ಕಾರ್ಯ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶಕ್ಕೆ ಕೊರೊನಾ ಕಾಲಿಡಬಾರದು ಎಂದು ಪಣತೊಟ್ಟಿದ್ದಾರೆ. ಇದುವರೆಗೆ ಗ್ರಾಮೀಣ ಪ್ರದೇಶದಲ್ಲಿ ಲಕ್ಷಕ್ಕೂ ಹೆಚ್ಚು ಮಾಸ್ಕ್ ಅನ್ನು ಉಚಿತವಾಗಿ ವಿತರಿಸಿ, ಕೊರೋನಾ ಮಾಹಾಮಾರಿ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ.
ನಗರ ಪ್ರದೇಶದ ಜನರಿಗೆ ಸಾಕಷ್ಟ ಮಾಸ್ಕ್ ಸ್ಯಾನಿಟರಿಗಳು ಸಿಗುತ್ತವೆ. ಆದ್ರೆ ಗ್ರಾಮೀಣ ಪ್ರದೇಶಗಳ ಜನರಿಗೆ ಮಾಸ್ಕ್, ಸ್ಯಾನಿಟೈಸರ್ಗಳನ್ನು ಯಾರು ಕೂಡ ವಿತರಣೆ ಮಾಡುತ್ತಿರಲಿಲ್ಲ. ಸ್ವಂತ ಖರ್ಚಿನಿಂದ ಉಚಿತವಾಗಿ 1 ಲಕ್ಷಕ್ಕೂ ಹೆಚ್ಚು ಮಾಸ್ಕ್ ಹಾಗೂ ಸ್ಯಾನಿಟೈಸರ್ಗಳನ್ನು ವಿತರಣೆ ಮಾಡಿದ್ದೇನೆ. ಕೊರೊನಾ ಟೈಮ್ನಲ್ಲಿ ಸಮಾಜಕ್ಕೆ ನನ್ನ ಕೈಯಲ್ಲಾದ ಸಹಾಯ ಮಾಡಿದ್ದೇನೆ.
ಲಕ್ಷ್ಮಮ್ಮ ಗ್ರಾಮಾಂತರ ಭಾಗದ ಮನೆಗಳಲ್ಲಿ ತಯಾರಾದ ಮಾಸ್ಕ್ ಗಳನ್ನು ಸಂಗ್ರಹಿಸಿ, ಹಳ್ಳಿಹಳ್ಳಿಯಲ್ಲಿ ಪ್ರತಿ ಮನೆಗೂ ಮನೆಗೂ ತೆರಳಿ ಉಚಿತವಾಗಿ ಮಾಸ್ಕ್ ವಿತರಣೆ ಮಾಡಿದ್ದಾರೆ. ಇದಲ್ಲದೆಯೇ ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳಿಗೂ ಕೂಡ ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸಿ ಅವರಿಗೂ ಕೂಡ ಮಾಸ್ಕ್ ಕೊಟ್ಟಿದ್ದಾರೆ. ಲಾಕ್ಡೌನ್ನಿಂದಾಗಿ ಗ್ರಾಮೀಣ ಭಾಗದ ಜನತೆ ಮನೆಯಿಂದ ಹೊರ ಹೋಗುವುದೇ ಬಹಳ ತೊಂದರೆಯಾಗಿತ್ತು. ಮೊದಲಿಗೆ ಪ್ರತಿನಿತ್ಯ ಒಂದು ಸಾವಿರ ಮಾಸ್ಕ್ ವಿತರಣೆ ಮಾಡುತ್ತಿದ್ದರು. ಕೊರೋನಾ ಸೋಂಕು ತಡೆಗಟ್ಟುವಲ್ಲಿ ಮಾಸ್ಕ್ ತುಂಬಾ ಮುಖ್ಯವಾಗಿದೆ. ಗ್ರಾಮೀಣ ಭಾಗದ ಮಕ್ಕಳಿಗೂ ಕೂಡ ಮಾಸ್ಕ್ ವಿತರಣೆ ಮಾಡಿದ್ದಾರೆ.
ಒಟ್ಟಾರೆ ಮಹಿಳಾ ಅಧ್ಯಕ್ಷರಾದ ಕೆ.ಟಿ.ಲಕ್ಷ್ಮಮ್ಮ ಮಾಡುತ್ತಿರುವ ಸಾಮಾಜಿಕ ಕಳಕಳಿಗೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ. ಇವರ ಈ ಸೇವೆ ಇದೇ ರೀತಿ ಮುಂದುವರೆಯಲಿ ಎಂಬುದು ನಮ್ಮ ಆಶಯ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?