Featured
ದೇಶದ ಕೆಚ್ಚೆದೆಯ ವೈದ್ಯರಿಗೆ ‘ನಮೋ’ ನಮಃ – ಕೊರೊನ ವಾರಿಯರ್ಗಳಿಗೆ ಸಲಾಂ ಹೇಳಿದ ಗಣ್ಯಾತಿ ಗಣ್ಯರು

ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :
ದೇಶಾದ್ಯಂತ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನ ಆಚರಿಸಲಾಗುತ್ತಿದೆ. ಕೊರೊನಾದಂತಹ ಸಂಕಷ್ಟದ ದಿನದಲ್ಲಿ ವೈದ್ಯರ ಎಲ್ಲರ ಪಾಲಿಗೆ ದೇವರಾಗಿದ್ದಾರೆ. ಅದಕ್ಕೇನೆ ವೈದ್ಯೋ ನಾರಾಯಣ ಹರಿ ಅನ್ನೋದು. ರಾಷ್ಟ್ರೀಯ ವೈದ್ಯರ ದಿನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ, ಗಣ್ಯಾತಿ ಗಣ್ಯರು ವೈದ್ಯ ಸಮೂಹಕ್ಕೆ ಶುಭಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋ, ಕೋವಿಡ್-19 ವಿರುದ್ಧದ ಉತ್ಸಾಹಭರಿತವಾಗಿ ಹೋರಾಟ ಮಾಡುತ್ತಿರುವ ನಮ್ಮ ವೈದ್ಯರಿಗೆ ಹಾಗೂ ಅವರ ಅಸಾಧಾರಣ ಕಾರ್ಯಕ್ಕೆ ದೇಶ ಯಾವತ್ತಿಗೂ ತಲೆಬಾಗುತ್ತೆ ಎಂದಿದ್ದಾರೆ. ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಟ್ವೀಟ್ ಮಾಡಿ, ಮಾನವೀಯತೆಗೆ ನಿಸ್ವಾರ್ಥ ಸೇವೆ ಮಾಡುತ್ತಿರುವ ರಾಷ್ಟ್ರದ ಎಲ್ಲಾ ವೈದ್ಯರಿಗೆ ರಾಷ್ಟ್ರೀಯ ವೈದ್ಯ ದಿನಾಚರಣೆಯ ಶುಭಾಶಯ ಎಂದಿದ್ದಾರೆ. ಈ ವೈದ್ಯರ ದಿನದಂದು, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ಪೌರಾಣಿಕ ವೈದ್ಯರಾದ ಡಾ. ಬಿ.ಸಿ.ರಾಯ್ ಅವರಿಗೆ ನಾನು ಗೌರವ ಸಲ್ಲಿಸುತ್ತೇನೆ, ರಾಯ್ ಅವರು ಭಾರತದ ವೈದ್ಯಕೀಯ ಕ್ಷೇತ್ರದ ಅಭಿವೃದ್ಧಿಗೆ ಅಮೂಲ್ಯವಾದ ಕೊಡುಗೆ ನೀಡಿದ್ದಾರೆಂದು ಉಪ ರಾಷ್ಟ್ರಪತಿಗಳು ಹೇಳಿದ್ದಾರೆ.
ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿ. ವೈದ್ಯರ ದಿನದಂದು, ಕೋವಿಡ್-19 ವಿರುದ್ಧದ ಮುಂಚೂಣಿಯಲ್ಲಿರುವ ನಮ್ಮ ಕೆಚ್ಚೆದೆಯ ವೈದ್ಯರಿಗೆ ನಮಸ್ಕರಿಸುತ್ತೇನೆ. ಈ ಸಂಕಷ್ಟದ ಕಾಲದಲ್ಲಿ ರಾಷ್ಟ್ರವನ್ನು ಸುರಕ್ಷಿತವಾಗಿ ಮತ್ತು ಆರೋಗ್ಯವಾಗಿಡಲು ಅವರ ಬದ್ಧತೆ ನಿಜಕ್ಕೂ ಶ್ಲಾಘನೀಯವಾದ್ದಾಗಿದೆ ಎಂದಿದ್ದಾರೆ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?