Featured
ಪರಿಷತ್ ಸದಸ್ಯರಾಗಿ ಪ್ರಮಾಣವಚನ – ಬಿಜೆಪಿ ನಾಲ್ವರಿಂದ ಮೇಲ್ಮನೆಗೆ ಪ್ರವೇಶ

ರೈಸಿಂಗ್ ಕನ್ನಡ:
ಬೆಂಗಳೂರು:
ಕೆಲ ದಿನಗಳ ಹಿಂದೆ ನೂತನ MLCಗಳಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ಬಿಜೆಪಿ ನಾಲ್ವರು ಶುಕ್ರವಾರ ವಿಧಾನ ಪರಿಷತ್ಗೆ ಅಧಿಕೃತವಾಗಿ ಎಂಟ್ರಿಕೊಟ್ಟಿದ್ದಾರೆ. ನೂತನ ಎಂಎಲ್ಸಿಗಳಾದ ಪ್ರತಾಪ್ ಸಿಂಹ ನಾಯಕ್, ಎಂಟಿಬಿ ನಾಗರಾಜ್, ಆರ್ ಶಂಕರ್, ಸುನೀಲ್ ವಲ್ಯಾಪುರೆ ಪ್ರಮಾಣ ವಚನ ಸ್ವೀಕಾರ ಮಾಡಿದರು. ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ ನಾಲ್ವರಿಗೆ ಪ್ರಮಾಣ ವಚನ ಬೋಧಿಸಿದರು. ನೂತನ ಸದಸ್ಯರಿಗೆ ಸಂವಿಧಾನದ ಪ್ರತಿ, ಪರಿಷತ್ ನಡಾವಳಿಯ ಪುಸ್ತಕವುಳ್ಳ ಸೂಟ್ಕೇಸ್ ಅನ್ನು ಕೂಡ ಸಭಾಪತಿಯವರು ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು.

ಪ್ರತಾಪ್ ಸಿಂಹ ನಾಯಕ್, ಎಂಟಿಬಿ ನಾಗಾರಾಜ್, ಆರ್. ಶಂಕರ್ ಮತ್ತು ಸುನೀಲ್ ವಲ್ಯಾಪುರೆ ವಿಧಾನಸಭೆಯಿಂದ ಪರಿಷತ್ಗೆ ಆಯ್ಕೆಯಾಗಿರುವ ಸದಸ್ಯರಾಗಿದ್ದಾರೆ. ಎಂಟಿಬಿ ನಾಗರಾಜ್, ಆರ್ ಶಂಕರ್ ಮತ್ತು ಸುನಿಲ್ ವಲ್ಯಾಪುರೆ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರತಾಪ್ ಸಿಂಹ ನಾಯಕ್ ಭಗವಂತ ಹಾಗೂ ಭಾರತ ಮಾತೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಗಮನ ಸೆಳೆದರು.

ಎಂಟಿಬಿ ನಾಗಾರಾಜ್ ಕಳೆದ ವಿಧಾನಾಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಹೊಸಕೋಟೆ ಕ್ಷೇತ್ರದ ಶಾಸಕನಾಗಿ ಆಯ್ಕೆಯಾಗಿದ್ದರು. ಆರ್. ಶಂಕರ್ ಪಕ್ಷೇತರನಾಗಿ ರಾಣೆಬೆನ್ನೂರು ಕ್ಷೇತ್ರದಿಂದ ಸ್ಪರ್ಧಿಸಿ ಜಯಶಾಲಿಯಾಗಿದ್ದರು. ಆದ್ರೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಕಾರ್ಯವೈಖರಿಗೆ ಅಸಮಧಾನಗೊಂಡು ಆಪರೇಷನ್ ಕಮಲಕ್ಕೆ ಒಳಗಾಗಿ ಅನರ್ಹಗೊಂಡಿದ್ದರು. ಎಂಟಿಬಿ ನಾಗಾರಾಜ್ ಉಪಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಿಂದ ಸ್ಪರ್ಧಿಸಿದರೂ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ವಿರುದ್ಧ ಸೋಲನುಭವಿಸಿದ್ದರು. ಶಂಕರ್ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಿರಲಿಲ್ಲ.
ಪ್ರತಾಪ್ ಸಿಂಹ ನಾಯಕ್ ದಕ್ಷಿಣ ಕನ್ನಡದಿಂದ ಮೊದಲ ಬಾರಿಗೆ ಪರಿಷತ್ ಪ್ರವೇಶಿಸಿದ್ದಾರೆ. ಸುನೀಲ್ ವಲ್ಯಾಪುರೆ ಕಲಬುರಗಿಯಿಂದ ಲೋಕಸಭೆಗೆ ಆಯ್ಕೆ ಬಯಸಿದ್ದರು. ಆದ್ರೆ ಉಮೇಶ್ ಜಾಧವ್ ಬಿಜೆಪಿ ಅಭ್ಯರ್ಥಿಯಾಗಿದ್ದರಿಂದ ಟಿಕೆಟ್ ವಂಚಿತರಾಗಿದ್ದರು. ಈಗ ರಾಜ್ಯ ಬಿಜೆಪಿ ಪಕ್ಷನಿಷ್ಠೆ ಮೆರೆದವರಿಗೆ ಅಧಿಕಾರ ನೀಡಿ ಗೌರವಿಸಿದೆ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?