ಮುಂಬೈ : ಸಾಕಷ್ಟು ವಿವಾದ, ಗೊಂದಲಗಳಿಗೆ ಕಾರಣವಾಗಿದ್ದ ಟೀಮ್ ಇಂಡಿಯಾ ಕ್ರಿಕೆಟ್ ಕೋಚ್ಗೆ ಕೊನೆಗೂ ಕ್ಯಾಪ್ಟನ್ ವಿರಾಟ್ ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ. ವೆಸ್ಟ್ ಇಂಡೀಸ್ ಪ್ರವಾಸಕ್ಕೂ ಮುನ್ನ ಮುಂಬೈನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ್ನಾಡಿದ ವಿರಾಟ್ ಕೊಹ್ಲಿ, ಭಾರತ ತಂಡಕ್ಕೆ ರವಿಶಾಸ್ತ್ರಿಯೇ ಕೋಚ್ ಆಗಿ ಮುಂದುವರೆಯಲಿ ಎಂದು ಹೇಳಿದ್ದಾರೆ.
ಭಾರತ ತಂಡದ ಕೋಚ್ ವಿಚಾರವಾಗಿ ಈವರೆಗೆ ಯಾರು ನನ್ನ ಅಭಿಪ್ರಾಯ ಕೇಳಿಲ್ಲ. ಕಪಿಲ್ ದೇವ್ ಅವರ ನೇತೃತ್ವದ ಸಲಹಾ ಸಮಿತಿ ಇನ್ನೂ, ಯಾವುದೇ ಅಭಿಪ್ರಾಯ ಕೇಳಿಲ್ಲ ಎಂದು ವಿರಾಟ್ ಹೇಳಿದ್ರು. ರವಿಶಾಸ್ತ್ರಿಯವರೇ ಕೋಚ್ ಆಗಿ ಮುಂದುವರಿದ್ರೆ, ತಂಡದಲ್ಲಿ ಒಳ್ಳೆಯ ವಾತಾವರಣ ಇರುತ್ತದೆ ಎಂದು ಕೊಹ್ಲಿ ಅಭಿಪ್ರಾಯ ಪಟ್ಟರು.
2019ರ ವಿಶ್ವಕಪ್ಪ ಗೆಲ್ಲುವಲ್ಲಿ ನಾವು ವಿಫಲರಾಗಿದ್ದೇವೆ. ನಮ್ಮ ಮುಂದಿನ ಗುರಿ 2020ರಲ್ಲಿ ನಡೆಯುವ ಟಿ-20 ವಿಶ್ವಕಪ್ ಮತ್ತು ಭವಿಷ್ಯದಲ್ಲಿ ನಡೆಯುವ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಗೆಲ್ಲುವುದು ಎಂದು ಕೊಹ್ಲಿ ಹೇಳಿದ್ರು. ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾದಲ್ಲಿ ಯುವ ಉತ್ಸಾಹಿ ತಂಡವಿದೆ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯಗಳನ್ನ ಆಡಲು ಉತ್ಸಾಹದಿಂದ ಕಾಯ್ತಿದ್ದೇನೆ ಎಂದು ಕೊಹ್ಲಿ ಹೇಳಿದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?