ರೈಸಿಂಗ್ ಕನ್ನಡ ವೆಬ್ ಡೆಸ್ಕ್:
ದೇಶದೆಲ್ಲೆಡೆ ಕೊರೊನಾದಿಂದ ದೇಗುಲಗಳು ಬಂದ್ ಆಗಿವೆ. ಈ ಮಧ್ಯೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಬ್ಲೂ ಪ್ರಿಂಟ್ಗಳು ರೆಡಿಯಾಗುತ್ತಿವೆ. ಸುಪ್ರೀಂ ಕೋರ್ಟ್ ಕಳೆದ ನವೆಂಬರ್ 9ರಂದು ಅಯೋಧ್ಯೆ ತೀರ್ಪು ಪ್ರಕಟಿಸಿ, ಮೂರು ತಿಂಗಳ ಒಳಗೆ ಟ್ರಸ್ಟ್ ರಚಿಸಿ ರಾಮ ಮಂದಿರ ನಿರ್ಮಾಣದ ಹೊಣೆ ಅವರಿಗೆ ನೀಡಬೇಕು ಎಂದು ಹೇಳಿತ್ತು. ಅದರ ಅನ್ವಯ ಟ್ರಸ್ಟ್ ಕೂಡ ಸ್ಥಾಪನೆಯಾಗಿತ್ತು. ಕೋರ್ಟ್ನಿಂದ ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದೇಗುಲ ನಿರ್ಮಾಣದ ಹೊಣೆ ಹೊತ್ತುಕೊಂಡಿತ್ತು. ಈಗ ಈ ಟ್ರಸ್ಟ್ನ ಸದಸ್ಯರು ಜುಲೈ 18ಕ್ಕೆ ಸಭೆ ಸೇರಲಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಕಮಲ್ ನಯನ್ ದಾಸ್ ಸ್ಪಷ್ಟನೆ ನೀಡಿದ್ದಾರೆ.
ಕಳೆದ ಮೂರು ತಿಂಗಳುಗಳಿಂದ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಕೂಡ ಒಮ್ಮೆ ಅಯೋಧ್ಯೆಗೆ ಭೇಟಿ ನೀಡುವಂತೆ ಟ್ರಸ್ಟ್ ಕೇಳಿಕೊಂಡಿದೆ. ಆದ್ರೆ ಇಲ್ಲಿ ತನಕ ಪ್ರಧಾನಿಗಳು ಅಯೋಧ್ಯೆಗೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ಮುಂದಿನ ದಿನಗಳಲ್ಲಿ ಪ್ರಧಾನಿ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ಅನ್ನುವುದು ಟ್ರಸ್ಟ್ ಸದಸ್ಯರ ಆಶಯ
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?