ರೈಸಿಂಗ್ ಕನ್ನಡ :
ಹಾಸನ :
ತಾಲ್ಲೂಕಿನ ಚನ್ನರಾಯಪಟ್ಟಣದಲ್ಲಿ ಅತೀ ಹೆಚ್ಚಾಗಿ ಕೊರೊನಾ ಸೋಂಕು ಹರಡುತ್ತಿದ್ದು 14 ದಿನಗಳವರೆಗೆ ಸ್ವಯಂ ಪ್ರೇರಿತ ಬಂದ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.
ತಹಶಿಲ್ದಾರ್ ಮತ್ತು ಜನಪ್ರತಿನಿಧಿಗಳ ನೇತೃತ್ವದಲ್ಲಿ ನಡೆದ ವರ್ತಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಚನ್ನರಾಯಪಟ್ಟಣದಲ್ಲಿ ಈಗಾಗಲೇ ಕೊರೊನ ಹರಡುತ್ತಿರುವ ಹಿನ್ನಲೆಯಲ್ಲಿ ಸಭೆಯಲ್ಲಿ ಸ್ವಯಂ ಘೋಷಿತವಾಗಿ 14 ದಿನಗಳವರೆಗೆ ತಾಲ್ಲೂಕನ್ನ ಲಾಕ್ಡೌನ್ ಮಾಡಲು ನಿರ್ಧರಿಸಲಾಗಿದೆ. ಭಾನುವಾರದಿಂದ 14 ದಿನಗಳವರೆಗೆ ಸ್ವಯಂಪ್ರೇರಿತ ಲಾಕ್ಡೌನ್ ಆಗಲಿದೆ.
ಇಡೀ ಜಿಲ್ಲೆಯಲ್ಲಿ 479 ಕೊರೋನ ಪಾಸಿಟಿವ್ ಕಂಡು ಬಂದಿದ್ದು, ಅದರಲ್ಲಿ ಚನ್ನರಾಯಪಟ್ಟಣ ತಾಲ್ಲೂಕೊಂದರಲ್ಲೇ 220 ಪಾಸಿಟಿವ್ ಕೇಸ್ ದಾಖಲಾಗಿದೆ.
ಈ ಹಿನ್ನೆಲೆಯಲ್ಲಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ವರ್ತಕ ಸಂಘ, ಬೀದಿಬದಿ ವ್ಯಾಪಾರಿಗಳು, ಕೂಲಿಕಾರ್ಮಿಕರು, ಸಂಘ-ಸಂಸ್ಥೆಗಳ ಮುಖಂಡರ ಸಭೆ ಕರೆಯಲಾಗಿತ್ತು. ವಾರದಲ್ಲಿ ಮೂರು ದಿನ ಬೆಳಗ್ಗೆ 6:30 ರಿಂದ 11:30 ರವರೆಗೆ ಅಗತ್ಯವಸ್ತುಗಳನ್ನು ಕೊಳ್ಳಲು ಅವಕಾಶ ಇರಲಿದೆ.
ಕೃಷಿ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳನ್ನು ತಾಲೂಕಿನಾದ್ಯಂತ ನಿರ್ಬಂಧಿಸಲು ಸೂಚಿಸಲಾಗಿದೆ.
ಕರ್ನಾಟಕದಲ್ಲಿ ಕೆಆರ್ ಕೆ ಸಂಸ್ಥೆಯಿಂದ ಪ್ರಭಾಸ್ ಆದಿಪುರುಷ್ ಬಿಡುಗಡೆ
ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್
ದಾವಣಗೆರೆ ಕೆಎಸ್ಆರ್ಟಿಸಿ ಸಿಬ್ಬಂದಿಗಳಿಗೆ ಉಚಿತ ಮಾಸ್ಕ್ ವಿತರಣೆ
ಕೊರೊನಾ ಅಬ್ಬರ: 6 ಲಕ್ಷ ದಾಡಿದ ಕೊರೊನಾ ಕೇಸ್: 87 ಮಂದಿ ಬಲಿ
ಕೊರೊನಾ ಅಬ್ಬರ: 69 ಲಕ್ಷ ದಾಟಿದ ಕೊರೊನಾ ನಂಬರ್: ಸಾವಿನ ಸಂಖ್ಯೆ 96,318ಕ್ಕೆ ಏರಿಕೆ
ಕೊರೊನಾ ಅಬ್ಬರ: 86 ಸಾವಿರ ಹೊಸ ಕೊರೊನಾ ಕೇಸ್: 58 ಲಕ್ಷ ದಾಟಿದ ಸೋಂಕಿತರ ನಂಬರ್