Connect with us

Featured

ರಾಮನಗರದಲ್ಲಿ ಹೆಚ್ಚಿದ ಕೊರೊನಾ ಸೋಂಕು: ಒಂದೇ ದಿನ ಆರು ಪಾಸಿಟಿವ್

ರೈಸಿಂಗ್​ ಕನ್ನಡ:

ರಾಮನಗರ :

 ಜಿಲ್ಲೆಯಲ್ಲಿ ಭಾನುವಾರ  ಆರು ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಿಳಿಸಿದ್ದಾರೆ.

ಇಂದು ಕನಕಪುರ 1, ಮಾಗಡಿ 1, ಚನ್ನಪಟ್ಟಣ 3 ಮತ್ತು ರಾಮನಗರದಲ್ಲಿ 1 ಪ್ರಕರಣಗಳು ಪತ್ತೆಯಾಗಿದೆ. ಇವರನ್ನು ರಾಮನಗರದ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಭಾನುವಾರ ಯಾರು ಕೂಡ ಆಸ್ಪತ್ರೆಯಿಂದ ಬಿಡುಗಡೆಯಾಗಿಲ್ಲ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 105 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಕನಕಪುರ 46, ಮಾಗಡಿ 19, ಚನ್ನಪಟ್ಟಣ 23 ಮತ್ತು ರಾಮನಗರದ 17 ಜನರು ಸೇರಿದ್ದಾರೆ.

ಇದುವರೆಗೆ ಜಿಲ್ಲೆಯಲ್ಲಿ 233 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಕನಕಪುರ 63, ಮಾಗಡಿ 84, ಚನ್ನಪಟ್ಟಣ 43 ಮತ್ತು ರಾಮನಗರದ 43 ಪ್ರಕರಣಗಳು ಸೇರಿವೆ.

ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 5 ಮಂದಿ ಸಾವನ್ನಪ್ಪಿದ್ದಾರೆ. ರಾಮನಗರದಲ್ಲಿ ಒಬ್ಬರು ಮತ್ತು ಮಾಗಡಿಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ.

ಜಿಲ್ಲಾ ಆರೋಗ್ಯ ಇಲಾಖೆ ವರದಿ:

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಭಾನುವಾರದ ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 10108 (ಹೊಸದಾಗಿ ಇಂದಿನ 339 ಸೇರಿ). ಒಟ್ಟು 3046 ಜನ 14 ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. 281 ಜನರು ಇಂದು ಹೋಂ ಕ್ವಾರಂಟೈನ್ ಅವಧಿಯನ್ನು ಪೂರೈಸಿದ್ದು, ಇವರ ಒಟ್ಟಾರೆ ಸಂಖ್ಯೆ 3167ಗೆ ಏರಿಕೆಯಾಗಿದೆ.

ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು 89 ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ 3087 ಮಂದಿ ತಪಾಸಣೆಗೆ ಮಾಡಿಸಿ ಕೊಂಡಿದ್ದಾರೆ. ಒಟ್ಟು 12 ಜನರು ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಇನ್ಸಟ್ಯೂಷನಲ್ ಕ್ವಾರಂಟೈನ್ ಗೆ ಇಂದು 58 ಜನ ಸೇರ್ಪಡೆಯಾಗುವುದರೊಂದಿಗೆ ಒಟ್ಟಾರೆ ಸಂಖ್ಯೆ 341ಕ್ಕೆ ಇಳಿಕೆಯಾಗಿದೆ.

Advertisement

ಭಾನುವಾರ ಹೊಸದಾಗಿ 339 ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 10426 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದಿನ 8619 ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಇಂದಿನ 339 ಬಾಕಿ ವರದಿ ಸೇರಿ ಒಟ್ಟು 1574 ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ