ರೈಸಿಂಗ್ ಕನ್ನಡ :
ರಾಯಚೂರು :
ಆಶಾ ಕಾರ್ಯಕರ್ತರಿಗೆ ಮಾಸಿಕ 12,000 ಖಾತರಿಪಡಿಸಬೇಕು ಮತ್ತು ಕೋವಿಡ್-19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವ ಸುರಕ್ಷಾ ಸಾಮಗ್ರಿಗಳನ್ನು ನೀಡಬೇಕು ಎಂದು ಒತ್ತಾಯಿಸಿ ರಾಜ್ಯವ್ಯಾಪಿ ಜುಲೈ 10 ರಿಂದ ಅನಿರ್ದಿಷ್ಟ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತರು ತೀವ್ರ ಹೋರಾಟ ಮಾಡುವುದಾಗಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಹೌದು ರಾಜ್ಯಾದ್ಯಂತ ಕಳೆದ ಒಂದು ವಾರದಿಂದ ತಾಲೂಕು ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸಿ ಅಧಿಕಾರಿಗಳು, ತಾಸಿಲ್ದಾರರು, ರಾಜ್ಯದ ಹಲವಾರು ಸಚಿವರಿಗೆ ಮತ್ತು ಶಾಸಕರುಗಳಿಗೆ ಆಶಾ ಕಾರ್ಯಕರ್ತರು ಮನವಿಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾಕಷ್ಟು ಬಾರಿ ಮನವಿ ಪತ್ರಗಳನ್ನು ಕೊಟ್ಟರು ಯಾವುದೇ ಪ್ರಯೋಜನವಾಗಿಲ್ಲ.
ರಾಜ್ಯದ್ಯಂತ 42,000 ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಸಮೀಕ್ಷೆ ನಡೆಸಿ, ಅಂತರಾಜ್ಯ ಪ್ರಯಾಣಿಕರು, ವಲಸೆ ಕಾರ್ಮಿಕರು ಮತ್ತು ಇತರರನ್ನು ಸ್ಕ್ರೀನಿಂಗ್ ಮಾಡಿ ಸೋಂಕು ಪತ್ತೆ ಹಚ್ಚುವಲ್ಲಿ ಸಕ್ರಿಯರಾಗಿದ್ದಾರೆ. ಹಿರಿಯ ನಾಗರಿಕರು, ಹೈ-ರಿಸ್ಕ್ ವರ್ಗದ ಸಮೀಕ್ಷೆ ನಡೆಸಿ ಗಂಭೀರ ರೋಗ ಇರುವವರನ್ನು ಪತ್ತೆ ಹಚ್ಚಲಾಗಿದೆ. ಸುಮಾರು 1.59 ಕೋಟಿ ಮನೆಗಳನ್ನು ಸಮೀಕ್ಷೆ ಮಾಡಲಾಗಿದ್ದು, ಪ್ರತಿದಿನ ಆಶಾ ಕಾರ್ಯಕರ್ತರು ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹ ಮಾಡಲು ಸಾಧ್ಯವಾಗಿದೆ. ಆದರೆ ಇಂತಹ ಹಲವಾರು ಕಾರ್ಯಗಳನ್ನು ಮಾಡಿರುವ ಆಶಾ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆಯಾ ಎಂಬ ಪ್ರಶ್ನೆ ಎದುರಾಗಿದೆ.
ಹಲವಾರು ಅಪಾಯಕಾರಿ ಕೆಲಸಗಳಲ್ಲಿ ಎದೆಗುಂದದೆ ಕಾರ್ಯನಿರ್ವಹಿಸುತ್ತಿದ್ದೇವೆ. ಕೇವಲ ಚಪ್ಪಾಳೆ ಹೂಮಳೆ ಹಾಗೂ ಇತರ ರೀತಿಯ ಮೆಚ್ಚುಗೆ ಬಗ್ಗೆ ಎಲ್ಲಾ ಆಶಾ ಕಾರ್ಯಕರ್ತರಿಗೂ ಖಂಡಿತವಾಗಿಯೂ ಸಂತೋಷವಿದೆ. ಆದರೆ ಕೊರೋನಾ ನಿಯಂತ್ರಣ ಕಾರ್ಯದಲ್ಲಿ ನಿರತವಾಗಿರುವ ಆಶಾ ಕಾರ್ಯಕರ್ತರಿಗೆ ಕೆಲಸಕ್ಕೆ ತಕ್ಕ ವೇತನವಿಲ್ಲ, ರಕ್ಷಣೆಯಿಲ್ಲ, ಸಾಫ್ಟ್ವೇರ್ ಅವ್ಯವಸ್ಥೆಯಿಂದ ಬಳಲಿ ಬೆಂಡಾಗಿದ್ದಾರೆ.
ಈ ಸಮಯದಲ್ಲಿ ಸರ್ಕಾರ ಆಶಾ ಕಾರ್ಯಕರ್ತರ ಬೇಡಿಕೆಗಳನ್ನು ಪರಿಹರಿಸಲು ಮುಂದಾಗದಿದ್ದರೇ ಅನಿವಾರ್ಯವಾಗಿ ಜುಲೈ 10 ರಿಂದ ರಾಜ್ಯದ್ಯಂತ ಅನಿರ್ದಿಷ್ಟವಾಗಿ ತಮ್ಮ ಸೇವೆ ಸ್ಥಗಿತಗೊಳಿಸಲಾಗುವುದು, ಜೊತೆಗೆ ಜಿಲ್ಲೆ, ತಾಲೂಕು, ಪಿಹೆಚ್ ಸಿ ಮಟ್ಟದಲ್ಲಿ ಆಶಾ ಕಾರ್ಯಕರ್ತೆಯರು ಹೋರಾಟವನ್ನು ತೀವ್ರಗೊಳಿಸುವ ಬಗ್ಗೆ ತೀರ್ಮಾನಿಸಿದ್ದಾರೆ. ಒಟ್ಟಿನಲ್ಲಿ ಸರಕಾರ ಇವರ ಬೇಡಿಕೆಗೆ ಮಣೆಹಾಕುತ್ತಾ ಕಾದು ನೋಡಬೇಕಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?