ರೈಸಿಂಗ್ ಕನ್ನಡ:
ಬೆಂಗಳೂರು:
ಕೊರೊನಾ ರಣಕೇಕೆ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪಾಸಿಟಿವ್ ಪ್ರಕರಣಗಳ ಸಂಖ್ಯೆಗಳ ಮೇಲೆ ಕೇಂದ್ರ ಸರಕಾರವೂ ಕಣ್ಣಿಟ್ಟಿದೆ. ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆ ಮತ್ತು ಅವರನ್ನು ನೋಡೊಕೊಳ್ಳಬೇಕಾದ ಮಾರ್ಗದ ಬಗ್ಗೆ ರಾಜ್ಯ ಸರಕಾರಕ್ಕೆ ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಪಷ್ಟ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲ ಕೊರೊನಾ ಪಾಸಿಟಿವ್ ವರದಿ ಬಂದ ಹಿರಿಯ ನಾಗರಿಕರಿಗೆ ವಿಶೇಷ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಚಿಕಿತ್ಸೆ ನೀಡಬೇಕೆಂದು ಸೂಚನೆ ನೀಡಿದೆ.
ಸಿಎಂ ಬಿಎಸ್ ಯಡಿಯೂರಪ್ಪ ಜೊತೆಗೆ ಸಭೆ ನಡೆಸಿದ ಕೇಂದ್ರ ಆರೋಗ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಆರತಿ ಅಹುಜಾ, ಎಮರ್ಜೆಸ್ಸಿ ಡಾಕ್ಟರ್ ಸ್ಪಂದನಾ ಮತ್ತು ಕೇಂದ್ರದ ನಿರ್ದೇಶಕ ಡಾ. ರವೀಂದ್ರನ್ ಹಿರಿಯ ನಾಗರಿಕರ ಪ್ರಾಣ ರಕ್ಷಣೆ ಬಗ್ಗೆ ವಿಶೇಷ ಗಮನ ನೀಡಬೇಕು ಎಂದು ಸೂಚಿಸಿದ್ದಾರೆ.
ರಾಜ್ಯ ಸರಕಾರ ಇತ್ತೀಚಿಗೆ ಎ ಸಿಮ್ಟಮ್ಯಾಟಿಕ್ ಇರುವವರಿಗೆ ಮನಯಲ್ಲೇ ಚಿಕಿತ್ಸೆ ನೀಡುವುದಕ್ಕೆ ಮಾರ್ಗಸೂಚಿ ಹೊರಡಿಸಿತ್ತು. ಆದ್ರೆ 60 ವರ್ಷಕ್ಕೂ ಮಿಗಿಲಾದವರಿಗೆ ಈ ರೀತಿಯ ಚಿಕಿತ್ಸೆ ಬೇಡ, ಅಂತಹವನ್ನು ಕೋವಿಡ್ 19 ವಿಶೇಷ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿಟ್ಟು ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದೆ. ಸಿಎಂ ಯಡಿಯೂರಪ್ಪ ಜೊತೆ ಆರೋಗ್ಯ ಸಚಿವ ಬಿ. ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.
ದೇಶದ ಮಹಾನಗರಗಳಲ್ಲಿ ಪ್ರತಿದಿನ ಪಾಸಿಟಿವ್ ಸಂಖ್ಯೆಗಳಲ್ಲಿ ಏರಿಕೆ ಆಗುತ್ತಿರುವುದರಿಂದ ಕೇಂದ್ರದ ವಿಶೇಷ ತಂಡ ಎಲ್ಲಾ ಕಡೆಗೂ ಬೇಟಿ ನೀಡಿ ಅಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿದೆ. ಎಲ್ಲಾ ಕಡೆಯಿಂದಲೂ ಸಂಗ್ರಹವಾದ ಮಾಹಿತಿ ಆಧರಿಸಿ ದೇಶಕ್ಕೆ ಅನ್ವಯಾಗುವಂತಹ ಕೋವಿಡ್ ನೀತಿ ಸಂಹಿತೆ ರಚಿಸಲು ಪ್ಲಾನ್ ನಡೆಯುತ್ತಿದೆ. ಹಿರಿಯ ಐಎಎಸ್ ಅಧಿಕಾರಿ ಉಜ್ವಲ್ ಕುಮಾರ್ ಘೋಷ್ ರಾಜ್ಯದ ಪರ ಕೇಂದ್ರ ತಂಡದ ಜೊತೆ ಸಮನ್ವಯ ಅಧಿಕಾರಿಯಾಗಿ ರಾಜ್ಯ ಸರಕಾರ ನೇಮಿಸಿದೆ.
ಕೇಂದ್ರದ ವಿಶೇಷ ತಂಡದ ಕೋವಿಡ್ನಿಂದಾಗುವ ಸಾವಿನ ಸಂಖ್ಯೆಯನ್ನು ತಡೆಯಬೇಕು ಎಂದು ಹೇಳಿದೆ. ಈಗ ಇರುವ ಮಾರ್ಗಸೂಚಿಯನ್ನು ಇನ್ನೂ ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಹೇಳಿದೆ. ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಆಗಸ್ಟ್ 15ರೊಳಗಾಗಿ ಹೈ ಫ್ಲೋ ಆಕ್ಷಿಜನ್ ಅಳವಡಿಕೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?