ರೈಸಿಂಗ್ ಕನ್ನಡ :
ಪ್ರತಿನಿಧಿ : ದುರ್ಗೇಶ್ ಮಂಗಿಹಾಳ, ಯಾದಗಿರಿ
ಇಷ್ಟು ದಿನ ಮಹಾರಾಷ್ಟ್ರದ ಕಂಟಕ ಎದುರಿಸುತ್ತಿದ್ದ ಯಾದಗಿರಿಗೆ, ಇದೀಗ ಬೆಂಗಳೂರಿನ ಭಯವೂ ಶುರುವಾಗಿದೆ. ಬೆಂಗಳೂರಿನಿಂದ ತನ್ನ ಮದುವೆ ಸಲುವಾಗಿ ಜಿಲ್ಲೆಗೆ ಬಂದ ಯುವಕನೋರ್ವ ಬರುವಾಗಲೇ ಕೊರೊನಾ ಹೊತ್ತು ತಂದಿದ್ದಾನೆ. ಈ ಹಿನ್ನೆಲೆ, ಮದುವೆಯಾಗಬೇಕಿದ್ದ ಯುವಕ ಈಗ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಜಿಲ್ಲೆಯ ಶಹಾಪುರ ತಾಲೂಕಿನ ಹಳ್ಳಿಯೊಂದರ ಯುವಕನಿಗೆ ಕೊರೊನಾ ಧೃಡಪಟ್ಟಿದೆ. ಕೊರೊನಾ ಪಾಸಿಟಿವ್ ಬಂದ ಯುವಕನ ಮದುವೆ, ಈ ತಿಂಗಳ 13ಕ್ಕೆ ಫಿಕ್ಸ್ ಆಗಿತ್ತು. ಹೀಗಾಗಿ ಕಳೆದ ತಿಂಗಳ 29 ರಂದು ಬೆಂಗಳೂರುನಿಂದ ಯಾದಗಿರಿಗೆ ಈ ಯುವಕ ಬಂದಿದ್ದ. ಬೆಂಗಳೂರಿನಿಂದ ಬರುವಾಗಲೇ ಯುವಕನ ಆರೋಗ್ಯ ಹದಗೆಟ್ಟು, ತೀವ್ರ ಶೀತದಿಂದ ಬಳಲುತ್ತಿದ್ದ ಎನ್ನಲಾಗುತ್ತಿದೆ.
ಮುನ್ನಜಾಗ್ರತ ಕ್ರಮವಾಗಿ ಯುವಕನಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಸದ್ಯ ಯುವಕನ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಈತನಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೂ ಮುಂದಿನ ಸೋಮವಾರ ನಡೆಯ ಬೇಕಿದ್ದ ಮದುವೆ ಕೆಲಸಕ್ಕೆ, ಯುವಕ ಓಡಾಡಿದ್ದು, ಸದ್ಯ ಮದುವೆ ಮನೆಯಲ್ಲಿ ಹಾಗೂ ಗ್ರಾಮದಲ್ಲಿ ಕೊರೊನಾ ಭೀತಿ ಹೆಚ್ಚಾಗಿದೆ. ಮದುವೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?