Featured
ಯಾದಗಿರಿ ಜಿಲ್ಲಾಧಿಕಾರಿಯಿಂದ ಸ್ಟ್ರಿಕ್ಟ್ ಆ್ಯಕ್ಷನ್- ಪರವೂರಿನಿಂದ ಬಂದ್ರೆ ಟೆಸ್ಟ್ ಕಡ್ಡಾಯ..!

ರೈಸಿಂಗ್ ಕನ್ನಡ:
ದುರ್ಗೇಶ್ ಮಂಗಿಹಾಳ, ಯಾದಗಿರಿ:
ಯಾದಗಿರಿ ಜಿಲ್ಲೆಯಲ್ಲಿ ಈಗ ಕೊರೋನಾ ಸೋಂಕು ಸಾವಿರದ ಗಡಿ ದಾಟಿದೆ. ಮಂಗಳವಾರದವರೆಗೆ 1016 ಕೇಸ್ ಗಳು ಪತ್ತೆಯಾಗಿದ್ದು ಮತ್ತಷ್ಟು ಪಾಸಿಟಿವ್ ಕೇಸ್ ಹೆಚ್ಚಾಗುವ ಆತಂಕ ಕಾಡ್ತಿದೆ. ಇದರ ಮಧ್ಯೆ ಬೆಂಗಳೂರಿನಿಂದ ವಲಸಿಗರು ಜಿಲ್ಲೆಗೆ ಆಗಮಿಸುತ್ತಿರುವುದು ಆತಂಕ ಸೃಷ್ಟಿಸಿದೆ. ಯಾವುದೇ ತಪಾಸಣೆ ಮಾಡಿಕೊಳ್ಳದೆ ಬೆಂಗಳೂರಿನಿಂದ ಜನರು ವಾಪಾಸ್ ತಮ್ಮೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್, ಯಾರು ಟ್ರಾವೆಲ್ ಮಾಡಿಕೊಂಡು ಬರುತ್ತಾರೋ ಅವರಿಗೆ ಕಡ್ಡಾಯ ತಪಾಸಣೆ ಮಾಡಬೇಕು ಎಂದು ಸೂಚಿಸಿದ್ದಾರೆ.
ಬೆಂಗಳೂರು ಸೇರಿದಂತೆ ಇತರ ಕಡೆಯಿಂದ ಬಂದವರು ಆರೋಗ್ಯ ತಪಾಸಣೆ ಮಾಡಿಕೊಂಡು ಗ್ರಾಮಗಳಿಗೆ ತೆರಳಬೇಕು. ಯಾರಿಗಾದ್ರು ಪಾಸಿಟಿವ್ ಕಂಡು ಬಂದ್ರೆ ಗ್ರಾಮದ ಎಲ್ಲರಿಗೂ ಸಮಸ್ಯೆ ಆಗುತ್ತೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು. ಯಾರಾದ್ರೂ ಟೆಸ್ಟ್ ಮಾಡಿಸದೆಯೇ ಗ್ರಾಮಗಳಿಗೆ ತೆರಳಿದ್ರೆ ಆಶಾ ಕಾರ್ಯಕರ್ತರು ಅವರನ್ನು ಕರೆತಂದು ತಪಾಸಣೆ ಮಾಡಿಸಬೇಕು ಎಂದು ಸೂಚಿಸಿದ್ದಾರೆ.
ಯಾದಗಿರಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ತಡೆಗಟ್ಟಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಜನರು ಅನಾವಶ್ಯಕ ಹೊರಗಡೆ ಒಡಾಡದೆ ಮನೆಯಲ್ಲಿಯೆ ಇರಬೇಕು. ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್, ಸ್ಯಾನಿಟೈಸರ್ ಬಳಸಿ ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ವಹಿಸಬೇಕೆಂದು ಜಿಲ್ಲಾಧಿಕಾರಿ ಎಂ ಕೂರ್ಮಾರಾವ್ ಜನರಿಗೆ ಕರೆ ನೀಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?