ರೈಸಿಂಗ್ ಕನ್ನಡ:
ಬೆಂಗಳೂರು:
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪಾಸಿಟಿವ್ ಪ್ರಕರಣಗಲು ಹೆಚ್ಚಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಂತೂ ಕೊರೊನಾ ಪ್ರಕರಣಗಳು ಬೆಚ್ಚಿಬೀಳಿಸುತ್ತಿದೆ. ದಕ್ಷಿಣ ಕನ್ನಡ, ಬಳ್ಳಾರಿ ಮತ್ತು ಕರ್ನಾಟಕದ ಇತರೆ ಜಿಲ್ಲೆಗಳಲ್ಲೂ ಕೊರೊನಾ ರಣಕೇಕೆ ಹಾಕುತ್ತಿದೆ. ಈ ಮಧ್ಯೆ ಸಿಎಂ ಬಿಎಸ್ ಯಡಿಯೂರಪ್ಪ ಶುಕ್ರವಾರ ವಿಶೇಷ ಪತ್ರಿಕಾಗೋಷ್ಠಿಯನ್ನು ಕರದಿದ್ದಾರೆ. ಕರ್ನಾಟಕದಲ್ಲಿ ಕೋವಿಡ್ ಕಂಟ್ರೋಲ್ ಮಾಡಲು ಇರುವ ಮಾರ್ಗಗಳ ಜೊತೆಗೆ ಲಾಕ್ಡೌನ್ ಬಗ್ಗೆಯೂ ಸಂಪೂರ್ಣ ಕ್ಲಾರಿಟಿ ಸಿಗಲಿದೆ.
ಶುಕ್ರವಾರದ ಪತ್ರಿಕಾಗೋಷ್ಠಿಗೂ ಮುನ್ನ ಇಂದು ಸಿಎಂ ಯಡಿಯೂರಪ್ಪ ಕೋವಿಡ್ ಸೆಂಟರ್ಗಳಿಗೆ ಭೇಟಿ ನೀಡಲಿದ್ದಾರೆ. 10 ಸಾವಿರ ಬೆಡ್ಗಳಿರುವ ಸೆಂಟರ್ಗಳಿಗೆ ತೆರಳಿ ಅಲ್ಲಿ ಏನೇನು ಸವಲತ್ತುಗಳಿವೆ ಅನ್ನುವುದನ್ನ ಖುದ್ದು ಪರಿಶೀಲನೆ ಮಾಡಲಿದದ್ದಾರೆ. ಕೇಂದ್ರದ ವಿಶೇಷ ತಂಡ ಕರ್ನಾಟಕ ಸರಕಾರ ಕೈಗೊಂಡಿರುವ ಕೋವಿಡ್ ನಿಯಂತ್ರಣ ಕ್ರಮದ ಬಗ್ಗೆ ಮೆಚ್ಚುಗೆ ಸೂಚಿಸಿರುವ ಬೆನ್ನಲ್ಲೇ ಸಿಎಂ ಈಗಿರುವ 400 ಆ್ಯಂಬುಲೆನ್ಸ್ಗಳ ಜೊತೆಗೆ ಹೆಚ್ಚುವರಿಯಾಗಿ 200 ಆ್ಯಂಬುಲೆನ್ಸ್ಗಳನ್ನು ಖರೀದಿ ಮಾಡಲು ಸಿದ್ಧವಾಗಿದೆ.
ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಾಗಿ ಹರಡುತ್ತಿದೆ. ಅಲ್ಲಿ ಏನೇನು ಬೇಕೋ ಅದನ್ನ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ತಾರೆ, ಪೊಲೀಸರು ಹಗಲು ರಾತ್ರಿ ಕೆಲಸ ಮಾಡ್ತಿದ್ದಾರೆ ಎಂದು ಹೇಳಿದ್ರು. ಇದರ ಜೊತೆಗೆ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಕ್ಯಾಬಿನೆಟ್, ನಾಳೆ ಬೆಂಗಳೂರು ಸಚಿವರು, ಶಾಸಕರು, ಕಾರ್ಪೊರೇಟರ್ಸ್ ಜೊತೆ ಸಭೆ ಕೂಡ ನಡೆಸಲಿದ್ದಾರೆ.
ಲಾಕ್ಡೌನ್ ಬೇಕು ಅನ್ನೊ ಕೂಗಿನ ಹೊತ್ತಿನಲ್ಲಿ ಸಾಲು ಸಾಲು ಸಭೆ, ಸಭೆ ಬಳಿಕ ಸುದ್ದಿಗೋಷ್ಟಿ ಕರೆದಿರೋದು ಕುತೂಹಲಕ್ಕೆ ಕಾರಣವಾಗಿದೆ. ಶನಿವಾರ, ಭಾನುವಾರ ಲಾಕ್ಡೌನ್ ಮಾಡ್ತಾರಾ ಅಥವಾ ಸಂಪೂರ್ಣ ಲಾಕ್ಡೌನ್ ಆಗುತ್ತಾ ಅಥವಾ ಈಗಿರುವ ಪರಿಸ್ಥಿತಿಯೇ ಮುಂದುವರೆಯುತ್ತಾ ಅನ್ನುವ ಕುತೂಹಲ ಎಲ್ಲರಿಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?