ರೈಸಿಂಗ್ ಕನ್ನಡ :
ರಾಯಚೂರು :
ಕೊರೊನಾ ಇಡೀ ವಿಶ್ವವನ್ನ ಕಾಡುತ್ತಿದೆ. ರೋಗದಿಂದ ಬಳಲುತ್ತಿರುವ ರೋಗಿಗಳಿಗೆ ಸಮರ್ಪಕವಾಗಿ ಚಿಕಿತ್ಸೆ ಸಿಗುತ್ತಿಲ್ಲ. ತುರ್ತು ಕ್ರಮಗಳನ್ನು ಕೈಗೊಳ್ಳುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಡವಿದೆ, ಎಂದು ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿವಿ ನಾಯಕ್ ಆರೋಪಿಸಿದ್ದಾರೆ. ಅಲ್ಲದೇ ಕೇವಲ ಬಾಯಿ ಮಾತಿನಲ್ಲೇ ಪರಿಹಾರ ನೀಡುತ್ತಿದೆ ವಿನಹ ರಚನಾತ್ಮಕ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
ಹೌದು ಈ ಭಾಗದ ನಿರುದ್ಯೋಗಿಗಳಿಗೆ ಕೇಂದ್ರ ನಿರಾಸೆ ಮೂಡಿಸಿದೆ. ಭೂ ಸುಧಾರಣೆ ಕಾಯಿದೆ ತಿದ್ದುಪಡಿ ಮಾಡುವ ಮೂಲಕ ಬಡವರು ದಲಿತರು ಹಿಂದುಳಿದವರಿಗೆ ಅನ್ಯಾಯ ಮಾಡುತ್ತಿದೆ. ಬಂಡವಾಳ ಶಾಹಿಗಳ ಕೈಗೆ ಮತ್ತೆ ಭೂಮಿ ಸಿಗುವಂಥ ಕಾಯಿದೆ ರಚಿಸಲಾಗಿದೆ. ಕಾಂಗ್ರೆಸ್, ಸೋನಿಯಾ ಗಾಂಧಿ ನೇತೃತ್ವದಲ್ಲಿ ಈ ಹಿಂದೆ ವಿರೋಧ ಮಾಡಲಾಗಿತ್ತು. ಬಿಜೆಪಿ ವಿರುದ್ಧ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.
ಇದೇ ವೇಳೆ ಮಾತನಾಡಿದ ಸಿಂಧನೂರಿನ ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಕೇಂದ್ರ ಹಾಗು ರಾಜ್ಯ ಸರಕಾರಗಳ ವೈಫಲ್ಯದ ಬಗ್ಗೆ ಹೇಳುತ್ತಾ, ಕೊರೊನಾ ಸುಂಟರಗಾಳಿಯನ್ನೇ ಎಬ್ಬಿಸಿದೆ. ಕೇಂದ್ರ ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆರಂಭದಲ್ಲಿ ಕೇಂದ್ರ ಸರ್ಕಾರ ಕೈಗೊಂಡು ತಪ್ಪು ನಿರ್ಧಾರದಿಂದಲೇ ರಾಜ್ಯದಲ್ಲಿ ಈ ಸ್ಥಿತಿ ಎದುರಾಗಿದೆ. ಆರಂಭದಲ್ಲೇ ಲಾಕ್ ಡೌನ್ ಜಾರಿ ಮಾಡಲಾಗಿತ್ತು. ಕಾಂಗ್ರೆಸ್ ಸೇರಿದಂತೆ ಎಲ್ಲ ಪಕ್ಷಗಳು ಸಹಕಾರ ನೀಡುತ್ತಲೇ ಬಂದಿವೆ. ಎಲ್ಲರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಂಡಿದ್ದರೆ ಚನ್ನಾಗಿತ್ತು. ಕೋವಿಡ್ ನಿಯಮಗಳು ಪಾಲನೆಯಾಗಿಲ್ಲ.
ಸೋಂಕಿತರನ್ನು ಗುರುತಿಸಿ ಚಿಕಿತ್ಸೆ ಕೊಡಿಸಿ ಪ್ರಾಥಮಿಕ ದ್ವಿತೀಯ ಸಂಪರ್ಕ ಕಲ್ಪಿಸುವ ಕೆಲಸ ಮಾಡಲಾಗಬೇಕಿತ್ತು. ಹೋಮ್ ಕ್ವಾರಂಟೈನ ಜಾರಿಗೊಳಿಸಿದ ಮೇಲೆ ವೈರಸ್ ಸಾಕಷ್ಟು ಹರಡಿತು. ಅವೈಜ್ಞಾನಿಕ ನಡೆ, ನಿಯಮಗಳ ಬದಲಾವಣೆ, ಸಂಪೂರ್ಣ ಸಡಿಲಕೆ ಮಾಡಿರುವುದು ಸೋಂಕು ಉಲ್ಬಣಿಸುತ್ತಿದೆ. ತಪ್ಪು ನಿರ್ಧಾರಗಳಿಂದ ಕೊರೊನಾ ಸೋಂಕಿತರು ಹೆಚ್ಚಳವಿದೆ. ಸೋಂಕಿತರ ಸಂಖ್ಯೆ ಹೀಗೆ ಸಾಗಿದರೆ ಬೆಡ್ ಸಿಗದಂಥ ಸ್ಥಿತಿ ಏರ್ಪಡಲಿದೆ ಎಂದು ಬೇಸರ ವ್ಯಕ್ತಪಡಿಸಿದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?