Featured
ರಾಯಚೂರಿನಲ್ಲಿ ಸಾವಿರ ಗಡಿ ತಲುಪಿದ ಸೋಂಕಿತರ ಸಂಖ್ಯೆ : ರಾಯಚೂರು ನಗರ, ಸಿಂಧೂನೂರಿನಲ್ಲಿ ತಲಾ 9 ಪ್ರಕರಣ

ರೈಸಿಂಗ್ ಕನ್ನಡ:
ರಾಯಚೂರು :
ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು ಶನಿವಾರ ಮತ್ತೆ 16 ಹೊಸ ಪ್ರಕರಣಗಳು ದೃಢವಾಗಿದ್ದು ಸೋಂಕಿತರ ಸಂಖ್ಯೆ 964 ಕ್ಕೆ ಏರಿಕೆಯಾಗಿದೆ. ಕೊರೊನಾ ಆಸ್ಪತ್ರೆಯಿಂದ 26 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಸಾವಿರ ಗಡಿಗೆ ಸನಿಹವಾಗುತ್ತಿದೆ. ಆರೋಗ್ಯ ಇಲಾಖೆಯ ಇಂದಿನ ವರದಿಯಲ್ಲಿ 16 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, ರಾಯಚೂರು ಒಂದರಲ್ಲೆ 9 ಜನರಿಗೆ ಸೋಂಕು ಹರಡಿದೆ. ಉಳಿದಂತೆ ಮಾನ್ವಿ 1, ಸಿಂಧನೂರು ತಾಲೂಕಿನಲ್ಲಿ 9 ಪ್ರಕರಣಗಳು ಬೆಳಕಿಗೆ ಬಂದಿವೆ.

ರಾಯಚೂರು – 341, ದೇವದುರ್ಗ – 364, ಲಿಂಗಸುಗೂರು – 55, ಮಾನ್ವಿ – 105, ಸಿಂಧನೂರು ತಾಲುಕಿನಲ್ಲಿ – 100 ಪ್ರಕರಣಗಳು ಇದುವರೆಗೂ ಪತ್ತೆಯಾಗಿವೆ.
ಇಂದು 26 ಜನ ಸೋಂಕಿನಿಂದ ಗುಣಮುಖರಾಗಿದ್ದು ಈ ವರೆಗೂ 570 ಜನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ವರೆಗೂ ಮೃತಪಟ್ಟವರ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ತಿಳಿಸಿದ್ದಾರೆ.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?
ಸಿಎಂ ಬೊಮ್ಮಾಯಿ ಸೇರಿ ಸಂಪುಟದ ಐವರಿಗೆ ಕೊರೋನಾ ಶಾಕ್..!