Connect with us

Featured

ತುಮಕೂರಿನಲ್ಲಿ ಕೊರೊನಾಗೆ ಮೂವರ ಬಲಿ: 700ರ ಗಡಿ ತಲುಪಿದ ಸೋಂಕಿತರ ಸಂಖ್ಯೆ

ರೈಸಿಂಗ್ ಕನ್ನಡ:

ತುಮಕೂರು:

 ಜಿಲ್ಲೆಯಲ್ಲಿ ಭಾನುವಾರ 46 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು ಸೊಂಕಿತರ ಸಂಖ್ಯೆ 700 ರ ಗಡಿ ತಲುಪಿದೆ. ಕೊರೊನಾಗೆ ಮೂವರು ಸೊಂಕಿತರು ಬಲಿಯಾಗಿದ್ದು ಸಾವಿನ ಸಂಖ್ಯೆ 23 ಕ್ಕೇ ಏರಿಕೆಯಾಗಿದೆ. ಗುಡ್ ನ್ಯೂಸ್ ಅಂದ್ರೆ ಕೊರೊನಾದಿಂದ ಗುಣ ಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದ್ದು ಭಾನುವಾರ ಒಂದೇ ದಿನ 71 ಮಂದಿ ಕೊವಿಡ್ ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿದ್ದಾರೆ.

ಭಾನುವಾರ ಕೊರೊನಾಗೆ ಮೂವರ ಬಲಿ

Advertisement

ಜಿಲ್ಲೆಯಲ್ಲಿ ಭಾನುವಾರ ಮೂವರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಪಾವಗಡ ತಾಲ್ಲೂಕಿನ ಹೊಸಹಳ್ಳಿ ತಾಂಡ ಗ್ರಾಮದ 60 ವರ್ಷದ ವೃದ್ದ ಮತ್ತು ತುಮಕೂರು ತಾಲ್ಲೂಕಿನ ಭೀಮಸಂದ್ರ 62 ವರ್ಷದ ವೃದ್ದ ಹಾಗೂ ಚಿ. ನಾ. ಹಳ್ಳಿ ತಾಲ್ಲೂಕಿನ ಹುಳಿಯಾರಿನ 55 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 23ಕ್ಕೇ ಏರಿಕೆಯಾಗಿದೆ. 

ರಾಜ್ಯದಲ್ಲಿ ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದ್ರೆ ತುಮಕೂರು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣದಲ್ಲಿದ್ದು ಜನರು ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ನಿಯಮಗಳನ್ನ ಅನುಸರಿದ್ರೆ ಇನ್ನಷ್ಟು ನಿಯಂತ್ರಣಕ್ಕೆ ಬರಲಿದೆ. ಜನರು ಮನೆಯಲ್ಲಿಯೇ ಇದ್ದು ಅವಶ್ಯಕತೆ ಇದ್ದಲ್ಲಿ ಮಾತ್ರ ಮನೆಯಿಂದ ಹೊರಗೆ ಬನ್ನಿ. ಅನಾವಶ್ಯಕವಾಗಿ ಹೊರಗೆ ಬಂದು ಅಡ್ಡಾಡಿದ್ರೆ ಕೊರೊನಾ ನಿಮ್ಮ ಮನೆಯ ಅತಿಥಿಯಾಗುವುದರಲ್ಲಿ ಯಾವುದೇ ಸಂಶಯ ಇಲ್ಲಾ.

ತಾಲ್ಲೂಕುವಾರು ಸೋಂಕಿತರ ಸಂಖ್ಯೆ

ತುಮಕೂರು ತಾಲ್ಲೂಕಿನಲ್ಲಿ ಇಂದು ಅತಿಹೆಚ್ಚು ಕೊರೊನಾ ಸೊಂಕಿತರು ಕಂಡುಬಂದಿದ್ದು ತಿಪಟೂರು ಹೊರತು ಪಡಿಸಿ ಉಳಿದ ಎಲ್ಲಾ ತಾಲ್ಲೂಕುಗಳಲ್ಲಿಯೂ ಭಾನುವಾರ ಸೋಂಕಿತರು ಪತ್ತೆಯಾಗಿದ್ದಾರೆ.

ತುಮಕೂರು 25

ಚಿಕ್ಕನಾಯಕನಹಳ್ಳಿ 4

Advertisement

ಪಾವಗಡ 4

ಮಧುಗಿರಿ 3

ಶಿರಾ 3

ಕುಣಿಗಲ್ 3

ಕೊರಟಗೆರೆ 2

Advertisement

ತುರುವೇಕೆರೆ 1

ಗುಬ್ಬಿ 1

ತಿಪಟೂರು 0

ಮಗು, ಗರ್ಭಿಣಿಯರು, ಪೊಲೀಸರಿಗೆ ಸೊಂಕು

ಜಿಲ್ಲೆಯಲ್ಲಿ ಭಾನುವಾರ ಪತ್ತೆಯಾಗಿರುವ 46 ಹೊಸ ಕೊರೊನಾ ಸೊಂಕಿತ ಪ್ರಕರಣಗಳಲ್ಲಿ 3 ಜನ ಗರ್ಭಿಣಿಯರು, 1 ಮಗು, 2 ಪೊಲೀಸರು ಹಾಗೂ 60 ವರ್ಷ ದಾಟಿದ 7 ಜನ ವೃದ್ದರಿಗೆ ಸೊಂಕು ದೃಡಪಟ್ಟಿದೆ.

Advertisement

700 ರ ಗಡಿ ತಲುಪಿದ ಸೊಂಕಿತರು

ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 700ರ ಗಡಿ ತಲುಪಿದ್ದು ಈವರೆಗೆ 699 ಜನ ಕೊರೊನಾ ಸೊಂಕಿತರು ಪತ್ತೆಯಾಗಿದ್ದಾರೆ. ಗುಡ್ ನ್ಯೂಸ್ ಅಂದ್ರೆ ಕೊರೊನಾದಿಂದ ಗುಣಮುಖರಾದ 71 ಜನರು ಭಾನುವಾರ ಒಂದೇ ದಿನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಒಟ್ಟು ಸೊಂಕಿತರ ಅರ್ಧದಷ್ಟು 358 ಜನರು ಈವರೆಗೆ ಗುಣಮುಖರಾಗಿದ್ದಾರೆ.

ಬಾಕಿ 318 ಜನ ಸೊಂಕಿತರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಕೊರೊನಾ ನಿಯಂತ್ರಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಕಟ್ಟು ನಿಟ್ಟಿನ ಕ್ರಮಗಳನ್ನ ಅನುಸರಿಸಿದ್ರು ಸೊಂಕಿತರ ಸಂಖ್ಯೆ ದಿನೆ ದಿನೆ ಹೆಚ್ಚಾಗುತ್ತಲೇ ಇದೆ. ಇದೇ ರೀತಿ ಮುಂದುವರಿದರೆ ಕೆಲವೇ ದಿನಗಳಲ್ಲಿ ಸೊಂಕಿತರ ಸಂಖ್ಯೆ ಸಾವಿರ ಗಡಿ ತಲುಪಿದ್ರು ಅಚ್ಚರಿಯಿಲ್ಲ ಎಂಬಂತಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ