Featured
ರಾಹುಲ್ ಗಾಂಧಿ ಟ್ವಿಟರ್ನಲ್ಲಿ ಮೋದಿ ಸರ್ಕಾರದ 6 ತಿಂಗಳ ಪ್ರೊಗ್ರೆಸ್ ಕಾರ್ಡ್ – ಕೊರೊನಾ ತಡೆಯುವ ಬದಲು ರಾಜಕೀಯ ಮಾಡ್ತಿದ್ದಾರಂತೆ ಪ್ರಧಾನಿ..!

ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ಕೊರೊನಾ ಕಾಟಕ್ಕೆ ಇಡಿ ವಿಶ್ವವೇ ಬೆಚ್ಚಿಬಿದ್ದಿದೆ. ಭಾರತದಲ್ಲೂ ಕೊರೊನಾ ಉಗ್ರಸ್ವರೂಪ ತಾಳಿದೆ. ಕೇಂದ್ರ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡರೂ ಕೊರೊನಾ ಕಂಟ್ರೋಲ್ ಮಾಡಲು ಸಾಧ್ಯವಾಗುತ್ತಿಲ್ಲ. ಈ ನಡುವೆ ಕಾಂಗ್ರೆಸ್ ಬಿಜೆಪಿ ಮತ್ತು ನರೇಂದ್ರ ಮೋದಿಯನ್ನು ಟಾರ್ಗೆಟ್ ಮಾಡಿದೆ. ಕೊರೊನಾ ಶುರುವಾಗಿ 6 ತಿಂಗಳು ಕಳೆದ್ರೂ ಮೋದಿ ಸರ್ಕಾರ ಅದನ್ನು ತಡೆಗಟ್ಟಲು ಸಾಧ್ಯವಾಗಿಲ್ಲ. ಅಷ್ಟೇ ಅಲ್ಲ ಕಳೆದ 6 ತಿಂಗಳುಗಳಲ್ಲಿ ಮೋದಿ ಸರ್ಕಾರದ ಸಾಧನೆ ತೃಪ್ತಿದಾಯಕವಾಗಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟರ್ ಮೂಲಕ ಕಿಡಿಕಾರಿದ್ದಾರೆ.
ಮೋದಿ ಸರ್ಕಾರ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಪರಿಣಾಮಕಾರಿ ನಿರ್ಣಯಗಳನ್ನು ಕೈಗೊಂಡಿಲ್ಲ. ಜನರನ್ನು ದಾರಿ ತಪ್ಪಿಸುವ ಹಾಗೂ ಪ್ರಚಾರ ಪಡೆಯುವ ಕಾರ್ಯ ಮಾತ್ರ ನಡೆದಿದೆ. ಅಷ್ಟೇ ಅಲ್ಲ ಚುನಾವಣೆಯಲ್ಲಿ ಆಯ್ಕೆಯಾದ ಸರ್ಕಾರಗಳನ್ನು ಉರುಳಿಸುವುದನ್ನೇ ಕಾಯಕ ಮಾಡಿಕೊಂಡಿದೆ. ಅಷ್ಟೇ ಅಲ್ಲ ರಾಹುಲ್ ಗಾಂಧಿ ಕಳೆದ 6 ತಿಂಗಳುಗಳಲ್ಲಿ ಮೋದಿ ಸರ್ಕಾರ ಏನು ಮಾಡಿದೆ ಅನ್ನುವ ಪಟ್ಟಿಯನ್ನೂ ಮಾಡಿದ್ದಾರೆ.
कोरोना काल में सरकार की उपलब्धियां:
● फरवरी- नमस्ते ट्रंप
● मार्च- MP में सरकार गिराई
● अप्रैल- मोमबत्ती जलवाई
● मई- सरकार की 6वीं सालगिरह
● जून- बिहार में वर्चुअल रैली
● जुलाई- राजस्थान सरकार गिराने की कोशिश
इसी लिए देश कोरोना की लड़ाई में 'आत्मनिर्भर' है।— Rahul Gandhi (@RahulGandhi) July 21, 2020
ರಾಹುಲ್ ಟ್ವಿಟರ್ ದಾಳಿ
- ಫೆಬ್ರವರಿ: ನಮಸ್ತೆ ಟ್ರಂಪ್
- ಮಾರ್ಚ್: ಮಧ್ಯಪ್ರದೇಶದಲ್ಲಿ ಸರ್ಕಾರ ಉರುಳಿಸಿದ ಬಿಜೆಪಿ
- ಏಪ್ರಿಲ್: ದೀಪ ಬೆಳಗಿಸುವಂತೆ ಪ್ರಧಾನಿ ಮೋದಿ ಕರೆ
- ಮೇ: ಮೋದಿ ಸರ್ಕಾರದ 6ನೇ ವರ್ಷಚರಣೆ
- ಜೂನ್: ಬಿಹಾರದಲ್ಲಿ ವರ್ಚುವಲ್ ಚುನಾವಣಾ ಸಮಾವೇಶ
- ಜುಲೈ: ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಉರುಳಿಸುವ ಪ್ರಯತ್ನ
ಕೇವಲ ಪ್ರಚಾರದಲ್ಲಿ ಮಾತ್ರ ಕಾಲಕಳೆಯುತ್ತಿರುವ ಮೋದಿ ಸರ್ಕಾರ ಕೊರೊನಾ ತಡೆಗಟ್ಟಲು ಪ್ಲಾನ್ ಮಾತ್ರ ಮಾಡುತ್ತಿದೆ. ಆದರೆ ಅದನ್ನು ಸರಿಯಾದ ದಾರಿಯಲ್ಲಿ ಅನುಷ್ಠಾನಗೊಳಿಸಿಲ್ಲ ಎಂದು ಕಿಡಿಕಾರಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?