Featured
ಕಾವೇರಿ ನದಿ ಭಾಗದಲ್ಲೂ ಭರ್ಜರಿ ಮಳೆ : ತಮಿಳುನಾಡಿನ ಕ್ಯಾತೆ ತಪ್ಪುತ್ತಾ..?

ಮೈಸೂರು/ಹಾಸನ : ಕಾವೇರಿ ಜಲಾನಯನ ಪ್ರದೇಶದಲ್ಲೂ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆ ಆಗ್ತಿದ್ದು, ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ. ಕೇರಳದ ವಯನಾಡಿನಲ್ಲಿ ಭಾರೀ ಮಳೆಯಾಗಿದ್ದು, ಕಬಿನಿ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರ್ತಿದೆ. ಇದ್ರಿಂದಾಗಿ ಬಹುತೇಕ ನಾಳೆ ಅಥವಾ ನಾಡಿದ್ದು, ಕಬಿನಿ ಡ್ಯಾಂ ಭರ್ತಿ ಆಗಲಿದೆ. ಹೀಗಾಗಿ, ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಿದ್ದು, ಸುರಕ್ಷಿತ ಪ್ರದೇಶಗಳಿಗೆ ಹೋಗುವಂತೆ ಸೂಚನೆ ನೀಡಲಾಗಿದೆ.
ಇತ್ತ ಹೇಮಾವತಿಯ ಒಳಹರಿವು ಹೆಚ್ಚಾಗಿದೆ. ಹೇಮಾವತಿ ಡ್ಯಾಂಗೆ ಹೆಚ್ಚಿನ ನೀರು ಬಂದ ಹಿನ್ನೆಲೆಯಲ್ಲಿ ಹಾಸನ, ತುಮಕೂರು, ಮಂಡ್ಯ ಜಿಲ್ಲೆಯ ನಾಲೆಗಳಿಗೆ ನೀರು ಹರಿಸಲು ನಿರ್ಧಾರ ಮಾಡಲಾಗಿದೆ. ಮಧ್ಯರಾತ್ರಿಯಿಂದಲೇ ಹೇಮಾವತಿ ಡ್ಯಾಂನಿಂದ ನಾಲೆಗಳಿಗೆ ನೀರು ಹರಿಯಲಿದೆ.
ಕೆಆರ್ಎಸ್ ಜಲಾಶಯಕ್ಕೂ ಒಳಹರಿವು ಹೆಚ್ಚಾಗಿದೆ. ಸದ್ಯ ಕೆಆರ್ಎಸ್ ಡ್ಯಾಂನಲ್ಲಿ 10 ಟಿಎಂಸಿ ನೀರು ಶೇಖರಣೆಯಾಗಿದ್ದು, 25 ಸಾವಿರ ಕ್ಯೂಸೆಕ್ ಒಳಹರಿವು ಬರ್ತಿದೆ. ಹೊರ ಹರಿವು 6 ಸಾವಿರ ಕ್ಯೂಸೆಕ್ ಇದೆ. ಇದೇ ರೀತಿ ಒಳಹರಿವು ಒಂದು ವಾರ ಬಂದಿದ್ದೇ ಆದಲ್ಲಿ, ಕೆಆರ್ಎಸ್ ಡ್ಯಾಂ ಕೂಡ ಭರ್ತಿ ಆಗೋದ್ರಲ್ಲಿ ಸಂಶಯವಿಲ್ಲ.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಕೇರಳದ ವಯನಾಡು ಭಾಗದಲ್ಲಿ ಮಳೆ ಆಗ್ತಿರೋದ್ರಿಂದ ಕಾವೇರಿ ನದಿಗೆ ಹೆಚ್ಚಿನ ನೀರು ಹರಿದು ಬರ್ತಿದೆ. ಇದರಿಂದ ತಮಿಳುನಾಡಿಗೆ ನೀರಿನ ಹರಿವು ಕೂಡ ಹೆಚ್ಚಾಗಲಿದ್ದು, ತಮಿಳುನಾಡಿನ ನೀರಿನ ಕ್ಯಾತೆ ತಪ್ಪಲೂ ಬಹುದು.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















