ರೈಸಿಂಗ್ ಕನ್ನಡ :
ಬೆಂಗಳೂರು :
ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ಆರ್ಭಟ ಮಂಗಳವಾರವೂ ಜೋರಾಗಿದ್ದು ಸತತ ಆರನೇ ದಿನ 5,536 ಹೊಸ ಸೋಂಕಿತರ ಕೇಸ್ ಪತ್ತೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಮಂಗಳವಾರ ರಅಜ್ಯದಲ್ಲಿ 5,536 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,07,001ಕ್ಕೆ ಏರಿಯಾಗಿದೆ.
ರಾಜ್ಯದಲ್ಲಿ ಒಟ್ಟು 64,434 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಮಂಗಳವಾರ ಸಾವಿನಲ್ಲಿ ಕೊರೊನಾ ಶತಕ ಬಾರಿಸಿದೆ. ರಾಜ್ಯಾದ್ಯಂತ ಒಟ್ಟು 102 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 2 ಸಾವಿರ ದಾಟಿದೆ. ಇದುವರೆಗೂ ಕೋವಿಡ್ 19ಗೆ 2,055 ಮಂದಿ ಉಸಿರು ಬಿಟ್ಟಿದ್ದಾರೆ. ಆಸ್ಪತ್ರೆಯಿಂದ 2,819 ಮಂದಿ ಬಿಡುಗಡೆಯಾಗಿದ್ದಾರೆ.ಇದುವರೆಗೂ ಒಟ್ಟು 40,504 ಮಂದಿ ಬಿಡುಗಡೆಯಾದಂತಾಗಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಮುಂದುವರೆದಿದೆ. ಕಳೆದ ಎರಡು ದಿನಗಳಿಂದ ಸಾವಿನ ಸಂಖ್ಯೆ ಕಡಿಮೆಯಾಗಿದೆ.
ಬೆಂಗಳೂರಿನಲ್ಲಿ 1,898 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 48,821 ಏರಿದೆ.40 ಮಂದಿ ಸಾವನಪ್ಪಿದ್ದು ನಗರದಲ್ಲಿ ಈವರೆಗೂ 957 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಂಗಳವಾರ 572 ಮಂದಿ ಬಿಡುಗಡೆಯಾಗಿದ್ದು 12,761 ಮಂದಿ ಬಿಡುಗಡೆಯಾಗಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?