ರೈಸಿಂಗ್ ಕನ್ನಡ :
ಬೆಳಗಾವಿ :
ದಿಢೀರ್ ದೆಹಲಿ ಭೇಟಿ ಹಿನ್ನೆಲೆ ನಡೆಯುತ್ತಿರುವ ಚರ್ಚೆಗೆ ಡಿಸಿಎಂ ಲಕ್ಷ್ಮಣ ಸವದಿ ಅನಗತ್ಯವಾದ ಪ್ರಚಾರ ಬೇಡ ಎಂದು ಮನವಿ ಮಾಡಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಬೆನ್ನಲ್ಲೆ ಬಿಜೆಪಿ ಒಳಗೆ ಸಂಘರ್ಷ ಶುರುವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. ಅದರಲ್ಲೂ ಸಿಎಂ ಯಡಿಯೂರಪ್ಪ ಅವರನ್ನ ಬದಲಾವಣೆ ಮಾಡುವ ವಿಚಾರ ಬಿಜೆಪಿಯೊಳಗೆ ಭಾರೀ ಚರ್ಚೆ ನಡೆಯುತ್ತಿದೆ. ಇದರ ಬೆನ್ನಲ್ಲೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಉಪಮುಖ್ಯಮಂತ್ರ ಲಕ್ಷ್ಮಣ ಸವದಿ ಮುಂದಿನ ಸಿಎಂ ಆಗುತ್ತಾರೆ ಎನ್ನುವ ವಿಷಯ ಹರಿದಾಡುತ್ತಿದೆ.
ಈ ಸುದ್ದಿ ಬಗ್ಗೆ ಸ್ವತಃ ಡಿಸಿಎಂ ಲಕ್ಷ್ಮಣ ಸವದಿ ಸಾಮಾಜಿಕ ಜಾಲತಾಣದಲ್ಲಿ ಮೂಲಕ ಮನವಿ ಮಾಡಿ ತೆರೆ ಎಳೆದಿದ್ದಾರೆ. ಟ್ವಿಟರ್ ಮತ್ತು ಫೇಸ್ಬುಕ್ ನಲ್ಲಿ ಸಾಲು ಸಾಲು ಪೋಸ್ಟ್ ಮಾಡಿದ್ದಾರೆ.
ತಮ್ಮ ಹಿತೈಷಿಗಳು ಮತ್ತು ಮಾಧ್ಯಮದವರಲ್ಲಿ ಅನಗತ್ಯ ಪ್ರಚಾರ ಬೇಡ.ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯವಾದ ಪ್ರಚಾರ ಬೇಡ ಎಂದು ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ವರಿಷ್ಠರೊಂದಿಗೆ ಭೇಟಿ ಪೂರ್ವ ನಿರ್ಧಾರಿತ ಕಾರ್ಯಕ್ರಮ ಇತ್ತು.ದೆಹಲಿ ಭೇಟಿ ಬಗ್ಗೆ ಆಧಾರ ರಹಿತ ಕಲ್ಪನೆ ಬೇಡ ಎಂದು ಅಥಣಿ ಮತಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?