ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :
ತ್ಯಾಗ ಮತ್ತು ಬಲಿದಾನದ ಸಂಕೇತವಾಗಿ ಆಚರಿಸಲ್ಪಡುವ ಮುಸಲ್ಮಾನರ ಪವಿತ್ರ ಹಬ್ಬಗಳಲ್ಲಿ ಒಂದಾದ ಬಕ್ರಿದ್ ಹಬ್ಬವನ್ನ ದೇಶದೆಲ್ಲೆಡೆ ಸಂಭ್ರಮ ಮತ್ತು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಶುಕ್ರವಾರವೇ ಬಕ್ರಿದ್ ಆಚರಿಸಲಾಗಿತ್ತು. ದೇಶದ ಬಹುತೇಕ ಕಡೆಗಳಲ್ಲಿ ಶನಿವಾರ ಹಬ್ಬವನ್ನ ಆಚರಿಸಲಾಗುತ್ತಿದೆ.
ಬಕ್ರಿದ್ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಷಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಎಲ್ಲರಿಗೂ ಈದ್-ಉಲ್-ಅದಾ ಹಬ್ಬದ ಶುಭಾಷಯಗಳು. ನ್ಯಾಯಯುತ, ಸಾಮರಸ್ಯ ಮತ್ತು ಸಮಾಜವನ್ನು ಒಟ್ಟುಗೂಡಿಸಲು ಈ ದಿನ ನಮಗೆ ಪ್ರೇರಣಾದಾಯಕವಾಗಲಿ ಎಂದು ಆಶಿಸಿದ್ದಾರೆ. ಎಲ್ಲರಲ್ಲೂ ಸಹೋದರತ್ವ ಮತ್ತು ಸಹಾನುಭೂತಿಯ ಮನೋಭಾವವನ್ನು ಹೆಚ್ಚಿಸಲಿ ಎಂದು ಪ್ರಧಾನಿ ನರೇಂದ್ರ ಮೋದಿ, ಶುಭಾಶಯ ತಿಳಿಸಿದ್ದಾರೆ.
ವಿಶ್ವದಾದ್ಯಂತ ಮುಸಲ್ಮಾನ್ ಬಾಂಧವರು ಶ್ರದ್ದೆಯಿಂದ ಆಚರಿಸುವ ಹಬ್ಬಗಳಲ್ಲಿ ಬಕ್ರೀದ್ ಕೂಡ ಪ್ರಾಮುಖ್ಯತೆ ಪಡೆದಿದೆ. ಬಕ್ರೀದ್ ದಿನ ಬೆಳಗ್ಗೆ ಮಸೀದಿ ಮತ್ತು ಈದ್ಗಾಗಳಲ್ಲಿ ವಿಶೇಷ ನಮಾಜ್ ಇರುತ್ತದೆ. ಈ ವೇಳೆ ಮಕ್ಕಳು ಹಿರಿಯರೆನ್ನದೆ ಹೊಸ ಬಟ್ಟೆ ಧರಿಸಿ ಪಾಲ್ಗೊಳ್ಳುತ್ತಾರೆ. ಹಬ್ಬದ ವಿಶೇಷವಾಗಿ ಸ್ನೇಹಿತರು ಮತ್ತು ಸಂಬಂಧಿಕರ ಮನೆಗೆ ತೆರಳಿ ಶುಭಾಶಯ ತಿಳಿಸುತ್ತಾರೆ.
ದೇಶದೆಲ್ಲೆಡೆ ಕೊರೊನಾ ನಡುವೆಯೂ ಬಕ್ರೀದ್ ಅನ್ನ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಹವಲೆಡೆ ಹಬ್ಬವನ್ನ ಸರಳವಾಗಿ ಆಚರಿಸುತ್ತಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?