ರೈಸಿಂಗ್ ಕನ್ನಡ
ಪ್ರತಿನಿಧಿ, ವಿಶ್ವಕುಮಾರ್, ಬೀದರ್ :
ವ್ಯಕ್ತಿಯೊಬ್ಬ ತಲವಾರ್ ಹಿಡಿದುಕೊಂಡು ಪೊಲೀಸರನ್ನೆ ಅಟ್ಟಾಡಿಸಿ ಓಡಿಸಿದ ಘಟನೆ ಬೀದರ್ನಲ್ಲಿ ನಡೆದಿದೆ.
ಶನಿವಾರ ನಗರದ ಓಲ್ಡ್ ಸಿಟಿಯಲ್ಲಿ ರಸ್ತೆ ಮೇಲೆ ನಿಂತಿದ್ದ ವ್ಯಕ್ತಿಗೆ ಗಸ್ತಿನಲ್ಲಿದ್ದ ಪೊಲೀಸರು ಮನೆಗೆ ತೆರಳುವಂತೆ ಸೂಚಿಸಿದ್ದಾರೆ. ಅದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ವ್ಯಕ್ತಿ ತನ್ನ ದ್ವಿಚಕ್ರ ವಾಹನದಲ್ಲಿ ಇದ್ದ ತಲವಾರು ತೆಗೆದು ಹೊಡೆಯಲು ಬೆನ್ನಟ್ಟಿದ್ದಾನೆ. ಇದರಿಂದ ಗಾಬರಿಗೊಂಡ ಪೊಲೀಸ್ ಪೇದೆ ಹೆದರಿ ಕಿರುಚಾಡಿ ಎಸ್ಪಿ ಕಚೇರಿಯತ್ತ ಓಡಿಹೋದರು.
ಗಸ್ತಿನಲ್ಲಿದ್ದ ಪೊಲೀಸ್ ಪೇದೆಯ ಕಿರುಚಾಟದ ಶಬ್ದ ಕೇಳಿ ಮನೆಯಿಂದ ಹೊರಗೆ ಬಂದ ಕೆಲವರು ವ್ಯಕ್ತಿಯನ್ನು ಹಿಡಿಯಲು ಯತ್ನಿಸಿದರು. ಆಗ ಅವರ ಮೇಲೂ ಹಲ್ಲೆಗೆ ಯತ್ನಿದ್ದಾನೆ. ಅಲ್ಲಿಯೆ ಇದ್ದ ಕಾರಿನ ಗಾಜನ್ನ ಪುಡಿ ಮಾಡಿದ್ದಾನೆ. ಆಗ ಜನ ದಿಕ್ಕಾಪಾಲಾಗಿ ಓಡಿದ್ದಾರೆ. ಬಳಿಕ ಯುವಕರು ಜಿಲ್ಲಾ ಪೊಲೀಸ್ ಅಧಿಕಾರಿಗೆ ನಾಲ್ಕೈದು ಬಾರಿ ಕರೆ ಮಾಡಿದರೂ ಫೋನ್ ರಿಸೀವ್ ಮಾಡಲಿಲ್ಲ. ಬಳಿಕ ನ್ಯೂಟೌನ್ ಪೊಲೀಸರಿಗೂ ಮನವಿ ಮಾಡಿದರು.
ಪೊಲೀಸರು ಬರುವುದು ತಡವಾದ್ದರಿಂದ ಕೊನೆಗೆ ಒಬ್ಬ ಧೈರ್ಯ ಮಾಡಿ ಆತನನ್ನು ಹಿಂಬದಿಯಿಂದ ಹಿಡಿದ ಮೇಲೆ ಅಲ್ಲಿ ಸೇರಿದ ಜನ ಆತನ ಕೈಯಿಂದ ತಲವಾರ ಕಿತ್ತು ಕೊಂಡರು.
ನಂತರ ಅಲ್ಲಿಗೆ ಪೊಲೀಸರು ಬಂದು ಆತನನ್ನು ವಶಕ್ಕೆ ತೆಗೆದುಕೊಂಡರು….ನಂತರ ಆತನನ್ನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಪಡಿಸಿದ ಬಳಿಕ ಆತ ಒಬ್ಬ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದ್ದು, ಆತನಿಗೆ ಹೆಚ್ಚಿನ ಚಿಕಿತ್ಸೆ ಮುಂದುವರೆಸಿದ್ದು, ಅಸ್ವಸ್ಥನ ಮನೆಯವರ ಹುಟುಕಾಟಕ್ಕೆ ಪೊಲೀಸ್ ನಿರತರಾಗಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?