Connect with us

Featured

ಮಧ್ಯಪ್ರದೇಶ, ರಾಜಸ್ಥಾನ ಬಳಿಕ ಜಾರ್ಖಂಡ್​ನಲ್ಲಿ ಕಾಂಗ್ರೆಸ್ ಗಢಗಢ- ಬಿಜೆಪಿ ಜೊತೆ ಕೈ ಜೋಡಿಸ್ತಾರಾ 15 ಕಾಂಗ್ರೆಸ್ ಶಾಸಕರು..?

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

ದೇಶದಲ್ಲಿ ಎಲ್ಲೂ ಕೂಡ ಕಾಂಗ್ರೆಸ್​ ಸರ್ಕಾರ ಆಡಳಿತ ನಡೆಸಲು ಸಾಧ್ಯ ಇಲ್ವಾ. ಸದ್ಯ ಈ ಪ್ರಶ್ನಗೆ ಉತ್ತರ ಇಲ್ಲ ಅನ್ನೋದಷ್ಟೇ. ಯಾಕಂದ್ರೆ ಮಧ್ಯಪ್ರದೇಶದಲ್ಲಿ ಸರ್ಕಾರ ಕಳೆದುಕೊಂಡ ಕಾಂಗ್ರೆಸ್​, ರಾಜಸ್ಥಾನದಲ್ಲೂ ಅದೇ ಸ್ಥಿತಿಯಲ್ಲಿದೆ. ಈಗ ಜಾರ್ಖಂಡ್​ನಲ್ಲೂ ಕಾಂಗ್ರೆಸ್​ ಮತ್ತು ಮೈತ್ರಿಪಕ್ಷ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ.

Advertisement

ಜಾರ್ಖಂಡ್​ ಮುಕ್ತಿ ಮೋರ್ಚಾ ಮತ್ತು ಕಾಂಗ್ರೆಸ್​ ಮೈತ್ರಿ ಸರ್ಕಾರ ಹೆಚ್ಚು ದಿನ ಬಾಳುವ ಲಕ್ಷಣ ಕಾಣುತ್ತಿಲ್ಲ. ಜೆಎಂಎಂ ಮುಖ್ಯಮಂತ್ರಿ ಹೇಮಂತ್​ ಸೊರೆನ್​ ವಿರುದ್ಧ ಕಾಂಗ್ರೆಸ್​ ಶಾಸಕರೇ ಅಸಮಧಾನಗೊಂಡಿದ್ದಾರೆ. ಅಷ್ಟೇ ಅಲ್ಲ ಕಾಂಗ್ರೆಸ್​ ಶಾಸಕರು  ಜೆಎಂಎಂ ಕಾಂಗ್ರೆಸ್​ ಅನ್ನು ಕಡೆಗಣಿಸುತ್ತಿದೆ ಎಂದು ದೆಹಲಿ ಮಟ್ಟದಲ್ಲಿ ದೂರಿದ್ದಾರೆ.

ಮುಖ್ಯಮಂತ್ರಿ ಹೇಮಂತ್​ ಸೊರೇನ್​ 11 ಸಚಿವ ಸ್ಥಾನಗಳನ್ನು ತುಂಬಿದ್ದು ಒಂದು ಸ್ಥಾನವನ್ನು ಖಾಲಿ ಇಟ್ಟುಕೊಂಡಿದ್ದಾರೆ.  ಈ ಸ್ಥಾನದ ಮೇಲೆ ಕಾಂಗ್ರೆಸ್​ ಶಾಸಕರು ಕಣ್ಣಿಟ್ಟಿದ್ದು, ಆದರೆ ಅದನ್ನು ಕೊಡಲು ಜೆಎಂಎಂ ಹಿಂದೇಟು ಹಾಕುತ್ತಿದೆ. ಹೀಗಾಗಿ ಜೆಎಂಎಂ ವಿರುದ್ಧ ಕಾಂಗ್ರೆಸ್​ ಶಾಸಕರು ಮುನಿಸಿಕೊಂಡಿದ್ದಾರೆ. ಜಾರ್ಖಂಡ್​ನ ಹಿರಿಯ ಶಾಸಕರು  ರಾಹುಲ್​ ಗಾಂಧಿಯನ್ನು ಭೇಟಿ ಮಾಡುವ ಪ್ರಯತ್ನ ಮಾಡಿದ್ದರು ಅದು ಸಾಧ್ಯವಾಗಿಲ್ಲ. ಅಷ್ಟೇ ಅಲ್ಲ ರೆಬೆಲ್​ ಶಾಸಕರು ಜಾರ್ಖಂಡ್​ ಕಾಂಗ್ರೆಸ್​ ಅಧ್ಯಕ್ಷರ ವಿರುದ್ಧ ತಿರುಗಿಬಿದ್ದಿದ್ದಾರೆ.

81 ಸದಸ್ಯ ಬಲದ ಜಾರ್ಖಂಡ್​ ವಿಧಾನ ಸಭೆಯಲ್ಲಿ ಜೆಎಂಎಂ 29, ಕಾಂಗ್ರೆಸ್​ 15 ಸ್ಥಾನಗಳನ್ನು ಹೊಂದಿದೆ. ಆರ್​ಜೆಡಿ, ಎನ್​ಸಿಪಿ ಮತ್ತು ಸಿಪಿಐಎಂ ತಲಾ ಒಂದೊಂದು ಸ್ಥಾನ ಪಡೆದುಕೊಂಡಿದೆ. NDA ಮಿತ್ರಪಕ್ಷಗಳು 30 ಸ್ಥಾನ ಪಡೆದುಕೊಂಡಿವೆ. ಕಾಂಗ್ರೆಸ್​ನ 15 ಶಾಸಕರು ಪಕ್ಷತೊರೆದು ಬಂದರೆ ಬಿಜೆಪಿ ಸರ್ಕಾರ ಮಾಡಲು ಸಾಧ್ಯವಾಗುತ್ತದೆ.

Advertisement

ಕಾಂಗ್ರೆಸ್​​ ಆಂತರಿಕ ಕಚ್ಚಾಟ ಈಗ ಕಾಂಗ್ರೆಸ್​ ಪಾಲಿಗೆ ದುಬಾರಿ ಆಗುತ್ತಿದೆ. ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿ ಕಮಲ್​ ನಾಥ್​ ಹಾಗೂ ಜ್ಯೋತಿರಾಧಿತ್ಯ ಸಿಂಧಿಯಾ ನಡುವಿನ ಕಚ್ಚಾಟ ಕಾಂಗ್ರೆಸ್​ ಸರ್ಕಾರವನ್ನು ಪತನಗೊಳಿಸಿತ್ತು. ಸಿಂಧಿಯಾ ಕಾಂಗ್ರೆಸ್​ ಬಿಟ್ಟು ಬಿಜೆಪಿ ಸೇರಿಕೊಂಡಿದ್ದಾರೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ನಡೆಸುತ್ತಿದೆ.

ರಾಜಸ್ಥಾನದಲ್ಲಿ ಅಶೋಕ್​ ಗೆಹ್ಲೋಟ್​ ಮತ್ತು ಸಚಿನ್ ಪೈಲಟ್​ ನಡುವಿನ ತಿಕ್ಕಾಟದಿಂದ ಕಾಂಗ್ರೆಸ್​ ಸರ್ಕಾರಕ್ಕೆ ಪತನಗೊಳ್ಳುವ ಭೀತಿ ಎದುರಾಗಿದೆ. ಪೈಲಟ್​​ ಮತ್ತು ಹಲವು ಬೆಂಬಲಿಗರು ಸರ್ಕಾರ ಬೀಳಿಸಲು ಓಡಾಡುತ್ತಿದ್ದಾರೆ. ಸುಪ್ರೀಂ ಕೋರ್ಟ್​ನಲ್ಲಿ ಕೇಸ್​ ಕೂಡ ದಾಖಲಾಗಿದೆ. ರಾಜಸ್ಥಾನದಲ್ಲೂ ಕಾಂಗ್ರೆಸ್​ ಸ್ಥಿತಿ ಅಯೋಮಯವಾಗಿದೆ.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ