ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು ಭಾನುವಾರ 5,532 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಭಾನುವಾರ ರಾಜ್ಯಾದ್ಯಂತ 5,532 ಹೊಸ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 1,34,819ಕ್ಕೆ ಏರಿದೆ. ರಾಜ್ಯದಲ್ಲಿ 74,590 ಸಕ್ರಿಯ ಪ್ರಕರಣಗಳಿವೆ.
ಸಾವಿನಲ್ಲೂ ಹೆಮ್ಮಾರಿಯ ಆರ್ಭಟ ಜೋರಾಗಿದ್ದು 84 ಮಂದಿ ಸಾವನಪ್ಪಿದ್ದಾರೆ. ರಾಜ್ಯದಲ್ಲಿ ಸಾವನಪ್ಪಿದವರ ಸಂಖ್ಯೆ 2,496ಕ್ಕೆ ಏರಿದೆ. ಸೋಂಕಿನಿಂದ ಚೇತರಿಸಿಕೊಂಡು ಭಾನುವಾರ 4,077 ಮಂದಿ ಬಿಡುಗಡೆಯಾಗಿದ್ದಾರೆ. ಇದುವರೆಗೂ 57,725 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ 2,105 ಹೊಸ ಕೇಸ್ ದಾಖಲಾಗಿದೆ. ನಗರದಲ್ಲಿ ಸೋಂಕಿತರ ಸಂಖ್ಯೆ 59,501ಕ್ಕೆ ಏರಿದೆ. ಬೆಂಗಳೂರಿನಲ್ಲಿ 37,513 ಸಕ್ರಿಯ ಪ್ರಕರಣಗಳಿವೆ. ಕೆಲವು ದಿನಗಳಿಂದ ಸಾವಿನ ಪ್ರಮಾಣ ಇಳಿಕೆಯಾಗಿದ್ದು ಭಾನುವಾರ 21 ಮಂದಿ ಕೊನೆಯುಸಿರೆಳೆದಿದ್ದಾರೆ. ಈವರೆಗೂ 1,077 ಮಂದಿ ಬಲಿಯಾಗಿದ್ದಾರೆ.2,331 ಮಂದಿ ಬಿಡುಗಡೆಯಾಗಿದ್ದು ಡಿಸ್ಚಾರ್ಜ್ ಆದವರ ಸಂಖ್ಯೆ 20,910 ಕ್ಕೆ ಏರಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?