ರೈಸಿಂಗ್ ಕನ್ನಡ :
ಸ್ಪೋರ್ಟ್ಸ್ ಡೆಸ್ಕ್ :
ಐಪಿಎಲ್ ಅನೌನ್ಸ್ ಆಯ್ತು. ಅಭಿಮಾನಿಗಳು ಖುಷ್ ಆಗಿಯೂ ಆಯ್ತು. ಹಾಗಾದ್ರೆ, ಹೇಗಿದೆ ನಮ್ಮ ಆರ್ಸಿಬಿ ತಯಾರಿ. ಕಪ್ ಗೆಲ್ಲೋಕೆ ಯಾವೆಲ್ಲಾ ತಯಾರಿ ಮಾಡಿಕೊಂಡಿದೆ. ನಾವೇ ಈ ಸಲ ಕಪ್ ಗೆಲ್ಲೋದು ಯಾಕೆ ಅನ್ನೋದಕ್ಕೆ ಇಲ್ಲಿದೆ ಉತ್ತರ
2020 ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ವೇಳೆ ಯಾವ್ಯಾವ ತಂಡಗಳು ಬಲಿಷ್ಠ ಆಗಿವೆ ಎನ್ನುವ ಲೆಕ್ಕಾಚಾರ ಶುರುವಾಗಿದೆ. ಮುಂಚೆಯಿಂದಲೂ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಆದರೆ, ಈ ಬಾರಿ ಬಲಿಷ್ಠವಾಗಿ ಕಾಣುತ್ತಿರುವುದು ನಮ್ಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. 13ನೇ ಆವೃತ್ತಿಯ ಐಪಿಎಲ್ ಹರಾಜಿನಲ್ಲಿ ಆರ್ಸಿಬಿ ಫ್ರಾಂಚೈಸಿ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿ ಮಾಡಿತ್ತು. ಹೀಗೆ ವೀಕ್ ಆಗಿದ್ದ ಜಾಗವನ್ನು ಫಿಲ್ಅಪ್ ಮಾಡಿದೆ. ಕಳೆದ 12 ಸೀಸನ್’ಗಿಂತಲೂ ಈ ಬಾರಿ ಆರ್ಸಿಬಿ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ.
13ನೇ ಆವೃತ್ತಿಯ ಐಪಿಎಲ್ ಟ್ರೋಫಿ ಗೆಲ್ಲುವ ಹಠಕ್ಕೆ ಬಿದ್ದಿರುವ ನಾಯಕ ವಿರಾಟ್ ಕೊಹ್ಲಿ ಪಡೆ, ಉತ್ತಮ ಆಟಗಾರರನ್ನೇ ತಂಡಕ್ಕೆ ಸೇರಿಸಿಕೊಂಡಿದೆ. ಕಳೆದ ಬಾರಿ ಆರ್ಸಿಬಿ ವೀಕ್ನೆಸ್ ಬೌಲಿಂಗ್ ಆಗಿತ್ತು. ಇದಕ್ಕಾಗಿ ಈ ಸಲದ ಬಿಡ್ನಲ್ಲಿ ಡೇಲ್ ಸ್ಟೈನ್, ಕೇನ್ ರಿಚರ್ಡಸನ್, ಕ್ರಿಸ್ ಮೊರೀಸ್, ಇಸುರು ಉದಾನ ಹೀಗೆ ಪ್ರಮುಖ ಆಟಗಾರರನ್ನು ತನ್ನ ತೆಕ್ಕೆಗೆ ಸೇರಿಸಿಕೊಂಡಿದೆ. ಈಗ ಆರ್ಸಿಬಿ ಇನ್ನಷ್ಟು ಸ್ಟ್ರಾಂಗ್ ಆಗಿದೆ. ಕಳೆದ 12 ಸೀಸನ್ನಲ್ಲಿ ಬೆಂಗಳೂರಿಗೆ ಐಪಿಎಲ್ ಟ್ರೋಫಿ ಸಿಕ್ಕಿಲ್ಲ.ಈ ಹಿಂದೆ ಫೈನಲ್ ಪ್ರವೇಶಿಸಿದರೂ ರನ್ನರ್ಅಪ್ಗೆ ತೃಪ್ತಿಪಟ್ಟುಕೊಂಡಿತ್ತು. ಈ ಸಲ ಸ್ಟಾರ್ ಆಟಗಾರರು ಆರ್ಸಿಬಿ ತಂಡದಲ್ಲಿದ್ದಾರೆ. ಈ ಬಾರಿಯಾದರೂ ಬೆಂಗಳೂರಿಗೆ ಐಪಿಎಲ್ ಕಪ್ ಒಲಿಯುತ್ತಾ ಎಂಬುದು ಕಾದು ನೋಡಬೇಕಿದೆ.
ಹಾಗಾದ್ರೆ ಈ ಬಾರಿಯ ಐಪಿಎಲ್ನಲ್ಲಿ ಆರ್ಸಿಬಿ ಉತ್ತಮ ಪ್ರದರ್ಶನಕ್ಕೆ ಯಾರೆಲ್ಲಾ ಕಾರಣರಾಗಲಿದ್ದಾರೆ, ನೋಡೋಣ ಬನ್ನಿ.ಕಳೆದ ಕೆಲವು ಸೀಸನ್ನಿಂದ ಆರ್ಸಿಬಿ ತಂಡಕ್ಕೆ ಉತ್ತಮ ಆರಂಭ ಒದಗಿಸುತ್ತಿರುವ ಪಾರ್ಥಿವ್ ಪಟೇಲ್ ಅವರು ತಮ್ಮ ಜವಾಬ್ದಾರಿಯನ್ನು ಈ ಬಾರಿಯ ನಿಭಾಯಿಸಲಿದ್ದಾರೆ. ನಾಯಕ ವಿರಾಟ್ ಕೊಹ್ಲಿ ತಮ್ಮ ಫೇವರಿಟ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. 4ನೇ ಕ್ರಮಾಂಕ ಮಿ. 360 ಖ್ಯಾತಿಯ ಎಬಿಡಿ ವಿಲಿಯರ್ಸ್ ಅವರಿಗೆ ಹೇಳಿ ಮಾಡಿಸಿದಂತಿದೆ.
ಆಲ್ರೌಂಡರ್ ಶಿವಂ ದುಬೆ ಮೇಲೆ ಈ ಸಲ ಬಾರೀ ನಿರೀಕ್ಷಿಯಿದ್ದು, 5ನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಆರ್ಸಿಬಿ ಈ ಬಾರಿಯ ಹರಾಜಿನಲ್ಲಿ ಗರಿಷ್ಠ ಮೊತ್ತಕ್ಕೆ ಖರೀದಿಸಿದ್ದ ಕ್ರಿಸ್ ಮೊರೀಸ್ ಪಾತ್ರವೂ ಪ್ರತಿ ಪಂದ್ಯದಲ್ಲಿ ಮುಖ್ಯವಾಗಲಿದೆ. ತಂಡದಲ್ಲಿ ಸ್ಪಿನ್ನರ್ ಆಗಿ ಯಜುವೇಂದ್ರ ಚಹಾಲ್ ಹಾಗೂ ವಾಷಿಂಗ್ಟನ್ ಸುಂದರ್ ಆಡುವ ಸಾಧ್ಯತೆ ಹೆಚ್ಚಿದೆ. ಬೌಲರ್ಗಳ ಪೈಕಿ ಡೇಲ್ ಸ್ಟೈನ್ ಅಥವಾ ಕೇನ್ ರಿಚರ್ಡಸನ್ ಆಯ್ಕೆ ಒಂದುಕಡೆಯಲ್ಲಿದ್ದರೆ, ನವ್ದೀಪ್ ಸೈನಿ ಹಾಗೂ ಉಮೇಶ್ ಯಾದವ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವುದು ಖಚಿತ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?