ಗದಗ : ಸತತ 38ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ನಗರಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಯೋಧನಿಗೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ಬೈಕ್ ಜಾಥಾ ಮೂಲಕ ಅದ್ದೂರಿಯಾಗಿ ಸ್ವಾಗತಿಸಲಾಯಿತು. ತಾಲೂಕಿನ ನರಸಾಪೂರ ಗ್ರಾಮದ ಯೋಧ ಅಣ್ಣಪ್ಪ ಜಾಲಿಹಾಳ ಹಾಗೂ ಅವರ ಧರ್ಮಪತ್ನಿಗೆ ಹೂಮಳೆ ಸುರಿಸಿ, ಶಾಲು ಹೋದಿಸಿ ಸನ್ಮಾನಿಸಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ನಗರದ ರೈಲ್ವೆ ನಿಲ್ದಾಣದಿಂದ ಜೆಂಡಾ ಸರ್ಕಲ್, ಗಾಂಧಿ ಸರ್ಕಲ್ ಮಾರ್ಗವಾಗಿ ಐತಿಹಾಸಿಕ ವೀರೇಶ್ವರ ಪುಣ್ಯಾಶ್ರಮದ ವರೆಗೆ ತೆರೆದ ವಾಹನದಲ್ಲಿ ಅದ್ದೂರಿ ಮೇರವಣಿಗೆ ನಡೆಸಲಾಯಿತು. ನಂತರ ವೀರೇಶ್ವರ ಪುಣ್ಯಾಶ್ರಮದ ಪಿಠಾಧಿಪತಿ ಪ. ಪೂ. ಡಾ: ಕಲ್ಲಯ್ಯಜ್ಜನವರಿಗೆ ಯೋಧನ ಕುಟುಂಬಸ್ಥರಿಂದ ತುಲಾಭಾರ ಕಾರ್ಯಕ್ರಮ ನಡೆಯಿತು. ಈ ವೇಳೆ ಆಶೀರ್ವಚನ ನೀಡಿದ ಶ್ರೀಗಳು ಇದು 2227 ತುಲಾಭಾರ ಕಾರ್ಯಕ್ರಮವಾಗಿದ್ದು, ಯೋಧರು ಗಾಳಿ, ಬಿಸಿಲು, ಮಳೆ ಲೆಕ್ಕಿಸದೇ ದೇಶಕ್ಕಾಗಿ ಶ್ರಮ ವಹಿಸುತ್ತಾರೆ. ಗಡಿಯಲ್ಲಿ ನಮ್ಮನ್ನು ಕಾಯ್ದು ನಿವೃತ್ತಿ ಹೊಂದಿ ಸಾಮಾಜಿಕ ಜೀವನದಲ್ಲಿ ಭಾಗವಹಿಸುತ್ತಾರೆ. ಸಾರ್ವಜನಿಕರು ಹಾಗೂ ದೇಶಭಕ್ತರು ಅವರ ಜೊತೆ ಉತ್ತಮ ಬಾಂದವ್ಯ ಹೊಂದಬೇಕು ಎಂದು ಹೇಳಿದರು.
ಈ ವೇಳೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಬಸಲಿಂಗಪ್ಪ ಮುಂಡರಗಿ, ಅರೆ ಸೇನಾ ಪಡೆಯ ಜಿಲ್ಲಾ ಗೌರವಾಧ್ಯಕ್ಷ ಜೊಜರಾಜ, ಹಾಗೂ ವೀರ ನಾರಿಯರ ಅಧ್ಯಕ್ಷೆ ಇಧಿರಾ ಹೆಬಸೂರ ಮತ್ತು ಪದಾದಿಕಾರಿಗಳು, ಸದಸ್ಯರು ಸೇರಿದಂತೆ ಯೋಧನ ಕುಟುಂಭಸ್ಥರು ಉಪಸ್ಥಿತರಿದ್ದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?