ಕ್ರೀಡೆ
ರಣಜಿ ಹಾಗೂ ದೇಶಿ ಪಂದ್ಯಾವಳಿ ನಿರ್ಲಕ್ಷಿಸಿದ್ದ ಐಯ್ಯರ್, ಕಿಶನ್ ಗೆ ಶಾಕ್..!

Cricket : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ವಾರ್ಷಿಕ ಗುತ್ತಿಗೆ ಆಟಗಾರರ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಶ್ರೇಯಸ್ ಐಯ್ಯರ್, ಇಶಾನ್ ಕಿಶನ್ ಕೈ ಬಿಟ್ಟಿದ್ದು ಇಬ್ಬರೂ ಆಟಗಾರರಿಗೆ ಬಿಸಿಸಿಐ ಶಾಕ್ ನೀಡಿದೆ. ಅಂತಾರಾಷ್ಟ್ರೀಯ ಪಂದ್ಯಗಳಿಂದ ಬಿಡುವು ಪಡೆದಿರುವಾಗ, ತಾವು ಪ್ರತಿನಿಧಿಸುವ ರಾಜ್ಯ ಕ್ರಿಕೆಟ್ ತಂಡಗಳು ದೇಶೀಯ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ನಡೆಯುತ್ತಿದ್ದರೆ ಅದರಲ್ಲಿ ಪಾಲ್ಗೊಳ್ಳಬೇಕು ಎಂದು ಬಿಸಿಸಿಐ ಹಿಂದಿನಿಂದಲೂ ಆಟಗಾರರಿಗೆ ಸಲಹೆ ನೀಡುತ್ತಾ ಬಂದಿತ್ತು.
ಒಂದು ವೇಳೆ ಬಿಸಿಸಿಐ ಸಲಹೆ ಮೀರಿ ನಡೆದುಕೊಂಡರೆ ಅಂತಹವರಿಗೆ ಶಿಕ್ಷೆ ನೀಡುವ ಎಚ್ಚರಿಕೆ ನೀಡಿತ್ತು. ಈ ಎಚ್ಚರಿಕೆಯ ನಡುವೆಯೂ ಶ್ರೇಯಸ್ ಐಯ್ಯರ್, ಇಶಾನ್ ಕಿಶಾನ್ ರಣಜಿ ಸೇರಿ ಇತರ ದೇಶಿ ಪಂದ್ಯಾವಳಿಗಳನ್ನು ನಿರ್ಲಕ್ಷಿಸಿದ್ದರು. ಹೀಗಾಗಿ ಎಲ್ಲ ಆಟಗಾರರಿಗೆ ಪಾಠದಂತಿರಲಿ ಎಂದು ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ. ವಾರ್ಷಿಕ ಗುತ್ತಿಗೆ ಆಟಗಾರರ ಪಟ್ಟಿಯಲ್ಲಿ ಯಾರಿಗೆ ಸ್ಥಾನ ನೀಡಲಾಗಿದೆ ಎಂಬ ಲಿಸ್ಟ್ ಇಲ್ಲಿದೆ.
ಎ+ : ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ
ಎ : ಆರ್.ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕೆ.ಎಲ್.ರಾಹುಲ್, ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ
ಬಿ : ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಯಶಸ್ವಿ ಜೈಸ್ವಾಲ್
ಸಿ : ರಿಂಕು ಸಿಂಗ್, ತಿಲಕ್ ವರ್ಮಾ, ಋತುರಾಜ್ ಗಾಯಕ್ವಾಡ್, ಶಾರ್ದುಲ್ ಠಾಕೂರ್, ಶಿವಂ ದುಬೆ, ರವಿ ಬಿಷ್ಣೋಯಿ, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಶದೀಪ್ ಸಿಂಗ್, ಕೆ.ಎಸ್.ಭರತ್, ಪ್ರಸಿದ್ಧ ಕೃಷ್ಣ, ಅವೇಶ್ ಖಾನ್, ರಜತ್ ಪಾತೀದಾರ್. ಒಂದು ವೇಳೆ ಧರ್ಮಶಾಲಾದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ 5ನೇ ಪಂದ್ಯದಲ್ಲಿ ಸರ್ಫರಾಜ್ ಖಾನ್, ಧ್ರುವ್ ಜುರೆಲ್ ಆಡಿದರೆ ಸಿ ಗ್ರೇಡ್ ಗೆ ಸೇರ್ಪಡೆಯಾಗಲಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?