Featured
ವಿಮಾನ ದುರಂತದಲ್ಲಿ ಮೃತಪಟ್ಟ ಪ್ರಯಾಣಿಕನಿಗೆ ಕೊರೊನಾ- ರಕ್ಷಣಾ ಸಿಬ್ಬಂಧಿಗಳಿಗೆ ಕ್ವಾರಂಟೈನ್ ಆಗಲು ಸರ್ಕಾರದ ಸೂಚನೆ..!

ಕೋಝಿಕ್ಕೋಡ್ನಲ್ಲಿ ನಡೆದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ದುರಂತದಲ್ಲಿ ಮತ್ತೊಂದ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಸುದ್ದಿ ಹೊರಬಿದ್ದಿದೆ. ವಿಮಾನ ದುರಂತದಲ್ಲಿ ಮೃತಪಟ್ಟ ಪ್ರಯಾಣಿಕರಲ್ಲಿ ಒರ್ವನಿಗೆ ಕೊರೊನಾ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ರಕ್ಷಾಣಾ ಕಾರ್ಯದಲ್ಲಿ ತೊಡಗಿರುವ ಎಲ್ಲಾ ಸಿಬ್ಬಂಧಿಗಳು ಕ್ವಾರಂಟೈನ್ಗೆ ಒಳಗಾಗಬೇಕು ಎಂದು ಕೇರಳ ಸರ್ಕಾರ ಸೂಚನೆ ನೀಡಿದೆ.
ಈ ನಡುವೆ ವಿಮಾನದಲ್ಲಿ ಪ್ರಯಾಣಿಸಿದ ಎಲ್ಲಾ ಪ್ರಯಾಣಿಕರಿಗೂ ಕೊರೊನಾ ಪರೀಕ್ಷೆ ನಡೆಯುತ್ತಿದೆ. ರಕ್ಷಣಾ ಕಾರ್ಯದಲ್ಲಿ ಸುಮಾರು 500 ಮಂದಿ ತೊಡಗಿದ್ದರು. ಅವರೆಲ್ಲರೂ ಈಗ ಸರ್ಕಾರದ ನಿಯಮದಂತೆ ಕ್ವಾರಂಟೈನ್ಗೆ ಒಳಗಾಗಬೇಕಿದೆ.
ರಕ್ಷಣಾ ಕಾರ್ಯಕರ್ತರಿಗೆ ಧನ್ಯವಾದಗಳುಮ ಎಲ್ಲರೂ ಕೋವಿಡ್-19 ನಿಯಮದ ಪ್ರಕಾರ ಕ್ವಾರಂಟೈನ್ ಗೆ ಒಳಗಾಗಬೇಕು. ಸ್ಥಳೀಯ ನಾಗರಿಕರು, ವಿಮಾನ ನಿಲ್ದಾಣ ಸಿಬ್ಬಂದಿ, ಕಾರ್ಯಕರ್ತರು, ಆರೋಗ್ಯ ಸೇವಕರು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ, ಆಂಬ್ಯುಲೆನ್ಸ್ ನೌಕರರು, ಚಾಲಕರು ಮತ್ತು ಮಾಧ್ಯಮ ಪ್ರತಿನಿಧಿಗಳು ಎಲ್ಲರೂ ಒಟ್ಟು ಸೇರಿದ್ದರು. ತುರ್ತು ಸನ್ನಿವೇಶದಲ್ಲಿ ಹಲವರಿಗೆ ಕೋವಿಡ್-19 ನಿಯಮಗಳನ್ನು ಅನುಸರಿಸಲು ಆಗಲಿಲ್ಲ. ಈ ವಿಮಾನ ನಿಲ್ದಾಣ ಕಂಟೈನ್ ಮೆಂಟ್ ಪ್ರದೇಶದಲ್ಲಿ ಇರುವುದರಿಂದ ತಮ್ಮ ಮತ್ತು ಸಮಾಜದ ಒಳಿತಿಗಾಗಿ ಕ್ವಾರಂಟೈನ್ ಗೆ ಒಳಗಾಗಬೇಕು
- ಕೆ.ಕೆ. ಶೈಲಜಾ, ಆರೋಗ್ಯ ಸಚಿವರು
ಈ ನಡುವೆ ವಿಮಾನದಲ್ಲಿದ್ದ ಸುಮಾರು 40 ಮಂದಿ ಅನಾರೋಗ್ಯಕ್ಕೆ ತುತ್ತಾಗಿದ್ದಾರಿ ಎಂಬ ಸುದ್ದಿ ಹಬ್ಬಿದ್ದು ಅದು ಸತ್ಯಕ್ಕೆ ದೂರವಾದುದು, ಇಂತಹ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಸಚಿವೆ ಶೈಲಜಾ ಹೇಳಿದ್ದಾರೆ. ಒಟ್ಟಿನಲ್ಲಿ ವಿಮಾನ ದುರಂತದ ಬೆನ್ನಲ್ಲೇ ಕೋವಿಡ್ ಶಾಕ್ ಆಗಿರುವುದು ಮತ್ತೊಂದು ಆಟವೇ ಸರಿ.