Connect with us

Featured

“COZ I LUV U” ಆಲ್ಬಂ ಹಾಡಿನ ಮೂಲಕ ವಿನೂತನ ಪ್ರಯೋಗಕ್ಕೆ ನಾಂದಿ ಹಾಡಿದ ಡಾ||ಎಸ್ ಮಹೇಶ್ ಬಾಬು .

ರೈಸಿಂಗ್ ಕನ್ನಡ :- ತಂತ್ರಜ್ಞಾನ ಮುಂದುವರೆದಂತೆ ಅನೇಕ ಹೊಸ ಪ್ರಯೋಗಗಳಿಗೆ ದಾರಿ ಮಾಡಿಕೊಡುತ್ತಿದೆ. ಅಂತಹ ವಿನೂತನ ಪ್ರಯತ್ನಕ್ಕೆ “COZ I LUV U” ಆಲ್ಬಂ ಹಾಡಿನ ಮೂಲಕ
ನಾಂದಿ ಹಾಡಿದ್ದಾರೆ ಡಾ||ಎಸ್ ಮಹೇಶ್ ಬಾಬು. ಇತ್ತೀಚೆಗೆ ಈ ಹಾಡಿನ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಮಹೇಶ್ ಬಾಬು ಹಾಗೂ ತಂಡದವರು ಈ ಹೊಸ ಪ್ರಯತ್ನ ಬಗ್ಗೆ ಮಾತನಾಡಿದರು.

ನಾನು ಮೂಲತಃ ಊಟಿಯವನು. ಬೆಂಗಳೂರಿಗೆ ಬಂದು ಮೂರುವರ್ಷಗಳಾಯಿತು. ನನಗೆ ಆರ್ಟಿಫಿಶಿಯಲ್ ಇಂಟಲಿಜೆನ್ಸ್(AI) ತಂತ್ರಜ್ಞಾನ ಬಳಸಿಕೊಂಡು ಹೊಚ್ಚಹೊಸ ಪ್ರಯತ್ನ ಮಾಡಬೇಕೆಂದೆನಿಸಿತು. ಅದರ ಮೊದಲ ಹೆಜ್ಜೆಯಾಗಿ ಈ ಆಲ್ಬಂ ಸಾಂಗ್ ಮಾಡಿದ್ದೇನೆ. ಇದರ ವಿಶೇಷತೆ ಏನೆಂದರೆ ಈ ಹಾಡನ್ನು ಯಾವ ಗಾಯಕ-ಗಾಯಕಿಯೂ ಹಾಡಿಲ್ಲ. ಸಾಹಿತ್ಯವನ್ನು ಸಾಫ್ಟ್​ವೇರ್​ಗೆ ಫೀಡ್​ ಮಾಡಿ, ಗಂಡು ಮತ್ತು ಹೆಣ್ಣಿನ ಧ್ವನಿಯನ್ನು ಹೊಮ್ಮಿಸಿದ್ದೇನೆ.

ನನಗೆ ತಿಳಿದ ಹಾಗೆ ವಿಶ್ವದಲ್ಲೇ ಇದು ಮೊದಲ ಪ್ರಯೋಗ ಎನ್ನಬಹುದು. ನನಗೆ ಈ ಕುರಿತು ರಿಸರ್ಚ್ ಮಾಡಲು ಆರು ತಿಂಗಳು ಹಿಡಿಸಿತು. ನಾನೇ ಹಾಡು ಬರೆದು, ಸಂಗೀತ ನೀಡಿ, AI ಟೆಕ್ನಾಲಜಿ, ಸಂಕಲನ, ಡಿ.ಐ, ನಿರ್ಮಾಣ ಹಾಗೂ ನಿರ್ದೇಶನ ಮಾಡಿದ್ದೇನೆ. ಇಂಗ್ಲಿಷ್ ಭಾಷೆಯಲ್ಲಿ ಈ ಹಾಡು ಮೂಡಿಬಂದಿದೆ. ಇಂಗ್ಲಿಷ್ ನಲ್ಲಿ ಮಾಡಲು ಕಾರಣವೆನೆಂದರೆ, ಈ ಹೊಸ ತಂತ್ರಜ್ಞಾನ ವಿಶ್ವವ್ಯಾಪಿಯಾಗಬೇಕೆಂದು.
ಈ ಹಾಡಿನಲ್ಲಿ ಇರಾನ್ ಕಲಾವಿದೆ ಐರಾ ಫರಿದ್, ರೇವಂತ್ ರಾಮಕುಮಾರ್, ಯೋಗೇಶ್ ಮಲ್ಲಿಕಾರ್ಜುನ ಹಾಗೂ ಲೀನಾ ಕುಮಾರನ್ ಅಭಿನಯಿಸಿದ್ದಾರೆ.

ಈ ತಂತ್ರಜ್ಞಾನವನ್ನು ಯಾವ ಭಾಷೆಯಲ್ಲಿ ಬೇಕಾದರೂ ಬಳಸಿಕೊಳ್ಳಬಹುದು. ಮುಂದೆ ಕನ್ನಡ ರಾಜ್ಯೋತ್ಸವದ ಸಮಯಕ್ಕೆ ಇದೇ ತಂತ್ರಜ್ಞಾನದಿಂದ ಕನ್ನಡ ಹಾಡೊಂದನ್ನು ಮಾಡುತ್ತೇನೆ. ಆಲ್ಬಂ ಹಾಡು ಮಾಡುವುದಕ್ಕೂ ಮುನ್ನ ಕೊರೋನ ಕಾಲದಲ್ಲಿ “ಪ್ರಾಪ್ತಿ” ಎಂಬ ಕನ್ನಡ ಸಿನಿಮಾ ಮಾಡಿದ್ದೇನೆ. ಅದು ತೆರೆಗೆ ಬರಲು ಸಿದ್ದವಿದೆ. ಆದರೆ ಆ ಸಿನಿಮಾದಲ್ಲಿ ನಾನು ಈ ಹೊಸ ತಂತ್ರಜ್ಞಾನ ಬಳಸಿಲ್ಲ. ಈ ನೂತನ ತಂತ್ರಜ್ಞಾನದಿಂದ ಗಾಯಕರಿಗೆ ಏನು ತೊಂದರೆಯಾಗುವುದಿಲ್ಲ.‌ ಆಸಕ್ತಿವುಳ್ಳವರು ತಮ್ಮ ಸಿನಿಮಾದ ಒಂದು ಹಾಡಿಗೆ ಈ ತಂತ್ರಜ್ಞಾನ ‌ಬಳಸಿಕೊಳ್ಳಬಹುದು. ಈಗಾಗಲೇ ನಮ್ಮ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಹಾಗೂ ಹಾಡಿನ ಮೇಕಿಂಗ್ ಬಿಡುಗಡೆ ಮಾಡಿದ್ದೇವೆ‌. ಆರುವರೆ ನಿಮಿಷಗಳ ಈ ಹಾಡು ಗಿನ್ನಿಸ್ ರೆಕಾರ್ಡ್ ಆಗುವ ಸಾಧ್ಯತೆ ಕೂಡ ಇದೆ‌. ನಮ್ಮ ಈ ಹೊಸ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ ಎಂದು ಡಾ||ಎಸ್ ಮಹೇಶ್ ಬಾಬು ತಿಳಿಸಿದರು.

ಕಲಾವಿದರಾದ ಐದಾ ಫರಿದ್, ರೇವಂತ್ ರಾಮಕುಮಾರ್, ಯೋಗೇಶ್ ಮಲ್ಲಿಕಾರ್ಜುನ, ಲೀನಾ ಕುಮಾರನ್ “COZ I LUV U” ಆಲ್ಬಂ ಸಾಂಗ್ ನ ತಮ್ಮ ಪಾತ್ರಗಳ ಕುರಿತು ಮಾತನಾಡಿದರು.

Advertisement
ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ