Featured
ಅಮರನಾಥ ಆತ್ಮಲಿಂಗದ ಪೂಜೆಗೆ ಕೊರೊನಾದಿಂದ ನೋ ಪ್ರಾಬ್ಲಂ – ಮಂಜಿನ ಶಿವಲಿಂಗದ ಆರತಿಯನ್ನ ಕಣ್ಣಾರೆ ನೋಡಿ..!

ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ಸುಪ್ರಸಿದ್ದ ಅಮರನಾಥ ಯಾತ್ರೆಗೂ ಈ ಬಾರಿ ಕೊರೊನಾ ಬಿಸಿ ತಟ್ಟಿದೆ. ಕೊರೊನಾ ಮಹಾಮಾರಿಯ ಆತಂಕ ದೂರ ಹೋಗುವ ತನಕ ಅಮರನಾಥ ಯಾತ್ರೆಗೆ ಯಾವುದೇ ಅವಕಾಶ ನೀಡಲಾಗುತ್ತಿಲ್ಲ. ಆದರೆ ಈ ಬಾರಿ ಅಮರನಾಥದ ಮಂಜಿನ ಶಿವಲಿಂಗಕ್ಕೆ ನಡೆಯುವ ಪೂಜೆಯನ್ನು ಎಲ್ಲಾ ಭಾರತೀಯರು ಮನೆಯಲ್ಲೇ ಕುಳಿತು ನೋಡಬಹುದು. ಅಮರನಾಥ ಗುಹೆಯಲ್ಲಿನ ಮಂಜಿನ ಶಿವಲಿಂಗಕ್ಕೆ ನಡೆಯುವ ಆರತಿಯನ್ನು ಮೊತ್ತ ಮೊದಲ ಬಾರಿಗೆ ನೇರ ಪ್ರಸಾರದಲ್ಲಿ ನೋಡಲು ವ್ಯವಸ್ಥೆ ಮಾಡಲಾಗಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಯಾತ್ರಾರ್ಥಿಗಳಿಗೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಅಮರನಾಥ ದೇವಾಲಯ ಆಡಳಿತ ಮಂಡಳಿ ಅಮರನಾಥ ಗುಹೆಯ ಶಿವಲಿಂಗಕ್ಕೆ ನಡೆಯುವ ಆರತಿಯನ್ನು ಡಿಡಿ ವಾಹಿನಿಯಲ್ಲಿ ಪ್ರಸಾರ ಮಾಡಲು ನಿರ್ಧರಿಸಿದೆ. ಈಗಾಗಲೇ ಲೈವ್ಗೆ ಬೇಕಾದ ವ್ಯವಸ್ಥೆಯನ್ನು ಮಾಡಲಾಗಿದೆ.
ಈ ಹಿಂದೆ ಜಮ್ಮು-ಕಾಶ್ಮೀರ ಸರಕಾರ ಅಮರನಾಥ ಯಾತ್ರೆಗೆ 500 ಯಾತ್ರಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸುವುದಕ್ಕೆ ನಿರ್ಧರಿಸಿತ್ತು. ಅನಂತ್ ನಾಗ್ನ ಪಹಲ್ಗಾಂ ಮತ್ತು ಗಂದೇರ್ಬಾಲ್ ಜಿಲ್ಲೆಯ ಬಲ್ಟಾಲ್ನ ಟ್ವಿನ್ ಟ್ರ್ಯಾಕ್ ಮೂಲಕ ಜೂನ್ 23ರಿಂದ ಯಾತ್ರಾರ್ಥಿಗಳಿಗೆ ಪ್ರವೇಶ ಕಲ್ಪಿಸಲು ತೀರ್ಮಾನಿಸಲಾಗಿತ್ತು. ಆದರೆ ಈಗ ಸರಕಾರ ಅವಕಾಶ ನೀಡುತ್ತಿಲ್ಲ. ಇತ್ತೀಚೆಗೆ ಜಮ್ಮಕಾಶ್ಮೀರದ ಲೆಫ್ಟಿನಂಟ್ ಗೌವರ್ನರ್ ಜೆಸಿ ಮುರ್ಮು ಅಮರನಾಥ ಗುಹೆಯಲ್ಲಿ ಆರತಿ ನೆರವೇರಿಸಿದ್ದರು.
You may like

ಹರಾಜಿಗೂ ಮುನ್ನ ಸ್ಟಾರ್ ಕನ್ನಡಿಗರನ್ನ ಕೈಬಿಡಲು ಮುಂದಾದ ಕಿಂಗ್ಸ್ ಇಲೆವೆನ್ ಪಂಜಾಬ್..?

ಭಾರತದಲ್ಲಿ 34 ಲಕ್ಷ ದಾಟಿದ ಕೊರೊನಾ ಕೇಸ್: 24 ಗಂಟೆಯಲ್ಲಿ 1,021 ಸಾವು

ವಿಶ್ವವಿದ್ಯಾಲಯಗಳು ಪರೀಕ್ಷೆ ನಡೆಸಬೇಕು- ಯುಜಿಸಿ ಸುತ್ತೋಲೆಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಮೈದಾನಕ್ಕಿಳಿದ ರೆಡ್ ಆರ್ಮಿ: ಬ್ಲೂಪ್ರಿಂಟ್ ರೆಡಿ ಮಾಡಿದ ತ್ರಿಮೂರ್ತಿಗಳು…!

ಯಾದಗಿರಿಯಲ್ಲಿ ದಿಢೀರ್ರಾಗಿ ಜಿಲ್ಲಾಧಿಕಾರಿ ವರ್ಗಾವಣೆ: ನೂತನ ಜಿಲ್ಲಾಧಿಕಾರಿ ಡಾ. ರಾಗಾಪ್ರಿಯಾ ಅಧಿಕಾರ ಸ್ವೀಕಾರ

ಮತ್ತೆ ಭಾರತ-ಚೀನಾ ಯೋಧರ ಮುಖಾಮುಖಿ-ಪಾಕ್ ಸೈನಿಕರಿಂದಲೂ ಯುದ್ಧ ತಾಲೀಮು..!

















