Featured
ರೈತರ ಮನೆ ಬಾಗಿಲಿಗೆ ಬರಲಿದೆ ಪಶು ಆ್ಯಂಬುಲೆನ್ಸ್ – ಶೀಘ್ರದಲ್ಲೇ ಪ್ರಾಣಿ ಕಲ್ಯಾಣ ಮಂಡಳಿಯೂ ಸ್ಥಾಪನೆ – ಸಚಿವ ಪ್ರಭುಚೌಹಾಣ್ ಘೋಷಣೆ..!

ರೈಸಿಂಗ್ ಕನ್ನಡ :
ಬೀದರ್:
ರಾಜ್ಯದಲ್ಲಿ ಪ್ರಾಣಿ ಕಲ್ಯಾಣ ಮಂಡಳಿಯನ್ನ ಶೀಘ್ರದಲ್ಲೆ ಸ್ಥಾಪಿಸುವುದಾಗಿ ಪಶುಸಂಗೋಪನಾ ಸಚಿವ ಪ್ರಭುಚೌಹಾಣ್ ಹೇಳಿದ್ದಾರೆ.
ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಶುಸಂಗೊಪನಾ ಸಚಿವರು, ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ರಾಜ್ಯದಲ್ಲಿ ಪ್ರಾಣಿ ಕಲ್ಯಾಣ ಮಂಡಳಿ ಸ್ಥಾಪನೆ ಮಾಡಲಾಗುತ್ತಿದೆ.

ಪ್ರಾಣಿಗಳ ಹಿಂಸೆ ತಡೆಯುವ ಕಾನೂನುಗಳನ್ನ ಬಿಗಿಗೊಳಿಸಲು ಕ್ರಮವಹಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಪ್ರಾಣಿಕಲ್ಯಾಣ ಮಂಡಳಿ ಸ್ಥಾಪಿಸಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಒಟ್ಟು 4,214 ಪಶುವೈದ್ಯಕೀಯ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ.
ಇದರಲ್ಲಿ 85.22 ಲಕ್ಷ ದನಗಳು,29.98 ಲಕ್ಷ ಎಮ್ಮೆಗಳು ಹಾಗು 110.91 ಲಕ್ಷ ಕುರಿಗಳು ಮತ್ತು 61.96 ಲಕ್ಷ ಮೇಕೆಗಳಿವೆ. ಪ್ರಾಣಿಗಳ ರಕ್ಷಣೆಗೆ ಚಿಂತನೆ ಮಾಡಿದ್ದು, ಪ್ರಾಣಿಗಳ ರಕ್ಷಣೆ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಈ ಪ್ರಾಣಿ ಕಲ್ಯಾಣ ಮಂಡಳಿ ನೆರವಾಗಲಿದೆ ಎಂದು ಪಶುಸಂಗೋಪನಾ ಸಚಿವರು ತಿಳಿಸಿದ್ದಾರೆ.
ಇನ್ನೂ ರಾಜ್ಯಾದಲ್ಲಿ ಶೀಘ್ರದಲ್ಲಿ ಪಶು ಆ್ಯಂಬುಲೆನ್ಸ್ ಲೋಕಾರ್ಪಣೆ ಮಾಡಲಾಗುವುದು ಎಂದು ಕೂಡ ಪಶುಸಂಗೋಪನಾ ಸಚಿವ ಪ್ರಭುಚೌಹಾಣ್ ಹೇಳಿದ್ದಾರೆ. ರಾಜ್ಯದಲ್ಲಿ ಪಶುಪಾಲಕರು, ರೈತರು, ಜಾನುವಾರು ಸಾಗಾಣಿಕೆಯಲ್ಲಿ ತೊಡಗಿರುವವರಿಗೆ ಜಾನುವಾರುಗಳ ಆರೋಗ್ಯ ಕಾಪಾಡುವ ದೃಷ್ಠಿಯಿಂದ ಸದ್ಯದಲ್ಲಿ ಪಶು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ರು.
ರಾಜ್ಯದಲ್ಲಿ ಒಟ್ಟು 16 ಜಿಲ್ಲೆಗಳಲ್ಲಿ ಸುಸಜ್ಜಿತವಾದ ಸಂಚಾರಿ ಆ್ಯಂಬುಲೆನ್ಸ್ ನೀಡಲು ತಿರ್ಮಾನಿಸಲಾಗಿದೆ. ಇದರಿಂದಾಗಿ ರೈತರಿಗೆ ರೈತರ ಮನೆ ಬಾಗಿಲಿಗೆ ಪಶು ಆಸ್ಪತ್ರೆ ಬಂದಂತಾಗಲಿದ್ದು, ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಸಚಿವರು ವಿವರಿಸಿದರು. ಅತ್ಯಾಧುನಿಕ ಆ್ಯಂಬುಲೆನ್ಸ್ನ ಲ್ಲಿ ವಿಶೆಷ ಸೌಲಭ್ಯಗಳಿರಲಿದ್ದು, ರೈತರು ತಮ್ಮ ಜಾನುವಾರುಗಳ ಆರೋಗ್ಯ ಕಾಪಾಡುವ ದೃಷ್ಠಿಯಿಂದ ರೈತರಿಗೆ ಇದು ಸಹಕಾರಿಯಾಗಲಿದೆ ಎಂದು ವಿವರಿಸಿದ್ರು.
ಇನ್ನು ಕಲ್ಯಾಣ ಕರ್ನಾಟಕಕ್ಕೆ 1500 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. ಕಲಂ 371ಜೆ ನೇಮಕಾತಿಯಲ್ಲಿ ಆದ್ಯತೆ ನೀಡಲಾಗಿದ್ದು, 176 ವೈದ್ಯರ ನೇಮಕಾತಿಗೆ ಆಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದರು.