Connect with us

ಟಾಪ್ ನ್ಯೂಸ್

ಇಸ್ರೋದಿಂದ ಮತ್ತೊಂದು ಸಾಹಸ‌: ಮರುಬಳಕೆ ರಾಕೆಟ್ ‘ಪುಷ್ಪಕ್’ಪರೀಕ್ಷೆ ಸಕ್ಸಸ್

ಬೆಂಗಳೂರು : ಮರು ಬಳಕೆ ಉಡ್ಡಯನ ವಾಹನ (ಆರ್‌ಎಲ್‌ವಿ) “ಪುಷ್ಪಕ್‌’ ರಾಕೆಟ್‌ನ 3ನೇ ಪರೀಕ್ಷೆ ಶುಕ್ರವಾರ ಬೆಳಗ್ಗೆ 7 ಗಂಟೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನ ಹಟ್ಟಿ ರನ್‌ವೇಯಲ್ಲಿ ನಡೆಯಿತು.

ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲೂ ರೋಬೋಟಿಕ್‌ ಲ್ಯಾಂಡಿಂಗ್‌ ಸಾಮರ್ಥ್ಯವನ್ನು ಶುಕ್ರವಾರದ ಪರೀಕ್ಷೆ ವೇಳೆ ಪರಿಶೀಲನೆ ಮಾಡಲಾಗುತ್ತದೆ ಎಂದು ಇಸ್ರೋ ತಿಳಿಸಿದೆ. ಪುಷ್ಪಕ ರಾಕೆಟ್‌ ಮರು ಬಳಕೆ ಮಾಡಬಹುದಾದ ರಾಕೆಟ್‌ ವಿಭಾಗದಲ್ಲಿ ಭಾರತದ ಮಹ ತ್ವದ ಪ್ರಯತ್ನ ಇದು.

ಏನಿದು ಪುಷ್ಪಕ್‌ ರಾಕೆಟ್‌?
ಪುಷ್ಪಕ್‌ ಎಂದು ಹೆಸರಿಸಲಾಗಿರುವ ರಾಕೆಟ್‌ ಮರು ಬಳಕೆ ಮಾಡಬಹುದಾದ ಉಡ್ಡಯನ ವಾಹನವಾಗಿದೆ (ಆರ್‌ಎಲ್‌ವಿ). ವಿಮಾನದ ಮಾದರಿಯ ಅಂತರಿಕ್ಷ ನೌಕೆ ಇದಾಗಿದ್ದು, ಈ ರಾಕೆಟ್‌ನಿಂದ ಕಡಿಮೆ ವೆಚ್ಚದಲ್ಲಿ ವಸ್ತುಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಬಹುದು.

ವಾಯುಪಡೆ ಹೆಲಿಕಾಪ್ಟರ್‌ ಸಹಾಯದಿಂದ ಇದನ್ನು ಉಡಾವಣೆ ಮಾಡಲಾಗುತ್ತದೆ. ಈಗಾಗಲೇ ಅಮೆರಿಕ, ಚೀನ ಇಂತಹ ಮರುಬಳಕೆ ಮಾಡಬಹುದಾದ ಬಾಹ್ಯಾಕಾಶ ಉಡ್ಡಯನ ವಾಹನಗಳನ್ನು ಬಳಸುತ್ತಿದ್ದು, ಭಾರತ ಕೂಡ ಈ ಪಟ್ಟಿಗೆ ಸೇರ್ಪಡೆಯಾಗಲಿದೆ.

ಲಾಭವೇನು?
ರಾಕೆಟ್‌ನ ಮೇಲ್ಭಾಗದಲ್ಲಿರುವ ಅತ್ಯಂತ ದುಬಾರಿ ಭಾಗಗಳನ್ನು ಮರು ಬಳಕೆ ಮಾಡುವ ರೀತಿಯಲ್ಲಿ ತಯಾರಿಸಲಾಗಿದೆ. ಕಕ್ಷೆಯಲ್ಲಿರುವ ಉಪಗ್ರಹಗಳಿಗೆ ಇಂಧನ ಮರುಪೂರಣ ಸಾಮರ್ಥ್ಯ ವನ್ನೂ ಅದು ಹೊಂದಿದೆ. ನವೀಕರಣಕ್ಕಾಗಿ ಉಪಗ್ರಹ ಗಳನ್ನು ವಾಪಸ್‌ ಪಡೆಯಲು ಇದು ನೆರವು ನೀಡುತ್ತದೆ. ಭಾರತವು ಬಾಹ್ಯಾಕಾಶದಲ್ಲಿ ಕನಿಷ್ಠ ತ್ಯಾಜ್ಯ ಉಳಿಸಲು ಬಯಸುತ್ತಿದ್ದು, ಪುಷ್ಪಕ ರಾಕೆಟ್‌ ಆ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ.

Advertisement

ಪುಷ್ಪಕ್‌ ಹೀಗಿದೆ…
6.5 ಮೀ.ಉದ್ದ , 1.75 ಟನ್‌ ತೂಕ, 100 ಕೋಟಿ ರೂ.ಯೋಜನೆ ವೆಚ್ಚ

ಪುಷ್ಪಕ್‌ ಮರು ಬಳಕೆ ಮಾಡಬಹುದಾದ ಭವಿಷ್ಯದ ರಾಕೆಟ್‌ ಉಡ್ಡಯನ ವಾಹನವಾಗಿದೆ.
-ಎಸ್‌. ಸೋಮನಾಥ್‌, ಇಸ್ರೋ ಅಧ್ಯಕ್ಷ

Uncategorized3 weeks ago

ಕೃಷಿ ಸಚಿವ ಚೆಲುವರಾಯಸ್ವಾಮಿಯವರ ಕ್ಷೇತ್ರ ನಾಗಮಂಗಲದ ಕಲ್ಲೇನಹಳ್ಳಿಯಲ್ಲಿ ಗೋಮಾಳದ ₹25 ಕೋಟಿ ಮೌಲ್ಯದ ಬಂಡೆ ಲೂಟಿ?

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ