ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ರಾಮಮಂದಿರ ನಿರ್ಮಾಣದ ರೂವಾರಿ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಮತ್ತು ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಮುರಳಿ ಮನೋಹರ್ ಜೋಷಿ ಕೂಡ ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಭೂಮಿ ಪೂಜೆಗೆ ತೆರೆಳುತ್ತಿಲ್ಲ ವಿಡಿಯೋ ಕಾನ್ಫೆರೆನ್ಸ್ ಮೂಲಕ ಭೂಮಿ ಪೂಜೆಯಲ್ಲಿ ಪಾಲ್ಗೊಳಲಿದ್ದಾರೆ.
ಆ.5ರಂದು ನಡೆಯಲಿರುವ ಅದ್ದೂರಿ ಸಮಾರಂಭದಲ್ಲಿ 50 ಮಂದಿ ಗಣ್ಯರಿಗೆ ಮಾತ್ರ ಆಹ್ವಾನಿಸಿರುವುದಾಗಿ ಟ್ರಸ್ಟ್ ಹೇಳಿದೆ.
ರಾಮಜನ್ಮ ಭೂಮಿ ತೀರ್ಥಕ್ಷೆತ್ರ ಟ್ರಸ್ಟ್ ಈ ಇಬ್ಬರು ಹಿರಿಯ ನಾಯಕರನ್ನ ಆಹ್ವಾನಿಸಿದೆ.
ಕಳೆದ ವಾರವಷ್ಟೆ 90ರ ಆಂದೋಲನದ ಪ್ರಮುಖ ಪಾತ್ರವಹಿಸಿದ್ದ ಎಲ್.ಕೆ.ಅಡ್ವಾಣಿ ಲಖನೌದ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಮಸೀದಿ ಧ್ವಂಸದ ಬಗೆಗೆಗಿನ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದರು. ಜೊತೆಗೆ ತಮ್ಮ ಮೇಲಿರುವ ಎಲ್ಲಾ ಆರೋಪಗಳನ್ನ ನಿರಾಕರಿಸಿದ್ದರು.
ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ, ಕಲ್ಯಾಣ ಸಿಂಗ್ ಪ್ರಚೋದನಕಾರಿ ಹೇಳಿಕೆಗಳನ್ನ ನೀಡಿದ್ದಾರೆ ಎಂದು ಸಿಬಿಐ ಹೇಳಿತ್ತು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?