ನವದೆಹಲಿ/ಅಯೋಧ್ಯೆ : ಕಳೆದ ಆರು ದಶಕಗಳಿಂದಲೂ ವಿವಾದದ ಕೇಂದ್ರವಾಗಿ, ಕೋರ್ಟ್ ಕಟಕಟೆಯಲ್ಲಿರೋ ಅಯೋಧ್ಯೆ ವಿವಾದ ಅಂತಿಮ ಹಂತಕ್ಕೆ ಬಂದು ತಲುಪಿದೆ. ಪ್ರಕರಣದ ವಿಚಾರಣೆ ಅಂತ್ಯ ಕಂಡಿದ್ದು, ಸುಪ್ರೀಂಕೋರ್ಟ್ ತೀರ್ಪು ಕಾಯ್ದಿರಿಸಿದೆ. 40 ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪಂಚ ಸದಸ್ಯರ ಸಾಂವಿಧಾನಿಕ, ಮುಂದಿನ ಒಂದು ತಿಂಗಳಲ್ಲಿ ತೀರ್ಪು ಪ್ರಕಟಿಸೋದಾಗಿ ಹೇಳಿದೆ. ಅಂದ್ರೆ, ನವೆಂಬರ್ 17ರ ಒಳಗೆ ತೀರ್ಪು ಬರಲಿದೆ.
40 ದಿನಗಳಿಂದ ಅಯೋಧ್ಯೆ ಪ್ರಕರಣದ ವಿಚಾರಣೆ ನಡೆಯುತ್ತಲೇ ಇತ್ತು. ಇತಿಹಾಸದಲ್ಲಿ ಎರಡನೇ ಬಾರಿ ಈ ರೀತಿ ಅತೀ ದೀರ್ಘಕಾಲದ ವಿಚಾರಣೆ ನಡೆದಿದೆ. 1972ಲ್ಲಿ ಕೇಶವಾನಂದ ಭಾರತಿ ಪ್ರಕರಣದ ವಿಚಾರಣೆಯನ್ನು 13 ನ್ಯಾಯಾಧೀಶರಿದ್ದ ಸಂವಿಧಾನ ಪೀಠ 68 ದಿನಗಳ ಕಾಲ ನಡೆಸಿತ್ತು. ನಂತರ ಸಂಸತ್ತಿನ ಅಧಿಕಾರಿಗಳ ಬಗ್ಗೆ ತೀರ್ಪು ನೀಡಿತ್ತು.
ಅಯೋಧ್ಯೆ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ 2010ರಲ್ಲಿ ನೀಡಿರುವ ತೀರ್ಪು ಪ್ರಶ್ನಿಸಿರುವ 14 ಸಿವಿಲ್ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತ್ತು. ಅಯೋಧ್ಯೆಯಲ್ಲಿರುವ ವಿವಾದಾತ್ಮಕ 2.77 ಎಕರೆ ಭೂಮಿಯನ್ನು ಅಲಹಾಬಾದ್ ಹೈಕೋರ್ಟ್ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾಡ ಮತ್ತು ರಾಮ್ಲಲ್ಲಾ ಕಕ್ಷಿದಾರರಿಗೆ ಸಮಾನವಾಗಿ ಹಂಚಿಕೆ ಮಾಡಿಕೊಟ್ಟಿತ್ತು. ಆದ್ರೆ, ಇದಕ್ಕೆ ಒಪ್ಪದೇ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಅಕ್ಟೋಬರ್ 17ಕ್ಕೆ ನಿಗದಿಯಾಗಿದ್ದ ಕಡೆಯ ದಿನದ ವಿಚಾರಣೆಯನ್ನು ಒಂದು ದಿನ ಮುಂಚಿತವಾಗಿ ಮುಗಿಸುವುದಾಗಿ ಸುಪ್ರೀಂಕೋರ್ಟ್ ಹೇಳಿತ್ತು.
ಆದ್ರೆ, ಇದಕ್ಕೂ ಮೊದಲು ಈ ವಿವಾದ ಪರಿಹರಿಸಲಿರುವ ಸಲಹೆಗಳನ್ನು ಮೂರು ದಿನದಲ್ಲಿ ಲಿಖಿತ ರೂಪದಲ್ಲಿ ಕೊಡುವಂತೆ ಪ್ರಕರಣದ ಮೂವರು ಕಕ್ಷಿದಾರರಾದ ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾಡ ಮತ್ತು ರಾಮ್ಲಲ್ಲಾ ಕಕ್ಷಿದಾರರಿಗೆ ನ್ಯಾಯಪೀಠ ಸೂಚಿಸಿತು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?