ರೈಸಿಂಗ್ ಕನ್ನಡ ವೆಬ್:
ಬೆಳಗಾವಿ:
ಚಂದಕ್ಕಾಗಿ ಕಟ್ಟಡ ಕಟ್ಟಲಾಗಿದೆ. ಸರಕಾರದ ಹಣ ಪೋಲು ಮಾಡಲಾಗಿದೆ. ಸರಕಾರದ ಎಲ್ಲಾ ಕಚೇರಿಗಳ ಇಲ್ಲಿಗೆ ಬರಬೇಕು ಎಂದು ಹೊರಾಟಗಳು ನಡೆಯುತ್ತಲೆ ಇತ್ತು. ಅದಕ್ಕೆ ಉತ್ತರ ಎಂಬಂತೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾಹಿತಿ ಆಯೋಗದ ಕಚೇರಿ ಪೀಠವನ್ನು ಆರಂಭಿಸಲಾಗಿದೆ. ರಾಜ್ಯಮಟ್ಟದ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕು ಎಂಬ ಉತ್ತರ ಕರ್ನಾಟಕದ ಜನರ ಬಹುದಿನಗಳ ಬೇಡಿಕೆ ಇಡೆರಿದೆ. ಜೂನ್ 22 ರಿಂದ ಬೆಳಗಾವಿ ಪೀಠದ ಕಲಾಪ ಆರಂಭಗೊಳ್ಳಲಿದೆ.
” ಪ್ರಸ್ತುತ ಆಯೋಗದ ಪೀಠವು ಮಾರ್ಚ್ 3 ರಂದು ಕಾರ್ಯಾರಂಭಿಸಬೇಕಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ವಿಳಂಬವಾಯಿತು. ಉತ್ತರ ಕರ್ನಾಟಕದ ಜನರ ಕನಸು ಸುವರ್ಣ ವಿಧಾನಸೌಧದಲ್ಲಿ ಕಾರ್ಯ ಕಲಾಪ ಆರಂಭಿಸಲಾಗುತ್ತಿದೆ. ಪೀಠದ ಕಾರ್ಯನಿರ್ವಹಣೆಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಗಳು ಹಾಗೂ ವಿಧಾನಸಭೆಯ ಅಧ್ಯಕ್ಷರಿಗೆ ಕೃತಜ್ಞತೆಗಳು”
ಮಾಹಿತಿ ಆಯೋಗದ ಬೆಳಗಾವಿ ಪೀಠದ ವ್ಯಾಪ್ತಿಯಲ್ಲಿ ಬೆಳಗಾವಿ ವಿಭಾಗದ ಏಳು ಜಿಲ್ಲೆಗಳು ಬರಲಿದ್ದು, ಪೀಠದ ವ್ಯಾಪ್ತಿಯಲ್ಲಿ ಒಟ್ಟಾರೆ ನಾಲ್ಕು ಸಾವಿರ ಪ್ರಕರಣಗಳು ಬಾಕಿ ಉಳಿದಿರುತ್ತವೆ ಎಂದು ಆಯುಕ್ತರಾದ ಗೀತಾ ಬಿ.ವಿ. ತಿಳಿಸಿದರು. ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಪ್ರಕರಣಗಳನ್ನು ಪೀಠ ನಿರ್ವಹಿಸಲಿದೆ. ನಾಲ್ಕು ಸಾವಿರ ಪ್ರಕರಣಗಳು ಇರುವುದರಿಂದ ಕೊರೊನಾ ಹಿನ್ನೆಲೆಯಲ್ಲಿ ಆರಂಭದಲ್ಲಿ ಕಡಿಮೆ ಸಂಖ್ಯೆಯ ಪ್ರಕರಣಗಳನ್ನು ಕೈಗೆತ್ತಿಕೊಂಡು ಹಳೆಯ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಅಧಿಕಾರಿಗಳು ಮತ್ತು ಮೇಲ್ಮನವಿದಾರರ ಸಮ್ಮುಖದಲ್ಲಿ ತ್ವರಿತವಾಗಿ ಪ್ರಕರಣಗಳ ವಿಲೇವಾರಿ ಮಾಡುವ ಚಿಂತನೆ ಇದೆ.
ಅಧಿವೇಶನ ಸಂದರ್ಭದಲ್ಲಿ ಮಾಹಿತಿ ಆಯೋಗದ ಬೆಳಗಾವಿ ಪೀಠದ ಕಾರ್ಯಕಲಾಪಗಳು ನಡೆಯುವುದಿಲ್ಲ. ಈ ಅವಧಿಯಲ್ಲಿ ಪೀಠದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಜಾಗೃತಿ ಕಾರ್ಯಾಗಾರ ಆಯೋಜಿಸಲಾವುದು.
ಕಾಯ್ದೆಯ ಬಗ್ಗೆ ಸಮರ್ಪಕ ತಿಳಿವಳಿಕೆ ನೀಡಲು ಅಧಿಕಾರಿಗಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಲು ನಿರ್ಧರಿಸಲಾಗಿದೆ.ಅದೇ ರೀತಿ ಅಧಿವೇಶನ ಸಂದರ್ಭದಲ್ಲಿ ಆಯಾ ಜಿಲ್ಲೆಗಳಲ್ಲಿ ಕಲಾಪ ನಡೆಸಲಾಗುವುದು.
ಇದಕ್ಕೂ ಮುಂಚೆ ಬೆಂಗಳೂರಿನಿಂದ ವಿಡಿಯೋ ಸಂವಾದದ ಮೂಲಕ ಪ್ರಕರಣ ವಿಲೇವಾರಿ ಮಾಡಲಾಗಿರುತ್ತದೆ. ಪೀಠದ ಕಾರ್ಯಕಲಾಪಗಳ ಸುಮಗ ನಿರ್ವಹಣೆಗೆ ಶಾಖಾಧಿಕಾರಿ ಹಾಗೂ ಅಧೀನ ಕಾರ್ಯದರ್ಶಿಗಳ ಅಗತ್ಯವಿದ್ದು, ಇವರನ್ನು ನಿಯೋಜಿಸುವಂತೆ ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ.
ಬೆಳಗಾವಿ ಪುತ್ರ ಮೃಣಾಲ್ಗೆ ಆಶೀರ್ವಾದ ಮಾಡಿ : ಲಕ್ಷ್ಮೀ ಹೆಬ್ಬಾಳ್ಕರ್
ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ನಾವೇ ಮುಂದು..! – ಸಿಎಂ
ಆಸ್ಪತ್ರೆಗೆ ದಾಖಲಾದ ಮಂಗ: ಮಾನವೀಯತೆ ಮೆರೆದ ಮಾನವ
Acid Attack | ಕಡಬ ಆ್ಯಸಿಡ್ ದಾಳಿ : ಸೂಕ್ತ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ
ಆಸ್ತಿ ಪಡೆಯಲು ಪತಿಯ ಶವವನ್ನು ಇಟ್ಟು ಪತ್ನಿಯಿಂದ ಪ್ರತಿಭಟನೆ.
Lakshmi Hebbalkar | ನನಗೆ ಜಾತಿಯೇ ಇಲ್ಲ, ಮನುಷ್ಯತ್ವವೇ ನನ್ನ ಜಾತಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್