Featured
ಆ.15ರವರೆಗೂ 144 ಸೆಕ್ಷನ್ ಮುಂದುವರಿಕೆ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್

ರೈಸಿಂಗ್ ಕನ್ನಡ :
ಬೆಂಗಳೂರು:
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಗಲಭೆ ಹಿನ್ನಲೆಯಲ್ಲಿ ಆಗಸ್ಟ್ 15 ರವರೆಗೆ 144 ಸೆಕ್ಷನ್ ಪ್ರದೇಶಗಳಲ್ಲಿ ಮುಂದುವರೆಸುವುದಾಗಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾಹಿತಿ ನೀಡಿದ್ದಾರೆ.
ಕಳೆದ ಮಂಗಳವಾರ ಅವಹೇಳನಕಾರಿ ಫೇಸ್ಬುಕ್ ಪೋಸ್ಟ್ಗೆ ಸಂಬಂಧಿಸಿದಂತೆ ಒಂದು ಕೋಮಿನ ಜನ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆಗೆ ನುಗ್ಗಿ ದಾಂಧಲೆ ನಡೆಸಿದರು. ಇಷ್ಟೆ ಅಲ್ಲದೇ ಕಿಡಿಗೇಡಿಗಳು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ನಡೆಸಿ ದೊಂಬಿ ಎಬ್ಬಿಸಿದ್ದಾರೆ.
ಲಕ್ಷಂತಾರ ರೂಪಾಯಿ ಆಸ್ತಿಪಾಸ್ತಿ ನಾಶಮಾಡಿದ್ದಾರೆ. ಘಟನೆಯಲ್ಲಿ ಮೂವರು ಮಂದಿ ಗೋಲಿಬಾರ್ಗೆ ಸಾವನಪ್ಪಿದ್ದಾರೆ.
146ಕ್ಕೂ ಹೆಚ್ಚು ಮಂದಿಯನ್ನ ಬಂಧಿಸಲಾಗಿದೆ. ಪರಿಸ್ಥಿತಿ ಹತೋಟಿಗೆ ಬಂದಿದ್ದರೂ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವಂತಿಲ್ಲ. ಆಗಸ್ಟ್ 15 ಬೆಳಗ್ಗೆ 6 ಗಂಟೆಯವರೆಗೂ ಸೆಕ್ಷನ್ 144 ಮುಂದುವರೆಯಲಿದೆ ಎಂದು ತಿಳಿದು ಬಂದಿದೆ.
ಗಲಭೆಯಲ್ಲಿ 17 ಮಂದಿ ಪ್ರಮುಖ ಆರೋಪಿಗಳೆಂದು ಹೇಳಲಾಗುತ್ತಿದ್ದವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?