ರೈಸಿಂಗ್ ಕನ್ನಡ :
ರಾಜ್ಯ ರಾಜಕೀಯದಲ್ಲಿ ಸದ್ಯ ಪಕ್ಷಾಂತರದ್ದೇ ಜೋರು ಸುದ್ದಿ ಆಗ್ತಿದೆ. ಒಂದ್ ಕಡೆ ಬಿಜೆಪಿ ಸರ್ಕಾರದ ವಿರುದ್ಧ ಸ್ವತಃ ಬಿಜೆಪಿ ಶಾಸಕರು, ಸಚಿವರೇ ಅಸಮಾಧಾನ ವ್ಯಕ್ತಪಡಿಸ್ತಿದ್ದಾರೆ ಅನ್ನೋ ಚರ್ಚೆ ಶುರುವಾಗಿದೆ. ಸಿಎಂ ಬೊಮ್ಮಾಯಿ ವಿರುದ್ಧ ಕೆಲವು ಶಾಸಕರು ಅಸಮಾಧಾನಗೊಂಡಿದ್ದಾರೆ. ಇನ್ನು ಕೆಲವರು ಅನುದಾನ ಹಾಗೂ ಮುಂದಿನ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಜಂಪ್ ಆಗೋಕೆ ರೆಡಿಯಾಗಿದ್ದಾರೆ ಎನ್ನಲಾಗಿದೆ.
ಇದೇ ವಿಚಾರವಾಗಿ ಮಾತ್ನಾಡಿರೋ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪಕ್ಷಕ್ಕೆ ಯಾರು ಬರ್ತಾರೆ, ಯಾರು ಬರಲ್ಲ ಅನ್ನೋದನ್ನ ಸದ್ಯಕ್ಕೆ ಹೇಳೋಕೆ ಆಗಲ್ಲ. ಅದನ್ನೆಲ್ಲ ಬಹಿರಂಗ ಮಾಡೋಕೆ ಆಗುತ್ತಾ ಅಂತ ಮಾಧ್ಯಮದವರ ಪ್ರಶ್ನೆಗೆ ಮರು ಪ್ರಶ್ನೆ ಹಾಕಿದ್ದಾರೆ.
ಪರಿಸ್ಥಿತಿ ಹೀಗಿರುವಾಗ ದಾವಣಗೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲೂ ಕೂಡ ಇದೇ ವಿಚಾರ ಚರ್ಚೆ ಆಗಿದೆ. ಸ್ವತಃ ಮಾಜಿ ಸಿಎಂ ಯಡಿಯೂರಪ್ಪ ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ಗೆ ಹೋಗಲು ಬಿಜೆಪಿ ಶಾಸಕರು ಕೆಲವರು ತಯಾರಿ ನಡೆಸಿದ್ದಾರೆ. ಹುಷಾರಾಗಿರಿ ಅನ್ನೋ ರೀತಿ ಬಿಎಸ್ವೈ ಎಚ್ಚರಿಕೆ ನೀಡಿದ್ದಾರೆ.
ಹಾಗಿದ್ರೆ, ಯಾರೆಲ್ಲಾ ಶಾಸಕರು, ಸಚಿವರು ಬಿಜೆಪಿಯಿಂದ ಕಾಂಗ್ರೆಸ್ಗೆ ಜಂಪ್ ಆಗ್ತಾರೆ ಅನ್ನೋದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?