ಕೋಲಾರ : ಬರ ಮತ್ತು ನೆರೆ ಸಂದರ್ಭದಲ್ಲಿ ಹಿಂದಿನ ಬಿಜೆಪಿ ಸರ್ಕಾರ ರೈತರಿಗೆ ಮೂರು, ನಾಲ್ಕು ಪಟ್ಟು ಅಧಿಕ ಪರಿಹಾರ ನೀಡಿತ್ತು. ಅದೇ ಮಾನದಂಡದಲ್ಲಿ ಸಿದ್ದರಾಮಯ್ಯ ಸರ್ಕಾರ ಪರಿಹಾರ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ಕೋಲಾರದಲ್ಲಿ ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೊದಲು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಆರ್.ಅಶೋಕ ಮಾತನಾಡಿದರು. ಬರಗಾಲ ಬಂದು ಏಳು ತಿಂಗಳಾದರೂ ರೈತರಿಗೆ ಪರಿಹಾರ ನೀಡಿಲ್ಲ. ಬೆಳಗಾವಿ ಅಧಿವೇಶನ ಕಳೆದು ತಿಂಗಳಾದರೂ ಪರಿಹಾರ ಕೊಟ್ಟಿಲ್ಲ. ರೈತರು ಚಾತಕ ಪಕ್ಷಿಗಳಂತೆ ಪರಿಹಾರಕ್ಕೆ ಕಾಯುತ್ತಿದ್ದಾರೆ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಮೇವಿನ ಸಮಸ್ಯೆ ಇದೆ. ಆದರೂ ಒಂದೇ ಒಂದು ಗೋಶಾಲೆ ತೆರೆದಿಲ್ಲ. ಅಲ್ಪಸಂಖ್ಯಾತ ಇಲಾಖೆ ಸಚಿವರು ಮನವಿ ಕೊಟ್ಟ ಮೂರು ದಿನಗಳಲ್ಲಿ ಮುಸ್ಲಿಮರಿಗೆ 1 ಸಾವಿರ ಕೋಟಿ ರೂ. ಅನುದಾನವನ್ನು ಕಾಲನಿ ಅಭಿವೃದ್ಧಿಗೆ ಬಿಡುಗಡೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರವಾಹ ಬಂದಾಗ ಎನ್ ಡಿ ಆರ್ ಎಫ್ ಮಾನದಂಡಕ್ಕಿಂತ ದುಪ್ಪಟ್ಟು ಪರಿಹಾರ ನೀಡಲಾಗಿತ್ತು. ಮೂರು ಸಾವಿರ ಕೋಟಿ ರೂ. ಗೂ ಅಧಿಕ ಪರಿಹಾರವನ್ನು ಒಂದೇ ತಿಂಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ ಮಾಡಿದ್ದೆವು. ಕೇಂದ್ರ ಸರ್ಕಾರ ಆಗಲೂ ತಡವಾಗಿ ನಮ್ಮ ಪಾಲಿನ ಹಣ ನೀಡಿತ್ತು. ಕೇಂದ್ರ ಸರ್ಕಾರ ಯಾವಾಗಲೂ ದೇಶವ್ಯಾಪಿ ಪರಿಹಾರ ನೀಡುತ್ತದೆ. ಅದು ನಿಗದಿತ ಪ್ರಕ್ರಿಯೆ ಪ್ರಕಾರವೇ ನಡೆಯುತ್ತದೆ. ಹೀಗಾಗಿ ಯಾವುದೇ ಪಕ್ಷವಿದ್ದರೂ ಸಹಜವಾಗಿಯೇ ತಡವಾಗುತ್ತದೆ ಎಂದರು.
ಏಳು ತಾಸು ಮೂರು ಫೇಸ್ ಕರೆಂಟ್ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಪ್ರಕಟಿಸಿದ್ದರು. ಆದರೆ ಮೂರು ತಾಸು ನೀಡುತ್ತಿಲ್ಲ. ನಿರಂತರವಾಗಿ ವಿದ್ಯುತ್ ಕಡಿತ ಮಾಡುತ್ತಿದ್ದು, ಅದನ್ನು ರಿಪೇರಿ ಕೆಲಸ ಎಂದು ತೇಪೆ ಹಚ್ಚಲಾಗುತ್ತಿದೆ. ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಣ ಕೊಡದಿದ್ದರೂ ಕಾಂಗ್ರೆಸ್ ಕಾರ್ಯಕರ್ತರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುತ್ತಿದೆ. ಕಾರ್ಯಕರ್ತರಿಗೆ ಬಿರಿಯಾನಿ ತಿನ್ನಲು ಮಾತ್ರ ಇವರಿಗೆ ಹಣವಿದೆ. ರೈತರಿಗೆ ಹಣ ಕೊಡಿ, ಇಲ್ಲ ಕುರ್ಚಿ ಖಾಲಿ ಮಾಡಿ ಎಂದು ಒತ್ತಾಯಿಸಿದರು.
ಲೋಕಸಭಾ ಚುನಾವಣೆ ಬಳಿಕ ಎಲ್ಲ ಗ್ಯಾರಂಟಿಗಳು ಗೋವಿಂದ ಆಗಲಿದೆ. ಮೂಗಿಗೆ ತುಪ್ಪ ಸವರಲು ತಿರುಗಿಬಿದ್ದ ಕಾಂಗ್ರೆಸ್ ಶಾಸಕರಿಗೆ ಅನುಕೂಲ ಮಾಡಲಾಗುತ್ತಿದೆ. ಕೆಲವು ಶಾಸಕರು ಬಿಟ್ಟು ಹೋಗುತ್ತಾರೆ ಎಂದು ತಿಳಿದುಬಂದಿರುವುದರಿಂದ ಹೈಕಮಾಂಡ್ ಈ ರೀತಿ ನಾಟವಾಡುತ್ತಿದೆ ಎಂದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?