Featured
ವಿಧಾನಪರಿಷತ್ ನಾಮನಿರ್ದೇಶನ- – ಯೋಗೇಶ್ವರ್, ವಿಶ್ವನಾಥ್ಗೆ ಬಹುಮಾನ- ಭಾರತಿ ಶೆಟ್ಟಿಗೂ ಸಿಕ್ತು ಚಾನ್ಸ್..!

ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ರಾಜ್ಯ ವಿಧಾನಸಭೆಯ ನಾಮನಿರ್ದೇಶನ ಪ್ರಕ್ರಿಯೆ ಮುಗಿದಿದೆ. ರಾಜ್ಯಪಾಲರು ಖಾಲಿಯಿದ್ದ 5 ಸ್ಥಾನಗಳಿಗೆ ನಾಮನಿರ್ದೇಶನ ಮಾಡಿದ್ದಾರೆ. ಭಾರತೀಯ ಜನಾತಾ ಪಾರ್ಟಿಯ ಕಟ್ಟಾಳುಗಳಿಗೆ ವಿಧಾನಪರಿಷತ್ ಸ್ಥಾನ ಸಿಕ್ಕಿದೆ.
ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಿ, ಬಿಜೆಪಿ ಸರ್ಕಾರ ಬರಲು ಕಾರಣರಾದ ಆಪರೇಷನ್ ಕಮಲದ ರೂವಾರಿಗಳಿಗೆ ಮಣೆ ಹಾಕಲಾಗಿದೆ.
ಸಿ.ಪಿ. ಯೋಗೇಶ್ವರ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚೆನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಎದುರು ಸೋಲನುಭವಿಸಿದ್ದರು. ಆದ್ರೆ ಯೋಗೇಶ್ವರ್ ಆಪರೇಷನ್ ಕಮಲದ ಪ್ರಮುಖ ರೂವಾರಿ ಆಗಿದ್ದರಿಂದ ಅವರಿಗೆ ಸೂಕ್ತ ಸ್ಥಾನಮಾನ ನೀಡಲಾಗಿದೆ. ಯೋಗೇಶ್ವರ್ ಸಿನಿಮಾ ಕ್ಷೇತ್ರದಿಂದ ನಾಮನಿರ್ದೇಶನ ಗೊಂಡಿದ್ದಾರೆ. ಸಮಾಜಸೇವೆ ಕೋಟಾದಿಂದ ಭಾರತಿ ಶೆಟ್ಟಿ ಆಯ್ಕೆಯಾಗಿದ್ದಾರೆ.
ಈ ನಡುವೆ ಮೈತ್ರಿ ಸರ್ಕಾರದ ವಿರುದ್ಧ ಸಿಡಿದೆದ್ದು ಜೆಡಿಎಸ್ಗೆ ಗುಡ್ ಬೈ ಹೇಳಿ ಮರು ಚುನಾವಣೆಯಲ್ಲಿ ಸೋಲನುಭವಿಸಿದ ಎಚ್.ವಿಶ್ವನಾಥ್ ರನ್ನು ಸಾಹಿತ್ಯ ಕ್ಷೇತ್ರದಿಂದ ಪರಿಷತ್ಗೆ ನಾಮನಿರ್ದೇಶನ ಮಾಡಲಾಗಿದೆ. ಶಿಕ್ಷಣ ಕ್ಷೇತ್ರದಿಂದ ಸಾಬಣ್ಣ ತಳವಾರ, ಬುಡಕಟ್ಟು ಕ್ಷೇತ್ರದಿಂದ ಶಾಂತರಾಂ ಸಿದ್ಧಿಯವರನ್ನು ರಾಜ್ಯಪಾಲ ವಜೂಭಾಯಿ ವಾಲಾ ನಾಮನಿರ್ದೇಶನ ಮಾಡಿದ್ದಾರೆ.
ಕಳೆದ ಪರಿಷತ್ ಚುನಾವಣೆಯಲ್ಲಿ ಎಂ.ಟಿ.ಬಿ ನಾಗರಾಜ್, ಸುನೀಲ್ ವಲ್ಯಾಪುರೆ, ಆರ್.ಶಂಕರ್ ಮತ್ತು ಪ್ರತಾಪ್ ಸಿಂಹ ನಾಯಕ್ ಬಿಜೆಪಿಯಿಂದ ಅವಿರೋಧವಾಗಿ ಆಯ್ಕೆಯಾಗಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?