ಆಲ್ ಇಂಡಿಯಾ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮಿನ್ ಅಥವಾ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಪ್ರತಿನಿಧಿಸುವ ಹೈದರಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಅದರಲ್ಲೂ ಆ ಅಭ್ಯರ್ಥಿ ಮಹಿಳೆ ಎಂಬುದು ಹೈದರಾಬಾದ್ ರಾಜಕೀಯ ಪಡಸಾಲೆಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಆ ಅಭ್ಯರ್ಥಿಯ ಹೆಸರು ಕೊಂಪೆಲ್ಲ ಮಾಧವಿ ಲತಾ. ಕೈಗಾರಿಕೋದ್ಯಮಿಯಾಗಿ, ಆಸ್ಪತ್ರೆಯ ಕಾರ್ಯ ನಿರ್ವಾಹಕಿಯಾಗಿ ಅನುಭವ ಇರುವ ಮಾಧವಿ ಲತಾ ಭರತನಾಟ್ಯ ಕಲಾವಿದೆ ಆಗಿದ್ದಾರೆ.
ಸುಮಾರು 18 ವರ್ಷ ಆರ್ ಎಸ್ ಎಸ್ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಇದರ ಜೊತೆಗೆ ಮುಸ್ಲಿಂ ಸಮುದಾಯದ ಬಡ ಮಹಿಳೆಯರ ಉನ್ನತಿಗೆ ತಮ್ಮದೇ ಆದ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಇದೇ ಕಾರಣಕ್ಕೆ ಅವರನ್ನು ಹೈದರಾಬಾದ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಮಾಧವಿ ಲತಾಗೆ ಟಿಕೆಟ್ ಘೋಷಣೆಯಾಗುವ ಮುನ್ನ ಅವರು ಯಾರು ಎಂಬುದು ಬಹುತೇಕರಿಗೆ ಗೊತ್ತೇ ಇರಲಿಲ್ಲ. ಆದರೆ ಯಾವಾಗ ಹೈದರಾಬಾದ್ ಕ್ಷೇತ್ರದಿಂದ ಮಾಧವಿ ಲತಾ ಹೆಸರು ಘೋಷಣೆಯಾಯಿತೋ, ಅಲ್ಲಿಂದ ಮುಂದೆ ಮಾಧವಿ ಲತಾ ಭಾರಿ ಚರ್ಚೆಗೆ ಕಾರಣರಾಗಿದ್ದಾರೆ.
ಹೈಕಮಾಂಡ್ ತಮಗೆ ಟಿಕೆಟ್ ನೀಡಿದ್ದು, ಅಸಾದುದ್ದೀನ್ ಓವೈಸಿ ವಿರುದ್ಧ ಸೆಣಸಲು ತಾವು ಸಿದ್ಧ ಎಂದು ಮಾಧವಿ ಲತಾ ಹೇಳಿದ್ದಾರೆ. ಹೈದರಾಬಾದ್ ಕ್ಷೇತ್ರದಲ್ಲಿ ಭಯದ ವಾತಾವರಣ ಸೃಷ್ಟಿಸಿ ಚುನಾವಣೆ ನಡೆಸಲಾಗುತ್ತದೆ. ಹಳೆ ಹೈದರಾಬಾದ್ ನಲ್ಲಿ ಮುಸಲ್ಮಾನ್ ಸಮುದಾಯದ ಜನರ ಹೆಚ್ಚಿದೆ ಎಂದು ಹಲವರು ಭಾವಿಸಿದ್ದಾರೆ. ಇದು ತಪ್ಪು. ಕ್ಷೇತ್ರದಲ್ಲಿ ಹಿಂದೂಗಳ ಹೆಸರುಗಳನ್ನು ಮತ ಪಟ್ಟಿಯಿಂದ ಕೈ ಬಿಡಲಾಗುತ್ತದೆ. ಇಲ್ಲಿ ನಿಷ್ಪಕ್ಷಪಾತ ಚುನಾವಣೆ ನಡೆದರೆ ಅಸಾದುದ್ದೀನ್ ಓವೈಸಿ ಮುಖವಾಡ ಬಯಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಕಾಫಿ ಜೊತೆ 1 ಸ್ಪೂನ್ ತುಪ್ಪ ಸೇರಿಸಿ ಕುಡಿರಿ, ಸೊಂಟ ಸುತ್ತ ಇರೋ ಬೊಜ್ಜು ಅದ್ರಂತೆ ಕರಗಿಹೋಗುತ್ತೆ!
ಶ್ರೀರಾಮನ 500 ವರ್ಷಗಳ ವನವಾಸಕ್ಕೆ ಮುಕ್ತಿ, ಪ್ರಧಾನಿ ನರೇಂದ್ರ ಮೋದಿಯಿಂದ ರಾಮರಾಜ್ಯ ನಿರ್ಮಾಣ
ಹೆಂಡತಿ ಗರ್ಭಿಣಿಯಾಗಿದ್ದಾಗ ಪ್ರತಿಯೊಬ್ಬ ಗಂಡಂದಿರು ಮಾಡಲೇಬೇಕಾದ ಕೆಲಸಗಳಿವು!
ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ, ಪಂಚಭೂತಗಳಲ್ಲಿ ಪ್ರಚಂಡ ಕುಳ್ಳ ಲೀನ
ದ್ವಾರಕೀಶ್ ಅಂತಿಮ ದರ್ಶನಕ್ಕೆ ಬಂದ ಯಶ್ ದಂಪತಿ
ಮಂತ್ರಾಲಯ ಭಕ್ತರಿಗೆ ಒಂದೊಳ್ಳೆ ಗಿಫ್ಟ್ ಕೊಟ್ಟಿದ್ರು ಈ ಹಾಸ್ಯನಟ!