ರೈಸಿಂಗ್ ಕನ್ನಡ:
ರವಿ .ಎನ್. ಕೆ.ಆರ್.ಪುರಂ
ಗಲ್ವಾನ್ ನಲ್ಲಿ ಭಾರತೀಯ ಸೈನಿಕರನ್ನು ಕೊಂದ ಚೀನೀಯರ ವಿರುದ್ದ ಭಾರತೀಯರು ಧ್ವನಿ ಎತ್ತಲೇ ಬೇಕಿದೆ . ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಭಾರತೀಯ ಸೇವಾ ಸಮಿತಿ ಇಂದು ಹೂಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಚೀನಾ ವಸ್ತುಗಳನ್ನು ನಿಷೇಧಿಸುವಂತೆ ಆಗ್ರಹಿಸಿತು.
ಪ್ರತಿಭಟನೆಯ ನೇತೃತ್ವವಹಿಸಿದ್ದ ಸಂಘಟನೆಯ ಅಧ್ಯಕ್ಷ ಹೆಚ್ ರಾಮಚಂದ್ರ ಮಾತನಾಡಿ, ಗಲ್ವಾನ್ ನಲ್ಲಿ ಭಾರತೀಯ ಸೈನಿಕರನ್ನು ನಿರ್ದಾಕ್ಷಿಣ್ಯವಾಗಿ ಕೊಂದ ಚೀನಾ ದೇಶದ ನಿರ್ಮಿಸಿರುವ ವಸ್ತುಗಳನ್ನು ಬಳಕೆ ಮಾಡಬಾರದು ಹಾಗೂ ಅವುಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿದರು. ನಮ್ಮ ಸೈನಿಕರ ವೀರ ಮರಣಕ್ಕೆ ಪ್ರತೀಕಾರ ತೀರಿಸಲೇ ಬೇಕಿದೆ. ಸ್ವದೇಶಿ ವಸ್ತುಗಳನ್ನು ಬಳಕೆ ಮಾಡುವ ಮೂಲಕ ಚೀನಾ ಆರ್ಥಿಕತೆ ಕುಸಿಯುವಂತೆ ಮಾಡಬೇಕಿದೆ. ಹೂಡಿಯಿಂದ ,ಕೆಆರ್ ಪುರ ತಾಲೂಕು ಕಚೇರಿವರೆಗೂ ಭಾರತೀಯ ಸೇವಾ ಸಮಿತಿಯ ಕಾರ್ಯಕರ್ತರು ಜಾಥಾ ನಡೆಸುವ ಮುಖಾಂತರ ಚೀನಾ ವಸ್ತುಗಳನ್ನು ಬಳಸದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಇದೇ ಸಂದರ್ಭದಲ್ಲಿ ವೀರ ಮರಣವನ್ನಪ್ಪಿದ ಸೈನಿಕರಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಯಿತು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?