Connect with us

ಆರೋಗ್ಯ

ಮೆದುಳು ಆರೋಗ್ಯ ಸೇವೆ ದೇಶಕ್ಕೆ ಮಾದರಿಯಾಗಲಿದೆ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಸೇವೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ನಿಮ್ಹಾನ್ಸ್ ಸಂಸ್ಥೆಯ ಸಹಯೋಗದಲ್ಲಿ ರಾಜ್ಯದ 33 ಸರ್ಕಾರಿ ಆಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಕೇಂದ್ರಗಳನ್ನ ತೆರೆಯಲಾಗಿದೆ.‌ ಈ ಮೂಲಕ ನಿಮ್ಹಾನ್ಸ್ ಮೇಲಿನ ಒತ್ತಡ ಕಡಿಮೆ ಮಾಡುವುದರೊಂದಿಗೆ, ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿಯೇ ಮೆದುಳು ಹಾಗೂ ನರ ಸಮಸ್ಯೆಗಳನ್ನ ಹೊಂದಿರುವ ರೋಗಿಗಳಿಗೆ ಆರೋಗ್ಯ ಸೇವೆ ಒದಗಿಸುವತ್ತ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ.

ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಇಂದು ನೂತನ ಮೆದುಳು ಆರೋಗ್ಯ ಕೇಂದ್ರಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ದೇಶದಲ್ಲಿ ಇದೊಂದು ಮಾದರಿ ಕಾರ್ಯಕ್ರಮವಾಗಲಿದೆ ಎಂದರು. ಮೆದುಳು ಆರೋಗ್ಯದ ವಿಚಾರದಲ್ಲಿ ಹೆಚ್ಚು ಒತ್ತು ನೀಡಬೇಕಾಗಿದೆ. ಕರ್ನಾಟಕ ಸರ್ಕಾರ ಹಾಗೂ ಆರೋಗ್ಯ ಇಲಾಖೆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ.

ಮೆದುಳು ಹಾಗೂ ನರ ಸಮಸ್ಯೆಗಳಿಗೆ ರಾಜ್ಯದ ಜನರು ಬೆಂಗಳೂರಿನ ನಿಮ್ಹಾನ್ಸ್ ಗೆ ಆಗಮಿಸಬೇಕಾಗಿತ್ತು. ನಿಮ್ಹಾನ್ಸ್ ಮೇಲೆ ಹೆಚ್ಚಿನ ಒತ್ತಡ ಇತ್ತು‌. ಈ ಒತ್ತಡವನ್ನ ಕಡಿಮೆ ಮಾಡುವುದರ ಜೊತೆಗೆ, ಜಿಲ್ಲಾ ಮಟ್ಟದಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡಲು 33 ಮೆದುಳು ಆರೋಗ್ಯ ಕೇಂದ್ರಗಳನ್ನ ತೆರೆಯಲಾಗಿದೆ. ನಿಮ್ಹಾನ್ಸ್ ಸಹಯೋಗ ಹಾಗೂ ಸಲಹೆಗಳೊಂದಿಗೆ ಈ ಕೇಂದ್ರಗಳಲ್ಲಿ ಇನ್ಮುಂದೆ ಚಿಕಿತ್ಸೆ ದೊರೆಯಲಿದೆ ಎಂದರು. ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ನಿಮ್ಹಾನ್ಸ್ ತಜ್ಞ ವೈದ್ಯರ ಸಲಹೆ ಪಡೆದುಕೊಂಡು ಜಿಲ್ಲಾ ಕೇಂದ್ರಗಳಲ್ಲಿಯೇ ಚಿಕಿತ್ಸೆ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಪಾರ್ಶ್ವವಾಯು, ಅಪಸ್ಮಾರ, ಮರೆವಿನ ಕಾಯಿಲೆ ಮತ್ತು ತಲೆನೋವು ಸೇರಿದಂತೆ ನರವೈಜ್ಞಾನಿಕ ಕಾಯಿಲೆಗಳ ಹೊರ ಭಾರತದಲ್ಲಿ ಹೆಚ್ಚಾಗುತ್ತಿದೆ. ಇವು ಮರಣ ಮತ್ತು ಅಂಗವೈಕಲ್ಯಕ್ಕೆ ಪ್ರಮುಖ ಕಾರಣವಾಗಿವೆ. ಇದನ್ನು ಸಮರ್ಥವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಆರೋಗ್ಯ ಕೇಂದ್ರಗಳು ಸಹಕಾರಿಯಾಗಲಿವೆ. ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಪಿಸಿಯೋಥೆರಪಿಸ್ಟ್, ಸ್ಪೀಚ್ ಥೆರಪಿಸ್ಟ್, ಮನಶ್ಯಾಸ್ತ್ರಜ್ಞರು, ನರ್ಸ್ ಮತ್ತು ಜಿಲ್ಲಾ ಸಂಯೋಜಕರನ್ನು ಒಳಗೊಂಡಿರುತ್ತದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ