Featured
ಮಂಗಳವಾರ ರಾತ್ರಿಯಿಂದ ಬೆಂಗಳೂರು ಲಾಕ್ಡೌನ್..! ಜುಲೈ 23ರ ತನಕ ಫುಲ್ ಬಂದ್.. ಬಂದ್..!

ರೈಸಿಂಗ್ ಕನ್ನಡ:
ಬೆಂಗಳೂರು:
ಕೊರೊನಾ ಮಹಮಾರಿ ತಡೆಯಲು ಕರ್ನಾಟಕ ಸರ್ಕಾರ ಕಟ್ಟ ಕಡೆಯ ಅಸ್ತ್ರವನ್ನು ಜಾರಿಗೆ ತಂದಿದೆ. ಬೆಂಗಳೂರಿನಲ್ಲಿ ಒಂದುವಾರಗಳ ಕಾಲ ಲಾಕ್ಡೌನ್ ಹೇರಿದೆ. ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರಕ್ಕೆ ಲಾಕ್ಡೌನ್ ಅನ್ವಯ ಆಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಯಾವುದೇ ಲಾಕ್ಡೌನ್ ಇರುವುದಿಲ್ಲ.
ಇತ್ತೀಚಿಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಬರುವ ಮಂಗಳವಾರ, ಜುಲೈ 14ರ ರಾತ್ರಿ 8:00 ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗುವುದು. (1/2)— B.S. Yediyurappa (@BSYBJP) July 11, 2020
ಶನಿವಾರದಿಂದ ಸೋಮವಾರ ಬೆಳಗ್ಗಿನ ತನಕ ರಾಜ್ಯ ಲಾಕ್ಡೌನ್..!
ಸರ್ಕಾರದ ಹಿಂದಿನ ಆದೇಶದಂತೆ ಶನಿವಾರ ರಾತ್ರಿ 8ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆ ತನಕ ಇಡೀ ರಾಜ್ಯದಲ್ಲಿ ಲಾಕ್ಡೌನ್ ಇರುತ್ತದೆ. ಮಂಗಳವಾರ ರಾತ್ರಿ 8 ಗಂಟೆಯಿಂದ ಜುಲೈ 23ರ ತನಕ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಲಾಕ್ಡೌನ್ ಆಗಲಿದೆ. ಹೀಗಾಗಿ ಬೆಂಗಳೂರಿನಿಂದ ಹೊರಹೋಗುವವರು ಮತ್ತು ಒಳಬರುವವರು ಮಂಗಳವಾರ ರಾತ್ರಿ 8 ಗಂಟೆ ಒಳಗೆ ಕೆಲಸ ಮುಗಿಸಿಕೊಳ್ಳಬೇಕಿದೆ. ಈ ಅವಧಿಯಲ್ಲಿ ಅಗತ್ಯ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದ್ದು, ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು.
ಈಗಾಗಲೇ ನಿಗದಿಯಾಗಿರುವಂತೆ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ನಡೆಸಲಾಗುವುದು. ಲಾಕ್ ಡೌನ್ ಸಂದರ್ಭದಲ್ಲಿ ಜನರು ಯಾವುದೇ ಆತಂಕಕ್ಕೆ ಒಳಗಾಗದೇ ಸಹಕರಿಸಲು ಕೋರಿದೆ. (2/2)— B.S. Yediyurappa (@BSYBJP) July 11, 2020
ಇವು ಇರುತ್ತೆ..!
ಲಾಕ್ಡೌನ್ ಸಮಯದಲ್ಲಿ ಆಸ್ಪತ್ರೆಗಳು, ಮೆಡಿಕಲ್ಗಳು, ದಿನಸಿ, ಹಾಲು ಮತ್ತು ತಕಾರಿ ಸೇರಿದಂತೆ ಅಗತ್ಯ ಸೇವೆಗಳು ಲಭ್ಯವಿರಲಿದೆ. ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೊತ್ತರ ಪರೀಕ್ಷೆಗಳು ನಡೆಯಲಿವೆ. ಲಾಕ್ ಡೌನ್ ನಿಯಮಗಳನ್ನು ಪಾಲಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಮತ್ತು ಮಾಸ್ಕ್ ಧರಿಸಿ ಲಾಕ್ಡೌನ್ ವೇಳೆ ಅಗತ್ಯ ಸೇವೆಗಳನ್ನು ಬಳಸಿಕೊಳ್ಳಬಹುದು,
ಇವು ಇರಲ್ಲ..!
ಸಾರ್ವಜನಿಕ ಸಾರಿಗೆಯಾದ ಬಿಎಂಟಿಸಿ ಸೇವೆ, ಬಾರ್ ಅಂಡ್ ರೆಸ್ಟೋರೆಂಟ್, ವೈನ್ಶಾಪ್ ಸೇರಿದಂತೆ ಹೊಟೇಲ್ ಇರುವುದಿಲ್ಲ. ಟ್ಯಾಕ್ಸಿ ಸೇವೆಗಳು, ಬೈಕ್ ಸೇವೆಗಳು ಕೂಡ ಲಭ್ಯವಿರುವುದಿಲ್ಲ. ಈ ಲಾಕ್ ಡೌನ್ ಜುಲೈ 14ಕ್ಕೆ ಆರಂಭವಾಗಿ ಜುಲೈ 23ರ ತನಕ ಇರಲಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮಾತ್ರ ಇದು ಅನ್ವಯ ಆಗಲಿದೆ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?