Featured
ಕರಸೇವಕರಾಗಿದ್ದ ದಿನಗಳನ್ನ ನೆನೆದ ಬಿಎಸ್ವೈ! – ಹೋರಾಟ ಕ್ಷಣಗಳ ಫೋಟೋಗಳು ವೈರಲ್..!

ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :
ರಾಮಮಂದಿರದ ದಶಕಗಳ ಕನಸು ನನಸಾಗಿದೆ. ಇಡೀ ದೇಶವೇ ಎದುರು ನೋಡುತ್ತಿದ್ದ ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವಾಗಿದೆ. ಪ್ರಧಾನಿ ಮೋದಿ, ಶಿಲಾನ್ಯಾಸ ಕಾರ್ಯವನ್ನ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರು ಅಯೋಧ್ಯೆ ಹೋರಾಟದ ತಮ್ಮ ಹಳೆಯ ನೆನಪುಗಳನ್ನ ಮೆಲುಕು ಹಾಕಿದ್ದಾರೆ.
ತಾವು ಕರಸೇವಕರಾಗಿ ಸೇವೆ ಸಲ್ಲಿಸುತ್ತಿದ್ದ ದಿನಗಳನ್ನ ನೆನೆದಿರು ಬಿಎಸ್ವೈ ಟ್ವೀಟ್ ಮಾಡಿ. ಅಯೋಧ್ಯೆಯ ಶ್ರೀ ರಾಮಜನ್ಮಭೂಮಿಯಲ್ಲಿಯೇ ಶ್ರೀ ರಾಮಲಲ್ಲಾನ ದಿವ್ಯ, ಭವ್ಯ ಮಂದಿರ ನಿರ್ಮಾಣವಾಗಬೇಕು ಎನ್ನುವ ಬಿಜೆಪಿಯ ಬದ್ಧತೆ ಹಿಂದೆ ನಿರಂತರ ಹೋರಾಟವಿದೆ,ತ್ಯಾಗ ಬಲಿದಾನಗಳಿವೆ. 
ಇಂದು ರಾಮ ಮಂದಿರ ನಿರ್ಮಾಣದ ಭೂಮಿಪೂಜೆಯ ಧನ್ಯತೆಯ ಕ್ಷಣಗಳಲ್ಲಿ, ಕರಸೇವೆಯ ಆ ದಿನಗಳು ಮತ್ತೆ ನೆನಪಾಗುತ್ತಿದೆ. ಅಂದಿನ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
Advertisement
Continue Reading
Advertisement
You may like
Click to comment
















