ವಿಜಯಪುರ :
ರೈಸಿಂಗ್ ಕನ್ನಡ :
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ .ಆರ್.ಹಳ್ಳಿ ಬಳಿ ಖಾಸಗಿ ಬಸ್ ಅಗ್ನಿಗಾಹುತಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಐವರು ವಿಜಯಪುರದವರೆಂದು ಗುರುತಿಸಲಾಗಿದೆ.
ಬೆಂಕಿಗಾಹುತಿಯಾದ ಬಸ್ ನಿನ್ನೆ ರಾತ್ರಿ 9 ಗಂಟೆಗೆ ವಿಜಯಪುರದಿಂದ ಹೊರಟಿತ್ತು. ಟಿಕೆಟ್ ಬುಕ್ಕಿಂಗ್ ಏಜೆನ್ಸಿ ಮಾಹಿತಿ ಪ್ರಕಾರ ಬಸ್ ನಲ್ಲಿ 29 ಪ್ರಯಾಣಿಕರು, 2 ಚಾಲಕರು ಹಾಗೂ 1 ಕ್ಲೀನರ್ ಇದ್ದರೆಂದು ಮಾಹಿತಿ ತಿಳಿದು ಬಂದಿದೆ.
ಕುಕ್ಕೆಶ್ರೀ ಟ್ರಾವೆಲ್ಸ್ ಹೆಸರಿನ ಬಸ್
ಬೆಂಗಳೂರು ಮೂಲದ ದೇವರಾಜ್ ಎಂಬುವವರ ಒಡೆತನದ ಟ್ರಾವೆಲ್ಸ್ ಇದಾಗಿದ್ದು, ವಿಜಯಪುರದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಬೆಂಕಿ ಅವಘಡದಲ್ಲಿ ಐವರು ಸಜೀವ ದಹನವಾಗಿದ್ದು, ಇಬ್ಬರು ಮಹಿಳೆಯರು ಮೂವರು ಮಕ್ಕಳು ಸಾವನಪ್ಪಿದ್ದಾರೆ.
ವಿಜಯಪುರ ಮೂಲದ ಮೃತರು ಶಿಲಾ (33) ಸ್ಪರ್ಷಾ (8) ಸಮೃದ್ಧ (5) ಕವಿತಾ (29) ನಿಶ್ಚಿತಾ (3)ಮೃತರು ಎಂದು ವಿಜಯಪುರ ಎಸ್ಪಿ ಅನುಪಮ ಅಗ್ರವಾಲ್ ಮಾಹಿತಿ ನೀಡಿದ್ದಾರೆ. ಬಸ್ಸಿನಲ್ಲಿ ಸಂಪೂರ್ಣ ಸುಟ್ಟು ಕರಕಲಾಗಿರುವ ಐವರ ತಲೆ ಬುರಡೆಗಳು ಪತ್ತೆಯಾಗಿತ್ತು.ಅವಘಡದಲ್ಲಿ 27 ಮಂದಿ ಗಾಯಗೊಂಡಿದ್ದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?