Connect with us

Featured

#ByElection : ಶರತ್​ ಬಚ್ಚೇಗೌಡಗೆ ಬಿಜೆಪಿ ಟಿಕೆಟ್ ಇಲ್ಲ : MTB ನಾಗರಾಜ್​ ವಿರುದ್ಧ ಬಂಡಾಯ ಅಭ್ಯರ್ಥಿ ಆಗ್ತಾರಾ ಬಚ್ಚೇಗೌಡರ ಮಗ..?

ಬೆಂಗಳೂರು : ಉಪ ಚುನಾವಣಾ ಕಣ ರಂಗೇರಿದೆ. ಅನರ್ಹ ಶಾಸಕರಿಗೆ ಅಥವಾ ಅವರ ಕುಟುಂಬದವರಿಗೆ ಟಿಕೆಟ್​ ನೀಡಲು ಬಿಜೆಪಿ ನಿರ್ಧರಿಸಿದಂತೆ ಕಾಣ್ತಿದೆ. ಇತ್ತ, ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಈವರೆಗೆ ಬಿಜೆಪಿ ಅಭ್ಯರ್ಥಿಗಳಾಗಿದ್ದವರು ರೆಬೆಲ್​ಗಳಾಗೋ ಲಕ್ಷಣಗಳು ಕಾಣ್ತಿವೆ. ಈಗಾಗಲೇ ಹೊಸಕೋಟೆ ಕ್ಷೇತ್ರ ರಣರಂಗದಂತೆ ಕಾಣ್ತಿದೆ.

ಕಾಂಗ್ರೆಸ್​ನಲ್ಲಿದ್ದ ಎಂಟಿಬಿ ನಾಗರಾಜ್​ಗೆ ಮೊದಲಿನಿಂದಲೂ ಪೈಪೋಟಿ ನೀಡಿ, ಬಿಜೆಪಿಯನ್ನ ಕಟ್ಟಿ ಬೆಳೆಸಿದ್ದು ಬಚ್ಚೇಗೌಡ. ಬಚ್ಚೇಗೌಡ ಚಿಕ್ಕಬಳ್ಳಾಪುರ ಸಂಸದರಾದ ಬಳಿಕ ಅವರ ಪುತ್ರ ಶರತ್ ಬಚ್ಚೇಗೌಡ ಕೂಡ ಎಂಟಿಬಿ ನಾಗರಾಜ್​ ಎದುರಾಳಿಯಾಗಿ ಕಳೆದ ಚುನಾವಣೆಯಲ್ಲಿ ಕಣಕ್ಕೆ ಇಳಿದಿದ್ರು. ಆದ್ರೀಗ, ಶರತ್ ಬಚ್ಚೇಗೌಡಗೆ ಬಿಜೆಪಿ ಟಿಕೆಟ್ ನೀಡಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟವಾಗಿ ಹೇಳಿದ್ದಾರಂತೆ.

ಎಂಟಿಬಿ ನಾಗರಾಜ್​ ನಮ್ಮನ್ನೇ ನಂಬಿ ಬಂದಿದ್ದಾರೆ. ಅವರಿಂದಾಗಿಯೇ ನಾವು ಇವತ್ತು ಅಧಿಕಾರದ ಚುಕ್ಕಾಣಿ ಹಿಡಿದಿದ್ದೇವೆ. ಹೀಗಾಗಿ, ನಂಬಿದವರಿಗೆ ಮೋಸ ಮಾಡಲು ಆಗಲ್ಲ. ಎಂಟಿಬಿಗೆ ಹೊಸಕೋಟೆ ಟಿಕೆಟ್​ ಖಚಿತ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಶರತ್ ಬಚ್ಚೇಗೌಡ ಹಾಗೂ ಬೆಂಬಲಿಗರಿಗೆ ಯಡಿಯೂರಪ್ಪ ಈ ರೀತಿ ಹೇಳಿರೋದು ಆಕ್ರೋಶ ಹಾಗೂ ಬೇಸರಕ್ಕೆ ಕಾರಣವಾಗಿದೆ.

ಇದರಿಂದಾಗಿ ಶರತ್ ಬಚ್ಚೇಗೌಡ ಮುಂದೇನು ಮಾಡಬೇಕು ಅನ್ನೋದು ತೋಚದೆ ಕಂಗಾಲಾಗಿದ್ದಾರೆ. ಯಾಕಂದ್ರೆ, ಬಚ್ಚೇಗೌಡ ಬಿಜೆಪಿಯ ಸಂಸದರು. ಹೀಗಾಗಿ, ಶರತ್ ಬಚ್ಚೇಗೌಡ ಬಂಡಾಯ ಅಭ್ಯರ್ಥಿ ಆಗ್ತಾರಾ..? ಅಥವಾ ಕಾಂಗ್ರೆಸ್​ನಿಂದ ಕಣಕ್ಕೆ ಇಳೀತಾರಾ ಗೊತ್ತಿಲ್ಲ. ಈಗಾಗ್ಲೇ ಸಿದ್ದರಾಮಯ್ಯ ಅವರ ಜೊತೆ ಒಂದು ಸುತ್ತಿನ ಮಾತುಕತೆಯನ್ನೂ ಶರತ್ ಬಚ್ಚೇಗೌಡ ಮುಗಿಸಿದ್ದಾರೆ. ಆದ್ರೆ, ಬಚ್ಚೇಗೌಡರು ಇದಕ್ಕೆ ಒಪ್ತಾರಾ..? ಬಿಜೆಪಿ ಹೈಕಮಾಂಡ್​ ಯಾವ ನಿರ್ಧಾರ ಕೈಗೊಳ್ಳುತ್ತೆ ಅನ್ನೋದು ಕುತೂಹಲ ಮೂಡಿಸಿದೆ.

Advertisement

ಇತ್ತ ಶರತ್​ ಬಚ್ಚೇಗೌಡಗೆ ಮಾತ್ರ ಹೊಸಕೋಟೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದಾರೆ. ಇವತ್ತು ಸಿಎಂ ಯಡಿಯೂರಪ್ಪ ಮನೆ ಮುತ್ತಿಗೆ ಯತ್ನವೂ ನಡೆದಿದೆ. ಫೇಸ್​ಬುಕ್​ನಲ್ಲಿ, ಟ್ವಿಟ್ಟರ್​ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ಶರತ್ ಬಚ್ಚೇಗೌಡ ಪರ ಅಭಿಯಾನ ಶುರುವಾಗಿದೆ. ಅಲ್ಲದೆ, ಎಂಟಿಬಿ ನಾಗರಾಜ್ ಅವರನ್ನ ಬಿಜೆಪಿಗರೇ ಸೋಲಿಸೋದಾಗಿ ಶರತ್ ಬಚ್ಚೇಗೌಡ ಅಭಿಮಾನಿಗಳು ಪೋಸ್ಟ್ ಮಾಡ್ತಿದ್ದಾರೆ.

ಹೀಗಾಗಿ, ಶರತ್ ಬಚ್ಚೇಗೌಡ ಮುಂದಿನ ನಡೆ ಏನು ಅನ್ನೋದು ಸಾಕಷ್ಟು ಕುತೂಹಲ ಮೂಡಿಸಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ